ಬ್ರೇಕಿಂಗ್ ನ್ಯೂಸ್
01-03-21 10:54 am Source: MYKHEL ಕ್ರೀಡೆ
ಗೋವಾ, ಫೆಬ್ರವರಿ 28: ಗೋವಾಕ್ಕೆ ಗೋಲು ಗಳಿಸಬೇಕಾಗಿರಲಿಲ್ಲ. ಹೈದರಾಬಾದ್ ಗೆ ಸೆಮಿ ಫೈನಲ್ ತಲುಪಲು ಗೋಲು ಗಳಿಸಬೇಕಾಗಿತ್ತು. ಆದರೆ ಹೈದರಾಬಾದ್ ನ ಆಟ ನಡೆಯಲಿಲ್ಲ. ಗೋವಾ ಗೋಲು ಗಳಿಸದೆ ಸೆಮಿಫೈನಲ್ ತಲುಪಿದೆ. ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಇದುವರೆಗೂ ದಿಟ್ಟ ಹೋರಾಟವನ್ನು ನೀಡಿ ಸೆಮಿಫೈನಲ್ ತಲಪುವ ಫೇವರಿಟ್ ತಂಡವೆನಿಸಿದ್ದ ಹೈದರಾಬಾದ್ ಎಫ್ ಸಿ ಕೊನೆಯ ಪಂದ್ಯದಲ್ಲಿ ಜಯ ಕಾಣುವಲ್ಲಿ ವಿಫಲವಾಗಿದೆ.
ಪರಿಣಾಮ ಒಂದು ಅಂಕದ ಅಗತ್ಯದಲ್ಲಿದ್ದ ಗೋವಾ ಎಫ್ ಸಿ ಹೀರೋ ಇಂಡಿಯನ್ ಸೂಪರ್ ಲೀಗ್ ನ ಪ್ಲೇ ಆಫ್ ತಲುಪಿದೆ. ಇದರೊಂದಿಗೆ ಎಟಿಕೆ ಮೋಹನ್ ಬಾಗನ್, ಮುಂಬೈ ಸಿಟಿ ಎಫ್ ಸಿ, ನಾರ್ಥ್ ಈಸ್ಟ್ ಯುನೈಟೆಡ್ ಮತ್ತು ಎಫ್ ಸಿ ಗೋವಾ ತಂಡಗಳು ಪ್ಲೇ ಆಫ್ ನಲ್ಲಿ ಪರಸ್ಪರ ಸೆಣಸಲಿವೆ. ಪಂದ್ಯ ಉತ್ತಮ ಪೈಪೋಟಿಯಿಂದಲೇ ಕೂಡಿತ್ತು. ಆದರೆ ಗೋಲಿಲ್ಲದ ಪ್ರಥಮಾರ್ಧವೆಂದೆ ಗೋವಾ ಬಹುತೇಕ ಪ್ಲೇ ಆಫ್ ತಲುಪಿದಂತೆ. ಇಲ್ಲಿ ಪಂದ್ಯ ಗೋಲಿಲ್ಲದೆ ಡ್ರಾಗೊಂಡರೆ ಗೋವಾ ಸುಲಭವಾಗಿ ಸೆಮಿಫೈನಲ್ ಗೆ ಲಗ್ಗೆ ಇಡಲಿದೆ, ಈ ಕಾರಣಕ್ಕಾಗಿಯೇ ಗೋವಾ ತನ್ನ ನೈಜ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿಲ್ಲ, ಬದಲಾಗಿ ತಾಳ್ಮೆಯ ಹೆಜ್ಜೆಯನ್ನಿಟ್ಟಿತ್ತು

ಗೋಲಿಲ್ಲದ ಪ್ರಥಮಾರ್ಧ
ಧೀರಜ್ ಸಿಂಗ್ ಹೈದರಾಬಾದ್ ನ ಅವಕಾಶಕ್ಕೆ ಆಸ್ಪದ ನೀಡದೆ ತಾನೊಬ್ಬ ಉದಯೋನ್ಮುಖ ಗೋಲ್ ಕೀಪರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಹೆಚ್ಚಿನ ಅವಕಾಶಗಳು ಇಲ್ಲದ ಕಾರಣ ಪ್ರಥಮಾರ್ಧ ಗೋಲಿಲ್ಲದೆ ಅಂತ್ಯಗೊಂಡಿತು. ಗೋವಾದ ಆಟಗಾರರ ಮೊಗದಲ್ಲಿ ಸಂಭ್ರಮ ಮನೆ ಮಾಡಿತ್ತು. ಮುಂದಿನ 45 ನಿಮಿಷಗಳ ಆಟದಲ್ಲಿ ಹೈದರಾಬಾದ್ ಯಶಸ್ಸು ಕಂಡರೆ ಸೆಮಿಫೈನಲ್. ಇಲ್ಲವಾದಲ್ಲಿ ಮನೆಯ ಹಾದಿ.
ಪ್ಲೇ ಆಫ್ ಶೂಟೌಟ್ ಪ್ಲೇ ಆಫ್
ಗೆ ಮುನ್ನ ಮಿನಿ ಪ್ಲೇ ಆಫ್. ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಹೈದರಾಬಾದ್ ಹಾಗೂ ಗೋವಾ ಎಫ್ ಸಿ ತಂಡಗಳು ಮುಖಾಮುಖಿಯಾದವು. ಇದು ಈ ಬಾರಿಯ ಐಎಸ್ ಎಲ್ ನಲ್ಲೇ ಅತ್ಯಂತ ನಿರೀಕ್ಷೆಯ ಪಂದ್ಯ ಎಂದರೆ ತಪ್ಪಾಗಲಾರದು. 19 ಪಂದ್ಯಗಳ ನಂತರ ಉಳಿದಿರುವ ಈ 90 ನಿಮಿಷಗಳ ಪಂದ್ಯವು ಎರಡು ತಂಡಗಳ ಭವಿಷ್ಯವನ್ನು ತೀರ್ಮಾನಿಸಲಿದೆ. ಗೋವಾ ತಂಡಕ್ಕೆ ಕೇವಲ ಒಂದು ಅಂಕ ದೊರೆತರೂ ಅಂತಿಮ ನಾಲ್ಕರ ಹಂತ ತಲುಪಲಿದೆ. ಹೈದರಾಬಾದ್ ಗೆ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.ಗೋವಾ ತಂಡ 12 ಪಂದ್ಯಗಳಲ್ಲಿ ಸೋಲರಿಯದೆ ಬಂದಿದೆ. ಗೋಲು ಗಳಿಸುವುದು ಫೆರಾಂಡ್ ಪಡೆಗೆ ಕಷ್ಟವಲ್ಲ. ಕೊನೆಯ ಕ್ಷಣದವರೆಗೂ ಹೋರಾಟ ನೀಡುವ ಗೋವಾ ಅಮೂಲ್ಯ ಅಂಕಗಳನ್ನು ಗಳಿಸಿತ್ತು.

ಕೊನೆಯ ಕ್ಷಣದವರೆಗೂ ಹೋರಾಟ
ಹೈದರಾಬಾದ್ ಕೂಡ ಕೊನೆಯ ಕ್ಷಣದವರೆಗೂ ಹೋರಾಟ ನೀಡುವ ತಂಡ. ಹಿಂದಿನ ಯಾವುದೇ ಯಶಸ್ಸು ಇಲ್ಲಿ ಪ್ರಯೋಜನಕ್ಕೆ ಬಾರದು, ಇಲ್ಲಿ ಗೆದ್ದರೆ ಮಾತ್ರ ಮುಂದಿನ ಹಂತಕ್ಕೆ ತೇರ್ಗಡೆ ಎಂಬುದು ಎರಡೂ ತಂಡಕ್ಕೆ ಗೊತ್ತಿರುವ ಅಂಶ. ಗೋವಾ ವಿರುದ್ಧ ಹೈದರಾಬಾದ್ ಗೆ ಜಯ ಹೊರತು ಬೇರೇನೂ ಬೇಕಾಗಿಲ್ಲ. ಸ್ಪರ್ಧೆಯಲ್ಲಿ ಉಳಿಯಬೇಕಾದರೆ ಜಯ ಬೇಕು. ನಾರ್ಥ್ ಈಸ್ಟ್ ಯನೈಟೆಡ್ ಎಫ್ ಸಿ ಸೋತರೆ ಅಥವಾ ಡ್ರಾ ಮಾಡಿಕೊಂಡರೆ ತಮಗೆ ಲಾಭವಾಗಬಹುದು ಎಂದು ಕೋಚ್ ಮ್ಯಾನ್ವೆಲ್ ಮಾರ್ಕ್ವೆಜ್ ಊಹಿಸಿದ್ದರು, ಆದರೆ ಕೇರಳ ಬ್ಲಾಸ್ಟರ್ ಸೋಲು ಅನುಭವಿಸುವ ಮೂಲಕ ಈಗ ಹೈದರಾಬಾದ್ ಗೆಲ್ಲಲೇಬೇಕಾಗಿದೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm