ಬ್ರೇಕಿಂಗ್ ನ್ಯೂಸ್
27-02-21 10:40 am Source: MYKHEL ಕ್ರೀಡೆ
ಭಾರತದ ಆಥ್ಲೆಟಿಕ್ ತಾರೆ ಹಿಮಾದಾಸ್ ಅವರನ್ನು ಅಸ್ಸಾಂ ಸರ್ಕಾರ ಉಪ ಪೋಲೀಸ್ ವರಿಷ್ಠಾಧಿಕಾರಿಯನ್ನಾಗಿ ಶುಕ್ರವಾರ ನೇಮಕ ಮಾಡಿದೆ. ಈ ತಿಂಗಳ ಆರಂಭದಲ್ಲಿ ಹಿಮಾದಾಸ್ ಅವರನ್ನು DSP ಆಗಿ ನೇಮಕ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಹೀಗಾಗಿ ಇಂದು ಹಿಮಾದಾಸ್ಗೆ ಅಧಿಕೃತವಾಗಿ ನೇಮಕಗೊಳಿಸಿದೆ.
ಅಸ್ಸಾಂ ಪೊಲೀಸ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಇದರಲ್ಲಿ ಅಸ್ಸಾಂ ಪೊಲೀಸ್ನ ಡಿಜಿಪಿ ಆಗಿರುವ ಭಾಸ್ಕರ್ ಜ್ಯೋತಿ ಮಹಾಂತ ಹೀಮಾದಾಸ್ ಅವರನ್ನು ಗೌರವಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಸ್ಸಾಂ ಮುಖ್ಯ ಮಂತ್ರಿ ಸರ್ಬಾನಂದ ಸೋನೋವಾಲ್ ಕೂಡ ಹಾಜರಿದ್ದರು.
ಈ ಬಗ್ಗೆ ಅಸ್ಸಾಂ ಸಿಎಂ ಟ್ವೀಟ್ ಮಾಡಿದ್ದು, "ಇದು ರಾಜ್ಯಕ್ಕೆ ಮತ್ತು ಹಿಮಾದಾಸ್ ಅವರಿಗೆ ಹೆಮ್ಮೆಯ ದಿನವಾಗಿದೆ. ಹಿಮಾ ದಾಸ್ ಅವರ ನೇಮಕವು ದೇಶದ ಯುವಜನರಿಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಉತ್ತೇಜನ ನೀಡುತ್ತದೆ" ಎಂದು ಹೇಳಿದ್ದಾರೆ.

ಮಾಜಿ ಕೇಂದ್ರ ಕ್ರೀಡಾ ಸಚಿವರೂ ಆಗಿರುವ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ "ಯುವ ಪೀಳಿಗೆಗೆ ಕ್ರೀಡೆಗಳನ್ನು ಭರವಸೆಯ ವೃತ್ತಿಜೀವನವನ್ನಾಗಿ ಮಾಡಲು ರಾಜ್ಯ ಸರ್ಕಾರ ಸಮಗ್ರ ಕ್ರೀಡಾ ನೀತಿಯನ್ನು ಅಳವಡಿಸಿಕೊಂಡಿದೆ. ರಾಜ್ಯ ಸರ್ಕಾರವು ಸ್ಪ್ರಿಂಟರ್ ಹಿಮಾ ದಾಸ್ ಅವರನ್ನು ಅಸ್ಸಾಂ ಪೊಲೀಸರಲ್ಲಿ ಡಿಎಸ್ಪಿಯಾಗಿ ನೇಮಕ ಮಾಡಿದೆ, ಏಕೆಂದರೆ ಅವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ರಂಗದಲ್ಲಿ ತಮ್ಮ ಸಾಧನೆಗಳಿಂದ ರಾಜ್ಯವನ್ನು ಹೆಮ್ಮೆಪಡುತ್ತಾರೆ" ಎಂದು ಅವರು ಹೇಳಿದರು.
ಇನ್ನು ಈ ಬಗ್ಗೆ ಹಿಮಾದಾಸ್ ಕೂಡ ಟ್ವಿಟ್ಟರ್ ಖಾತೆಯಲ್ಲಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ. "ನನ್ನ ಜೀವನದ ಅತ್ಯಂತ ದೊಡ್ಡ ಕನಸೊಂದು ಇಂದು ನನಸಾಗೊರುವುದಕ್ಕೆ ನಾನು ತುಂಬಾ ಸಂತಸಗೊಂಡಿದ್ದೇನೆ. ಅಸ್ಸಾಂ ಪೋಲೀಸ್ನಲ್ಲಿ ಡಿಎಸ್ಪಿ ಆಗಿರಲು ನಾನು ಹೆಮ್ಮೆ ಪಡುತ್ತೇನೆ. ಈ ಗೌರವವನ್ನು ನಾನು ಹೆಮ್ಮೆಯಿಂದಲೇ ಸ್ವೀಕರಿಸುತ್ತೇನೆ" ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm