ಬ್ರೇಕಿಂಗ್ ನ್ಯೂಸ್
05-03-21 12:13 pm Source: MYKHEL ಕ್ರೀಡೆ
ಭಾರತದ ವಿರುದ್ಧದ ಅಂತಿಮ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಕಳಪೆ ಪ್ರದರ್ಶನವನ್ನು ನೀಡಿದ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳನ್ನು ಇಂಗ್ಲೆಂಡ್ ತಂಡದ ಮತ್ತೋರ್ವ ಮಾಜಿ ಕ್ರಿಕೆಟಿಗ ಟೀಕಿಸಿದ್ದಾರೆ. ಮೈಕಲ್ ವಾನ್ ಕೆವಿನ್ ಪೀಟರ್ಸನ್ ಬಳಿಕ ಆಂಡ್ರೋ ಸ್ಟ್ರಾಸ್ ಕೂಡ ಭಾರತೀಯ ನೆಲದಲ್ಲಿ ಇಂಗ್ಲೆಂಡ್ ಆಟಗಾರರ ಕಳಪೆ ಬ್ಯಾಟಿಂಗ್ ಬಗ್ಗೆ ಕುಟುಕಿದ್ದಾರೆ.
ಮೂರನೇ ಟೆಸ್ಟ್ ಪಂದ್ಯ ಎರಡೇ ದಿನಕ್ಕೆ ಅಂತ್ಯವಾದ ಬಳಿಕ ಸ್ಟ್ರಾಸ್ ಅಹ್ಮದಾಬಾದ್ ಪಿಚ್ ಬಗ್ಗೆ ಟೀಕೆಯನ್ನು ಮಾಡಿದ್ದರು. ನಾಲ್ಕನೇ ಪಂದ್ಯವನ್ನು ಕೂಡ ಅಹ್ಮದಾಬಾದ್ನಲ್ಲಿಯೇ ಆಡಿದ್ದರಾದರೂ ಬೇರೆ ಪಿಚ್ನಲ್ಲಿ ಆಡಲಾಗುತ್ತಿದೆ. ಈ ಹಿಂದಿನ ಪಂದ್ಯದಂತೆ ಹೆಚ್ಚಿನ ತಿರುವನ್ನು ಚೆಂಡು ಪಿಚ್ ಈ ಪಿಚ್ನಲ್ಲಿ ಮೊದಲ ದಿನದಾಟದಲ್ಲಿ ಪಡೆದಿರಲಿಲ್ಲ. ಹಾಗಿದ್ದರೂ ಇಂಗ್ಲೆಂಡ್ 205 ರನ್ಗಳಿಸಲಷ್ಟೇ ಶಕ್ತವಾಗಿತ್ತು.
"ಭಾರತೀಯ ಬೌಲಿಂಗ್ ದಾಳಿ ಅತ್ಯುತ್ತಮವಾಗಿತ್ತು. ನಾವು ಉತ್ತಮ ಗುಣಮಟ್ಟದ ಭಾರತೀಯ ಬೌಲಿಂಗ್ ದಾಳಿಯನ್ನು ನಿರೀಕ್ಷಿಸಿದ್ದೆವು. ಆದರೆ ಸತ್ಯವನ್ನು ನಾವು ಮರೆಮಾಚಲು ಸಾಧ್ಯವಿಲ್ಲ. ಇಂತಾ ಪರಿಸ್ಥಿತಿಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಗುಣಮಟ್ಟ ಸಾಕಾಗಲಿಲ್ಲ. ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ" ಎಂದಿದ್ದಾರೆ ಆ್ಯಂಡ್ರೋ ಸ್ಟ್ರಾಸ್.
"ಪಿಚ್ ಬಗ್ಗೆ, ಎಸೆತಗಳ ಬಗ್ಗೆ ಹಾಗೂ ಅನನುಭವದ ಬಗ್ಗೆ ಎಲ್ಲಾ ರೀತಿಯ ನೆಪಗಳನ್ನು ನೀವು ಯೋಚಿಸಬಹುದು. ಆದರೆ ಭಾರತದಲ್ಲಿ ನೀವು ಗೆಲ್ಲಲೇಬೇಕಾದರೆ ಮೊದಲ ಇನ್ನಿಂಗ್ಸ್ನಲ್ಲಿ ನೀವು ರನ್ಗಳಿಸಿವು ದಾರಿಯನ್ನು ಹೊಂದಿರಲೇಬೇಕು. ಅದನ್ನು ಇಂಗ್ಲೆಂಡ್ಗೆ ಸಾಧಿಸಲು ಸಾಧ್ಯವಾಗಿಲ್ಲ" ಎಂದಿದ್ದಾರೆ ಸ್ಟ್ರಾಸ್.
ಇಂಗ್ಲಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರತ 2-1 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ಗೆ ಸರಣಿಯನ್ನು ಡ್ರಾ ಗೊಳಿಸಬೇಕಾದರೆ ಗೆಲುವು ಅನಿವಾರ್ಯವಾಗಿದೆ.
This News Article Is A Copy Of MYKHEL
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm