ಬ್ರೇಕಿಂಗ್ ನ್ಯೂಸ್
26-02-21 12:02 pm Source: MYKHEL ಕ್ರೀಡೆ
ಗೋವಾ: ಹೀರೋ ಇಂಡಿಯನ್ ಸೂಪರ್ ಲೀಗ್ ನ ಕಳೆದ ಎಂಟು ಪಂದ್ಯಗಳಲ್ಲಿ ಸೋಲು ಕಂಡಿರದ ನಾರ್ಥ್ ಈಸ್ಟ್ ಯುನೈಟೆಡ್ ತಂಡ, ಕಠಿಣ ಪಂದ್ಯಗಳಲ್ಲೂ ಜಯ ಗಳಿಸಿ ಅದ್ಭುತ ಪ್ರದರ್ಶನ ತೋರಿದೆ. ಕೇರಳ ಬ್ಲಾಸ್ಟರ್ಸ್ ವಿರುದ್ಧದ ಪಂದ್ಯದಲ್ಲಿ ಡ್ರಾ ಗಳಿಸಿದರೂ ಪ್ಲೇ ಆಫ್ ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ಖಾಲೀದ್ ಜಮೀಲ್ ಕೋಚ್ ಜವಾಬ್ದಾರಿ ವಹಿಸಿಕೊಂಡಾಗಿನಿಂದ ನಾರ್ಥ್ ಈಸ್ಟ್ ಉತ್ತಮ ಪ್ರದರ್ಶಶನ ತೋರುತ್ತಿರುವುದು ಗಮನಾರ್ಹ.
ಕೇರಳ ತಂಡ ಕೊನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಆ ತಂಡವನ್ನು ಹಗುರವಾಗಿ ಪರಿಗಣಿಸಬಾರದು ಎಂದು ಜಮೀಲ್ ತಮ್ಮ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. "ಕೇರಳ ಬ್ಲಾಸ್ಟರ್ಸ್ ತಂಡ ಬಲಿಷ್ಠ ಮತ್ತು ಉತ್ತಮ ತಂಡವಾಗಿದೆ. ಅವರಲ್ಲಿ ಪ್ರತಿಭಾವಂತ ಆಟಗಾರಿದ್ದಾರೆ. ನಾವು ಅದಕ್ಕೆ ಸಜ್ಜಾಗಿರಬೇಕು. ನಾವು ಈ ಪಂದ್ವಯವನ್ನು ಹಗುರವಾಗಿ ಪರಿಗಣಿಸಬಾರದು, ನಾವು ಹೋರಾಟ ನೀಡಬೇಕು,' ಎಂದು ಹೇಳಿದ್ದಾರೆ.
ಜಯಕ್ಕಾಗಿಯೇ ಸಿದ್ಧತೆ ನಡೆಸಿದ್ದೇವೆ
ನಾರ್ಥ್ ಈಸ್ಟ್ ಯುನೈಟೆಡ್ ತಂಡಕ್ಕೆ ಕೇವಲ ಒಂದು ಅಂಕ ಬೇಕಾಗಿರಬಹುದು, ಆದರೆ ಕೇವಲ ಅದಕ್ಕೆ ಮಾತ್ರ ಸೀಮಿತವಾಗಿರಬಾರದು ಎಂದು ಜಮೀಲ್ ಹೇಳಿದ್ದಾರೆ, "ಏನಾದರೂ ಆಗಲಿ ಎಂದು ನಾವು ಯೋಚಿಸುವುದಿಲ್ಲ. ನಾವು ಜಯಕ್ಕಾಗಿಯೇ ಸಿದ್ಧತೆ ನಡೆಸಿದ್ದೇವೆ. ಏನಾದರು ಆಗಲಿ ಎಂಬುದಕ್ಕೆ ಈಗ ಅವಕಾಶ ಇಲ್ಲ. ಉತ್ತಮ ರೀತಿಯಲ್ಲಿ ಹೋರಾಟ ನೀಡಿ ಮೂರು ಅಂಕಗಳನ್ನು ಗಳಿಸುವುದು ನಮ್ಮ ಗುರಿ," ಎಂದು ಜಮೀಲ್ ಹೇಳಿದ್ದಾರೆ.
ಅಜೇಯರಾಗಿರುವುದು ಗುರಿಯಲ್ಲ
ಜಮೀಲ್ ಹಿಂದೆಯೂ ಯಶಸ್ಸನ್ನು ಕಂಡ ಕೋಚ್. ಜಯ ಅಥವಾ ಡ್ರಾ ಗಳಿಸಿ ಒಂಬತ್ತು ಪಂದ್ಯಗಳಲ್ಲಿ ಅಜೇಯರಾಗಿರುವುದು ಗುರಿಯಲ್ಲ. ಪ್ಲೇ ಆಫ್ ತಲುಪಿದ ಮೊದಲ ಭಾರತೀಯ ಮ್ಯಾನೇಜರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಬೇಕು. "ಐಎಸ್ ಎಲ್ ದೊಡ್ಟ ಸವಾಲು ಇದ್ದಂತೆ. ಇಲ್ಲಿ ನಾವು ಸಾಮಾನ್ಯವಾಗಿ ಉತ್ತಮ ತಂಡಗಳೊಂದಿಗೆ ಇರುತ್ತೇವೆ. ಅಲ್ಲಿ ಉತ್ತಮ ಆಟಗಾರರು ಮತ್ತು ಕೋಚ್ ಇರುತ್ತಾರೆ, ಆದ್ದರಿಂದ ಇದು ವಿಭಿನ್ನವಾದ ಸವಾಲು," ಎಂದರು.
ಕೇರಳ ಜಯ ಗಳಿಸಿರಲಿಲ್ಲ
ಕಳೆದ ಏಳು ಪಂದ್ಯಗಳಲ್ಲಿ ಕೇರಳ ಜಯ ಗಳಿಸಿರಲಿಲ್ಲ. ತಂಡ ಈಗ ಕೇವಲ ಗೌರವಕ್ಕಾಗಿ ಆಡುತ್ತಿದೆ. ಇಶ್ಫಾಕ್ ಅಹಮ್ಮದ್ ಅವರು ಋತುವನ್ನು ಮುಗಿಸುವ ಉದ್ದೇಶದಿಂದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. " ಪಂದ್ಯಗಳು ಪ್ರತಿಯೊಬ್ಬರಿಗೂ ಸಮಾನವಾಗಿರುತ್ತದೆ. ನಮಗೆ ಪಂದ್ಯ ಗೆಲ್ಲಲೇಬೇಕಾಗಿದೆ. ಅವರಿಗೂ ಗೆಲ್ಲಬೇಕಾಗಿದೆ. ಅವರಿಗೆ ಗೆಲ್ಲಬೇಕಾದ ಒತ್ತಡವಿದೆ. ನಮಗೆ ಗೆದ್ದು ಋತುವನ್ನು ಗೌರವದೊಂದಿಗೆ ಮುಗಿಸಲು ಮತ್ತೊಂದು ಅವಕಾಶ," ಎಂದರು. "ನಾವು ಅವರು ನಮ್ಮ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಬಗ್ಗೆ ಯೋಚಿಸುವುದಿಲ್ಲ, ನಾವು ನಮಗಾಗಿ ಏನು ಮಾಡಬೇಕೆಂಬುದರ ಬಗ್ಗೆ ಯೋಚಿಸುತ್ತೇವೆ," ಎಂದರು.
This News Article is a Copy of MYKHEL
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm