ಬ್ರೇಕಿಂಗ್ ನ್ಯೂಸ್
03-03-21 04:02 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೈದಾನದಾಚೆ ಶತಕವನ್ನು ಬಾರಿಸಿ ಈಗ ಸುದ್ದಿಯಾಗಿದ್ದಾರೆ. ವಿರಾಟ್ ಕೊಹ್ಲಿ ಪ್ರಸಿದ್ಧ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಂನಲ್ಲಿ 100 ಮಿಲಿಯನ್ ಅಭಿಮಾನಿಗಳನ್ನು ಹೊಂದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿನ ಮಹತ್ವದ ಮೈಲಿಗಲ್ಲಿಗೆ ವಿರಾಟ್ ಕೊಹ್ಲಿ ಸಂತಸದಿಂದ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿನ ಕೆಲ ವಿಶೇಷ ಸಂದರ್ಭಗಳ ಫೋಟೋಗಳ ವಿಡಿಯೋ ಹೈಲೈಟ್ಅನ್ನು ವಿರಾಟ್ ಕೊಹ್ಲಿ ಹಂಚಿಕೊಂಡಿದ್ದಾರೆ. ಕೊಹ್ಲಿ ಜೀವನದ ಕೆಲ ಪ್ರಮುಖ ಕ್ಷಣಗಳು ಈ ವಿಡಿಯೋದಲ್ಲಿದೆ. ಈ ಸುಂದರ ವಿಡಿಯೋ ಜೊತೆಗೆ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ.
"ನೀವು ಈ ಪಯಣವನ್ನು ಸುಂದರಗೊಳಿಸಿದ್ದೀರಿ. ನಿಮ್ಮೆಲ್ಲರ ಪ್ರೀತಿ ಹಾಗೂ ಆಶಿರ್ವಾದಕ್ಕೆ ಆಭಾರಿಯಾಗಿದ್ದೇನೆ. ಧನ್ಯವಾದಗಳು" ಎಂದು ವಿರಾಟ್ ಕೊಹ್ಲಿ ಈ ವಿಡಿಯೋಗೆ ನೀಡಿರುವ ಬರಹದಲ್ಲಿ ಹೇಳಿಕೊಂಡಿದ್ದಾರೆ. ಜೊತೆಗೆ '100 ಮಿಲಿಯನ್' ಹಾಗೂ #instafam ಎಂದು ಸೇರಿಸಿದ್ದಾರೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿಯ ಬಾಲ್ಯದಿಂದ ಹಿಡಿದು ಮದುವೆಯವರೆಗಿನ ಹಾಗೂ ಮೈದಾನದಲ್ಲಿನ ಕೆಲ ಸ್ಮರಣೀಯ ಕ್ಷಣಗಳು ಇದೆ. ಜೊತೆಗೆ ತಾಯಿಯ ಜೊತೆಗಿನ ಫೋಟೋ, ಜಿಮ್ನಲ್ಲಿ ಕೊಹ್ಲಿಯ ತಾಲೀಮಿನ ಫೋಟೋ ಹಾಗೂ 2019ರ ವಿಶ್ವಕಪ್ನಲ್ಲಿ 87ರ ಹರೆಯದ ಹಿರಿಯ ಅಭಿಮಾನಿಗನ್ನು ಭೇಟಿ ಮಾಡಿದ ಫೋಟೋ ಹಾಗೂ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರಿಂದ ಖೇಲ್ರತ್ನ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವ ಫೋಟೋ ಕೂಡ ಇದೆ.
ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಂನಲ್ಲಿ 100 ಕೋಟಿ ಬೆಂಬಲಿಗರನ್ನು ಹೊಂದಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸಾಧನೆಯನ್ನು ಮಾಡಿದ ಮೊದಲ ಕ್ರಿಕೆಟರ್ ಕೂಡ ಕೊಹ್ಲಿ ಆಗಿದ್ದಾರೆ. ಫಿಟ್ಬಾಲ್ ಸೂಪರ್ ಸ್ಟಾರ್ಗಳಾದ ಲಿಯೋನೆಲ್ ಮೆಸ್ಸಿ, ಕ್ರಿಶ್ಚಿಯಾನೋ ರೊನಾಲ್ಡೋ ಹಾಗೂ ನೇಯ್ಮಾರ್ ಅವರು ಇರುವ ಎಲೈಟ್ ಕ್ಲಬ್ಗೆ ವಿರಾಟ್ ಕೊಹ್ಲಿ ಸೇರಿಕೊಂಡಿದ್ದಾರೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm