ಬ್ರೇಕಿಂಗ್ ನ್ಯೂಸ್
02-03-21 12:22 pm Source: MYKHEL ಕ್ರೀಡೆ
ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಈಗ ಎರಡನೇ ಹಂತಕ್ಕೆ ಕಾಲಿಟ್ಟಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ಗೆ ಲಸಿಕೆ ನೀಡಿದ ಬಳಿಕ ಈಗ 60 ವರ್ಷಕ್ಕಿಂತ ಅಧಿಕ ವಯಸ್ಸಿನ ನಾಗರೀಕರಿಗೆ ಲಸಿಕೆಯನ್ನು ನೀಲಾಗುತ್ತಿದೆ. ಈ ಹಂತದಲ್ಲಿ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಈ ಬಗ್ಗೆ ಅವರು ಟ್ವಿಟ್ಟರ್ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದ್ದು ಸದ್ಯ ಗುಜರಾತ್ನ ಅಹ್ಮದಾಬಾದ್ನಲ್ಲಿ ಅಂತಿಮ ಪಂದ್ಯಕ್ಕೆ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಅಂತಿಮ ಪಂದ್ಯಕ್ಕೂ ಮುನ್ನ ಕೋಚ್ ರವಿ ಶಾಸ್ತ್ರಿ ಅಹ್ಮದಾಬಾದ್ನ ಖಾಸಗಿ ಆಸ್ಪತ್ರೆಗೆ ತೆರಳಿ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.
ಅಹ್ಮದಾಬಾದ್ನ ಅಪೊಲೋ ಆಸ್ಪತ್ರೆಯಲ್ಲಿ ರವಿ ಶಾಸ್ತ್ರಿ ಕೊರೊನಾ ಲಸಿಕೆಯ ಮೊದಲ ಡೋಸ್ಅನ್ನು ಹಾಕಿಸಿಕೊಂಡಿದ್ದಾರೆ. ಬಳಿಕ ಟ್ವಿಟ್ಟರ್ನಲ್ಲಿ ಭಾರತದ ವೈದ್ಯಕೀಯ ಸಿಬ್ಬಂಧಿಗಳ ಹಾಗೂ ವಿಜ್ಞಾನಿಗಳ ಸಾಧನೆಯನ್ನು ಪ್ರಶಂಸಿಸಿದ್ದಾರೆ. ಸೋಮವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು.
ಭಾರತದಲ್ಲಿ ಎರಡನೇ ಹಂತದಲ್ಲಿ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಈಗ ಲಸಿಕೆಯನ್ನು ನೀಡಲಾಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗಳಾದರೆ 45 ವರ್ಷ ಮೇಲ್ಪಟ್ಟವರಿಗೂ ಲಸಿಕೆಯನ್ನು ಪಡೆದುಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್ಗೆ 250 ರೂಪಾಯಿಯನ್ನು ನಿಗದಿಪಡಿಲಾಗಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಅಹ್ಮದಾಬಾದ್ನಲ್ಲಿ ನಿರ್ಮಾಣವಾಗಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾರ್ಚ್ ನಾಲ್ಕರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಭಾರತ ಈಗ 2-1 ಅಂತರದಿಂದ ಮುನ್ನಡೆಯನ್ನು ಪಡೆದುಕೊಂಡಿದೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm