ಬ್ರೇಕಿಂಗ್ ನ್ಯೂಸ್
03-03-21 05:09 pm Source: MYKHEL ಕ್ರೀಡೆ
ಈ ಬಾರಿಯ ಐಪಿಎಲ್ ಹರಾಜಿನಲ್ಲಿ 14.26 ಕೋಟಿಗೆ ಆರ್ಸಿಬಿ ತಂಡಕ್ಕೆ ಹರಾಜಾಗುವ ಮೂಲಕ ಹುಬ್ಬೇರುವಂತೆ ಮಾಡಿದ್ದರು ಆಸ್ಟ್ರೇಲಿಯಾ ತಂಡದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್. ಆದರೆ ಈ ಹರಾಜಿನ ನಂತರ ನಡೆದ ಸತತ ಎರಡು ಪಂದ್ಯಗಳಲ್ಲಿ ಹೀನಾಯ ಪ್ರದರ್ಶನ ನೀಡುವ ಮೂಲಕ ಟೀಕೆಗೆ ಗುರಿಯಾಗಿದ್ದರು. ಆದರೆ ಈಗ ಈ ಟೀಕೆಗಳಿಗೆ ಮ್ಯಾಕ್ಸ್ವೆಲ್ ತಮ್ಮ ಬ್ಯಾಟ್ನಿಂದಲೇ ಉತ್ತರವನ್ನು ನೀಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. ಕೇವಲ 31 ಎಸೆತಗಳನ್ನು ಎದುರಿಸಿದ ಗ್ಲೆನ್ ಮ್ಯಾಕ್ಸ್ವೆಲ್ ಬರೊಬ್ಬರಿ 70 ರನ್ ಬಾರಿಸಿದ್ದಾರೆ. ಈ ಸ್ಪೋಟಕ ಇನ್ನಿಂಗ್ಸ್ನಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ಒಳಗೊಂಡಿತ್ತು. 225.81ರ ಸ್ಟ್ರೈಕ್ರೇಟ್ನಲ್ಲಿ ಅವರು ಬ್ಯಾಟ್ ಬೀಸಿದ್ದರು.
ಇನ್ನು ಮ್ಯಾಕ್ಸ್ವೆಲ್ ಮಾತ್ರವಲ್ಲ ಆರ್ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯಾ ತಂಡದ ಇನ್ನೋರ್ವ ಆಟಗಾರ ಜೋಶ್ ಫಿಲಿಪ್ಪೆ ಕೂಡ ಉತ್ತಮ ಪ್ರದರ್ಶನ್ನು ನೀಡಿದ್ದಾರೆ. 27 ಎಸೆತಗಳಲ್ಲಿ ಫಿಲಿಪ್ಪೆ 43 ರನ್ಗಳ ಕೊಡುಗೆಯನ್ನು ನೀಡಿದ್ದಾರೆ. ಇನ್ನು ಆರ್ಸಿಬಿ ತಂಡದಿಂದ ಹೊರ ಬಿದ್ದು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಾರಾಟವಾಗದೇ ಉಳಿದುಕೊಂಡ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಕೂಡ ಸ್ಪೋಟಕ ಪ್ರದರ್ಶನ ನೀಡುವಲ್ಲಿ ಸಫಲರಾಗಿದ್ದಾರೆ. ಫಿಂಚ್ 44 ಎಸೆತಗಳಲ್ಲಿ 69 ರನ್ ಗಳಿಸಿದರು.
ಆಸ್ಟ್ರೇಲಿಯಾ ತಂಡದ ಈ ಅಬ್ಬರದ ಆಟದಿಂದಾಗಿ ನಿಗದಿತ 20 ಓವರ್ಗಳಲ್ಲಿ 208 ರನ್ ಪೇರಿಸಲು ಶಕ್ತವಾಯಿತು. ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ಪರವಾಗಿ ಉತ್ತಮ ಜೊತೆಯಾಟ ಲಭ್ಯವಾಗಲಿಲ್ಲ. ಮಾರ್ಟಿನ್ ಗಪ್ಟಿಲ್ 43 ರನ್ ಗಳಿಸಿದರೆ ಡೆವೋನ್ ಕಾನ್ವೆ 38 ರನ್ಗಳ ಕೊಡುಗೆಯನ್ನು ನೀಡಿದರು. ಉಳಿದಂತೆ ಎಲ್ಲಾ ಆಟಗಾರರು ವಿಫಲರಾದರು.
ಆಸ್ಟ್ರೇಲಿಯಾ ತಂಡದ ಪರವಾಗಿ ಸ್ಪಿನ್ನರ್ ಆಶ್ಟನ್ ಅಗರ್ ನ್ಯೂಜಿಲೆಂಡ್ ತಂಡಕ್ಕೆ ಆಘಾತವನ್ನು ನೀಡಿದರು. ಕೀವಿಸ್ನ 6 ವಿಕೆಟ್ ಆಶ್ಟನ್ ಅಗರ್ ಪಾಲಾಯಿತು. ಹೀಗಾಗಿ ಆಸಿಸ್ ನೀಡಿದ ದೊಡ್ಡ ಮೊತ್ತವನ್ನು ಬೆನ್ನಟ್ಟಲು ಕೀವಿಸ್ ಪಡೆ ಸಂಪೂರ್ಣವಾಗಿ ವಿಫಲವಾಗಿ 144 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ಅಂತರವನ್ನು 1-2ಕ್ಕೆ ಕುಗ್ಗಿಸಿಕೊಂಡಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm