ಬ್ರೇಕಿಂಗ್ ನ್ಯೂಸ್
01-03-21 10:54 am Source: MYKHEL ಕ್ರೀಡೆ
ಗೋವಾ, ಫೆಬ್ರವರಿ 28: ಗೋವಾಕ್ಕೆ ಗೋಲು ಗಳಿಸಬೇಕಾಗಿರಲಿಲ್ಲ. ಹೈದರಾಬಾದ್ ಗೆ ಸೆಮಿ ಫೈನಲ್ ತಲುಪಲು ಗೋಲು ಗಳಿಸಬೇಕಾಗಿತ್ತು. ಆದರೆ ಹೈದರಾಬಾದ್ ನ ಆಟ ನಡೆಯಲಿಲ್ಲ. ಗೋವಾ ಗೋಲು ಗಳಿಸದೆ ಸೆಮಿಫೈನಲ್ ತಲುಪಿದೆ. ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಇದುವರೆಗೂ ದಿಟ್ಟ ಹೋರಾಟವನ್ನು ನೀಡಿ ಸೆಮಿಫೈನಲ್ ತಲಪುವ ಫೇವರಿಟ್ ತಂಡವೆನಿಸಿದ್ದ ಹೈದರಾಬಾದ್ ಎಫ್ ಸಿ ಕೊನೆಯ ಪಂದ್ಯದಲ್ಲಿ ಜಯ ಕಾಣುವಲ್ಲಿ ವಿಫಲವಾಗಿದೆ.
ಪರಿಣಾಮ ಒಂದು ಅಂಕದ ಅಗತ್ಯದಲ್ಲಿದ್ದ ಗೋವಾ ಎಫ್ ಸಿ ಹೀರೋ ಇಂಡಿಯನ್ ಸೂಪರ್ ಲೀಗ್ ನ ಪ್ಲೇ ಆಫ್ ತಲುಪಿದೆ. ಇದರೊಂದಿಗೆ ಎಟಿಕೆ ಮೋಹನ್ ಬಾಗನ್, ಮುಂಬೈ ಸಿಟಿ ಎಫ್ ಸಿ, ನಾರ್ಥ್ ಈಸ್ಟ್ ಯುನೈಟೆಡ್ ಮತ್ತು ಎಫ್ ಸಿ ಗೋವಾ ತಂಡಗಳು ಪ್ಲೇ ಆಫ್ ನಲ್ಲಿ ಪರಸ್ಪರ ಸೆಣಸಲಿವೆ. ಪಂದ್ಯ ಉತ್ತಮ ಪೈಪೋಟಿಯಿಂದಲೇ ಕೂಡಿತ್ತು. ಆದರೆ ಗೋಲಿಲ್ಲದ ಪ್ರಥಮಾರ್ಧವೆಂದೆ ಗೋವಾ ಬಹುತೇಕ ಪ್ಲೇ ಆಫ್ ತಲುಪಿದಂತೆ. ಇಲ್ಲಿ ಪಂದ್ಯ ಗೋಲಿಲ್ಲದೆ ಡ್ರಾಗೊಂಡರೆ ಗೋವಾ ಸುಲಭವಾಗಿ ಸೆಮಿಫೈನಲ್ ಗೆ ಲಗ್ಗೆ ಇಡಲಿದೆ, ಈ ಕಾರಣಕ್ಕಾಗಿಯೇ ಗೋವಾ ತನ್ನ ನೈಜ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿಲ್ಲ, ಬದಲಾಗಿ ತಾಳ್ಮೆಯ ಹೆಜ್ಜೆಯನ್ನಿಟ್ಟಿತ್ತು
ಗೋಲಿಲ್ಲದ ಪ್ರಥಮಾರ್ಧ
ಧೀರಜ್ ಸಿಂಗ್ ಹೈದರಾಬಾದ್ ನ ಅವಕಾಶಕ್ಕೆ ಆಸ್ಪದ ನೀಡದೆ ತಾನೊಬ್ಬ ಉದಯೋನ್ಮುಖ ಗೋಲ್ ಕೀಪರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಹೆಚ್ಚಿನ ಅವಕಾಶಗಳು ಇಲ್ಲದ ಕಾರಣ ಪ್ರಥಮಾರ್ಧ ಗೋಲಿಲ್ಲದೆ ಅಂತ್ಯಗೊಂಡಿತು. ಗೋವಾದ ಆಟಗಾರರ ಮೊಗದಲ್ಲಿ ಸಂಭ್ರಮ ಮನೆ ಮಾಡಿತ್ತು. ಮುಂದಿನ 45 ನಿಮಿಷಗಳ ಆಟದಲ್ಲಿ ಹೈದರಾಬಾದ್ ಯಶಸ್ಸು ಕಂಡರೆ ಸೆಮಿಫೈನಲ್. ಇಲ್ಲವಾದಲ್ಲಿ ಮನೆಯ ಹಾದಿ.
ಪ್ಲೇ ಆಫ್ ಶೂಟೌಟ್ ಪ್ಲೇ ಆಫ್
ಗೆ ಮುನ್ನ ಮಿನಿ ಪ್ಲೇ ಆಫ್. ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಹೈದರಾಬಾದ್ ಹಾಗೂ ಗೋವಾ ಎಫ್ ಸಿ ತಂಡಗಳು ಮುಖಾಮುಖಿಯಾದವು. ಇದು ಈ ಬಾರಿಯ ಐಎಸ್ ಎಲ್ ನಲ್ಲೇ ಅತ್ಯಂತ ನಿರೀಕ್ಷೆಯ ಪಂದ್ಯ ಎಂದರೆ ತಪ್ಪಾಗಲಾರದು. 19 ಪಂದ್ಯಗಳ ನಂತರ ಉಳಿದಿರುವ ಈ 90 ನಿಮಿಷಗಳ ಪಂದ್ಯವು ಎರಡು ತಂಡಗಳ ಭವಿಷ್ಯವನ್ನು ತೀರ್ಮಾನಿಸಲಿದೆ. ಗೋವಾ ತಂಡಕ್ಕೆ ಕೇವಲ ಒಂದು ಅಂಕ ದೊರೆತರೂ ಅಂತಿಮ ನಾಲ್ಕರ ಹಂತ ತಲುಪಲಿದೆ. ಹೈದರಾಬಾದ್ ಗೆ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.ಗೋವಾ ತಂಡ 12 ಪಂದ್ಯಗಳಲ್ಲಿ ಸೋಲರಿಯದೆ ಬಂದಿದೆ. ಗೋಲು ಗಳಿಸುವುದು ಫೆರಾಂಡ್ ಪಡೆಗೆ ಕಷ್ಟವಲ್ಲ. ಕೊನೆಯ ಕ್ಷಣದವರೆಗೂ ಹೋರಾಟ ನೀಡುವ ಗೋವಾ ಅಮೂಲ್ಯ ಅಂಕಗಳನ್ನು ಗಳಿಸಿತ್ತು.
ಕೊನೆಯ ಕ್ಷಣದವರೆಗೂ ಹೋರಾಟ
ಹೈದರಾಬಾದ್ ಕೂಡ ಕೊನೆಯ ಕ್ಷಣದವರೆಗೂ ಹೋರಾಟ ನೀಡುವ ತಂಡ. ಹಿಂದಿನ ಯಾವುದೇ ಯಶಸ್ಸು ಇಲ್ಲಿ ಪ್ರಯೋಜನಕ್ಕೆ ಬಾರದು, ಇಲ್ಲಿ ಗೆದ್ದರೆ ಮಾತ್ರ ಮುಂದಿನ ಹಂತಕ್ಕೆ ತೇರ್ಗಡೆ ಎಂಬುದು ಎರಡೂ ತಂಡಕ್ಕೆ ಗೊತ್ತಿರುವ ಅಂಶ. ಗೋವಾ ವಿರುದ್ಧ ಹೈದರಾಬಾದ್ ಗೆ ಜಯ ಹೊರತು ಬೇರೇನೂ ಬೇಕಾಗಿಲ್ಲ. ಸ್ಪರ್ಧೆಯಲ್ಲಿ ಉಳಿಯಬೇಕಾದರೆ ಜಯ ಬೇಕು. ನಾರ್ಥ್ ಈಸ್ಟ್ ಯನೈಟೆಡ್ ಎಫ್ ಸಿ ಸೋತರೆ ಅಥವಾ ಡ್ರಾ ಮಾಡಿಕೊಂಡರೆ ತಮಗೆ ಲಾಭವಾಗಬಹುದು ಎಂದು ಕೋಚ್ ಮ್ಯಾನ್ವೆಲ್ ಮಾರ್ಕ್ವೆಜ್ ಊಹಿಸಿದ್ದರು, ಆದರೆ ಕೇರಳ ಬ್ಲಾಸ್ಟರ್ ಸೋಲು ಅನುಭವಿಸುವ ಮೂಲಕ ಈಗ ಹೈದರಾಬಾದ್ ಗೆಲ್ಲಲೇಬೇಕಾಗಿದೆ.
This News Article Is A Copy Of MYKHEL
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm