ಬ್ರೇಕಿಂಗ್ ನ್ಯೂಸ್
02-03-21 12:22 pm Source: MYKHEL ಕ್ರೀಡೆ
ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಈಗ ಎರಡನೇ ಹಂತಕ್ಕೆ ಕಾಲಿಟ್ಟಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ಗೆ ಲಸಿಕೆ ನೀಡಿದ ಬಳಿಕ ಈಗ 60 ವರ್ಷಕ್ಕಿಂತ ಅಧಿಕ ವಯಸ್ಸಿನ ನಾಗರೀಕರಿಗೆ ಲಸಿಕೆಯನ್ನು ನೀಲಾಗುತ್ತಿದೆ. ಈ ಹಂತದಲ್ಲಿ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಈ ಬಗ್ಗೆ ಅವರು ಟ್ವಿಟ್ಟರ್ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದ್ದು ಸದ್ಯ ಗುಜರಾತ್ನ ಅಹ್ಮದಾಬಾದ್ನಲ್ಲಿ ಅಂತಿಮ ಪಂದ್ಯಕ್ಕೆ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಅಂತಿಮ ಪಂದ್ಯಕ್ಕೂ ಮುನ್ನ ಕೋಚ್ ರವಿ ಶಾಸ್ತ್ರಿ ಅಹ್ಮದಾಬಾದ್ನ ಖಾಸಗಿ ಆಸ್ಪತ್ರೆಗೆ ತೆರಳಿ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.
ಅಹ್ಮದಾಬಾದ್ನ ಅಪೊಲೋ ಆಸ್ಪತ್ರೆಯಲ್ಲಿ ರವಿ ಶಾಸ್ತ್ರಿ ಕೊರೊನಾ ಲಸಿಕೆಯ ಮೊದಲ ಡೋಸ್ಅನ್ನು ಹಾಕಿಸಿಕೊಂಡಿದ್ದಾರೆ. ಬಳಿಕ ಟ್ವಿಟ್ಟರ್ನಲ್ಲಿ ಭಾರತದ ವೈದ್ಯಕೀಯ ಸಿಬ್ಬಂಧಿಗಳ ಹಾಗೂ ವಿಜ್ಞಾನಿಗಳ ಸಾಧನೆಯನ್ನು ಪ್ರಶಂಸಿಸಿದ್ದಾರೆ. ಸೋಮವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು.
ಭಾರತದಲ್ಲಿ ಎರಡನೇ ಹಂತದಲ್ಲಿ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಈಗ ಲಸಿಕೆಯನ್ನು ನೀಡಲಾಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗಳಾದರೆ 45 ವರ್ಷ ಮೇಲ್ಪಟ್ಟವರಿಗೂ ಲಸಿಕೆಯನ್ನು ಪಡೆದುಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್ಗೆ 250 ರೂಪಾಯಿಯನ್ನು ನಿಗದಿಪಡಿಲಾಗಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಅಹ್ಮದಾಬಾದ್ನಲ್ಲಿ ನಿರ್ಮಾಣವಾಗಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾರ್ಚ್ ನಾಲ್ಕರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಭಾರತ ಈಗ 2-1 ಅಂತರದಿಂದ ಮುನ್ನಡೆಯನ್ನು ಪಡೆದುಕೊಂಡಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm