ಬ್ರೇಕಿಂಗ್ ನ್ಯೂಸ್
05-03-21 12:13 pm Source: MYKHEL ಕ್ರೀಡೆ
ಭಾರತದ ವಿರುದ್ಧದ ಅಂತಿಮ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಕಳಪೆ ಪ್ರದರ್ಶನವನ್ನು ನೀಡಿದ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳನ್ನು ಇಂಗ್ಲೆಂಡ್ ತಂಡದ ಮತ್ತೋರ್ವ ಮಾಜಿ ಕ್ರಿಕೆಟಿಗ ಟೀಕಿಸಿದ್ದಾರೆ. ಮೈಕಲ್ ವಾನ್ ಕೆವಿನ್ ಪೀಟರ್ಸನ್ ಬಳಿಕ ಆಂಡ್ರೋ ಸ್ಟ್ರಾಸ್ ಕೂಡ ಭಾರತೀಯ ನೆಲದಲ್ಲಿ ಇಂಗ್ಲೆಂಡ್ ಆಟಗಾರರ ಕಳಪೆ ಬ್ಯಾಟಿಂಗ್ ಬಗ್ಗೆ ಕುಟುಕಿದ್ದಾರೆ.
ಮೂರನೇ ಟೆಸ್ಟ್ ಪಂದ್ಯ ಎರಡೇ ದಿನಕ್ಕೆ ಅಂತ್ಯವಾದ ಬಳಿಕ ಸ್ಟ್ರಾಸ್ ಅಹ್ಮದಾಬಾದ್ ಪಿಚ್ ಬಗ್ಗೆ ಟೀಕೆಯನ್ನು ಮಾಡಿದ್ದರು. ನಾಲ್ಕನೇ ಪಂದ್ಯವನ್ನು ಕೂಡ ಅಹ್ಮದಾಬಾದ್ನಲ್ಲಿಯೇ ಆಡಿದ್ದರಾದರೂ ಬೇರೆ ಪಿಚ್ನಲ್ಲಿ ಆಡಲಾಗುತ್ತಿದೆ. ಈ ಹಿಂದಿನ ಪಂದ್ಯದಂತೆ ಹೆಚ್ಚಿನ ತಿರುವನ್ನು ಚೆಂಡು ಪಿಚ್ ಈ ಪಿಚ್ನಲ್ಲಿ ಮೊದಲ ದಿನದಾಟದಲ್ಲಿ ಪಡೆದಿರಲಿಲ್ಲ. ಹಾಗಿದ್ದರೂ ಇಂಗ್ಲೆಂಡ್ 205 ರನ್ಗಳಿಸಲಷ್ಟೇ ಶಕ್ತವಾಗಿತ್ತು.
"ಭಾರತೀಯ ಬೌಲಿಂಗ್ ದಾಳಿ ಅತ್ಯುತ್ತಮವಾಗಿತ್ತು. ನಾವು ಉತ್ತಮ ಗುಣಮಟ್ಟದ ಭಾರತೀಯ ಬೌಲಿಂಗ್ ದಾಳಿಯನ್ನು ನಿರೀಕ್ಷಿಸಿದ್ದೆವು. ಆದರೆ ಸತ್ಯವನ್ನು ನಾವು ಮರೆಮಾಚಲು ಸಾಧ್ಯವಿಲ್ಲ. ಇಂತಾ ಪರಿಸ್ಥಿತಿಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಗುಣಮಟ್ಟ ಸಾಕಾಗಲಿಲ್ಲ. ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ" ಎಂದಿದ್ದಾರೆ ಆ್ಯಂಡ್ರೋ ಸ್ಟ್ರಾಸ್.
"ಪಿಚ್ ಬಗ್ಗೆ, ಎಸೆತಗಳ ಬಗ್ಗೆ ಹಾಗೂ ಅನನುಭವದ ಬಗ್ಗೆ ಎಲ್ಲಾ ರೀತಿಯ ನೆಪಗಳನ್ನು ನೀವು ಯೋಚಿಸಬಹುದು. ಆದರೆ ಭಾರತದಲ್ಲಿ ನೀವು ಗೆಲ್ಲಲೇಬೇಕಾದರೆ ಮೊದಲ ಇನ್ನಿಂಗ್ಸ್ನಲ್ಲಿ ನೀವು ರನ್ಗಳಿಸಿವು ದಾರಿಯನ್ನು ಹೊಂದಿರಲೇಬೇಕು. ಅದನ್ನು ಇಂಗ್ಲೆಂಡ್ಗೆ ಸಾಧಿಸಲು ಸಾಧ್ಯವಾಗಿಲ್ಲ" ಎಂದಿದ್ದಾರೆ ಸ್ಟ್ರಾಸ್.
ಇಂಗ್ಲಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರತ 2-1 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ಗೆ ಸರಣಿಯನ್ನು ಡ್ರಾ ಗೊಳಿಸಬೇಕಾದರೆ ಗೆಲುವು ಅನಿವಾರ್ಯವಾಗಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm