ಬ್ರೇಕಿಂಗ್ ನ್ಯೂಸ್
03-03-21 05:42 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಇದೇ ಮೊದಲ ಬಾರಿಗೆ ಕಳೆದ ಬಾರಿಯ ಐಪಿಎಲ್ನಲ್ಲಿ ಮಿಂಚಿದ್ದ ಆಟಗಾರ ರಾಹುಲ್ ತೆವಾಟಿಯಾ ಆಯ್ಕೆಯಾಗಿದ್ದಾರೆ. ಆದರೆ ಈ ಅವಕಾಶ ರಾಹುಲ್ ತೆವಾಟಿಯಾ ಅವರ ಕೈತಪ್ಪುವ ಪರಿಸ್ಥಿತಿ ಉಂಟಾಗಿದೆ. ಫಿಟ್ನೆಸ್ ಪರೀಕ್ಷೆಯಲ್ಲಿ ರಾಹುಲ್ ತೆವಾಟಿಯಾ ವಿಫಲವಾಗಿದ್ದು ತಂಡವನ್ನು ಕೂಡಿಕೊಳ್ಳುವ ಬಗ್ಗೆ ಅನುಮಾನಗಳು ಎದ್ದಿದೆ.
ದಿ ಟೆಲಿಗ್ರಾಫ್ ವರದಿ ಮಾಡಿದಂತೆ ರಾಹುಲ್ ತೆವಾಟಿಯಾ ಮತ್ತು ವರುಣ್ ಚಕ್ರವರ್ತಿ ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ತಂಡದ ಆಟಗಾರರಿಗೆ ನಿಗದಿ ಪಡಿಸಿದ ಮಾನದಂಡಕ್ಕಿಂತ ಈ ಇಬ್ಬರು ಆಟಗಾರರ ಫಿಟ್ನೆಸ್ ಸಾಮರ್ಥ್ಯ ಕೆಳಮಟ್ಟದಲ್ಲಿದೆ ಎಂದು ತಿಳಿದುಬಂದಿದೆ. ವರುಣ್ ಚಕ್ರವರ್ತಿ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾಗಿರುವುದು ಈ ಮೊದಲು ಬಹಿರಂಗವಾಗಿತ್ತು.
ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಆಟಗಾರರು ಯೋ-ಯೋ ಪರೀಕ್ಷೆಯಲ್ಲಿ 17:1 ಅಂಕವನ್ನು ಪಡೆದಿರಬೇಕು ಅಥವಾ 2 ಕಿಲೋ ವೀಟರ್ ಅಂತರವನ್ನು 8.3 ನಿಮಿಷಗಳ ಒಳಗೆ ತಲುಪಿರಬೇಕು.
ಹಾಗಾದಲ್ಲಿ ಮಾತ್ರವೇ ಟೀಮ್ ಇಂಡಿಯಾವನ್ನು ಪ್ರತಿನಿಧಿಸಲು ಸಾಧ್ಯವಾಗುತ್ತದೆ. ಆದರೆ ರಾಹುಲ್ ತೆವಾಟಿಯಾ ಹಾಗೂ ವರುಣ್ ಚಕ್ರವರ್ತಿಗೆ ರಾಷ್ಟ್ರೀಯ ತಂಡವನ್ನು ಪ್ರತಿಧಿಸುವ ಅವಕಾಶ ಇಲ್ಲಿಗೇ ಅಂತ್ಯವಾಗುವುದಿಲ್ಲ. ಅವರಿಗೆ ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತದೆ. ಆಗ ಅವರು ತಮ್ಮ ನಿಗದಿತ ಮಾನದಂಡಗಳನ್ನು ಪೂರೈಸಿದರೆ ತಂಡವನ್ನು ಪ್ರವೇಶಿಸಲು ಅವಕಾಶ ಪಡೆಯುತ್ತಾರೆ.
ರಾಷ್ಟ್ರೀಯ ತಂಡದ ಆಯ್ಕೆಗಾರರು ಹಾಗೂ ತಂಡದ ಮ್ಯಾನೇಜ್ಮೆಂಟ್ ಈ ಆಟಗಾರರ ಲಭ್ಯತೆಯ ಬಗ್ಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮಾಹಿತಿಯ ಮೇರೆಗೆ ನಿರ್ಣಯವನ್ನು ತೆಗೆದುಕೊಳ್ಳಲಿದೆ. ಭಾರತೀಯ ಕ್ರಿಕೆಟ್ನಲ್ಲಿ ಅಪರಿಚಿತವಾಗಿದ್ದ ರಾಹುಲ್ ತೆವಾಟಿಯಾ ಕಳೆದ ಐಪಿಎಲ್ನಲ್ಲಿ ನಿಡಿದ ಕೆಲ ಅದ್ಭುತ ಪ್ರದರ್ಶನಗಳಿಂದಾಗಿ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪಡೆಯುವಂತೆ ಮಾಡಿದೆ.
This News Article Is A Copy Of MYKHEL
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm