ಬ್ರೇಕಿಂಗ್ ನ್ಯೂಸ್
05-03-21 12:13 pm Source: MYKHEL ಕ್ರೀಡೆ
ಭಾರತದ ವಿರುದ್ಧದ ಅಂತಿಮ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಕಳಪೆ ಪ್ರದರ್ಶನವನ್ನು ನೀಡಿದ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳನ್ನು ಇಂಗ್ಲೆಂಡ್ ತಂಡದ ಮತ್ತೋರ್ವ ಮಾಜಿ ಕ್ರಿಕೆಟಿಗ ಟೀಕಿಸಿದ್ದಾರೆ. ಮೈಕಲ್ ವಾನ್ ಕೆವಿನ್ ಪೀಟರ್ಸನ್ ಬಳಿಕ ಆಂಡ್ರೋ ಸ್ಟ್ರಾಸ್ ಕೂಡ ಭಾರತೀಯ ನೆಲದಲ್ಲಿ ಇಂಗ್ಲೆಂಡ್ ಆಟಗಾರರ ಕಳಪೆ ಬ್ಯಾಟಿಂಗ್ ಬಗ್ಗೆ ಕುಟುಕಿದ್ದಾರೆ.
ಮೂರನೇ ಟೆಸ್ಟ್ ಪಂದ್ಯ ಎರಡೇ ದಿನಕ್ಕೆ ಅಂತ್ಯವಾದ ಬಳಿಕ ಸ್ಟ್ರಾಸ್ ಅಹ್ಮದಾಬಾದ್ ಪಿಚ್ ಬಗ್ಗೆ ಟೀಕೆಯನ್ನು ಮಾಡಿದ್ದರು. ನಾಲ್ಕನೇ ಪಂದ್ಯವನ್ನು ಕೂಡ ಅಹ್ಮದಾಬಾದ್ನಲ್ಲಿಯೇ ಆಡಿದ್ದರಾದರೂ ಬೇರೆ ಪಿಚ್ನಲ್ಲಿ ಆಡಲಾಗುತ್ತಿದೆ. ಈ ಹಿಂದಿನ ಪಂದ್ಯದಂತೆ ಹೆಚ್ಚಿನ ತಿರುವನ್ನು ಚೆಂಡು ಪಿಚ್ ಈ ಪಿಚ್ನಲ್ಲಿ ಮೊದಲ ದಿನದಾಟದಲ್ಲಿ ಪಡೆದಿರಲಿಲ್ಲ. ಹಾಗಿದ್ದರೂ ಇಂಗ್ಲೆಂಡ್ 205 ರನ್ಗಳಿಸಲಷ್ಟೇ ಶಕ್ತವಾಗಿತ್ತು.
"ಭಾರತೀಯ ಬೌಲಿಂಗ್ ದಾಳಿ ಅತ್ಯುತ್ತಮವಾಗಿತ್ತು. ನಾವು ಉತ್ತಮ ಗುಣಮಟ್ಟದ ಭಾರತೀಯ ಬೌಲಿಂಗ್ ದಾಳಿಯನ್ನು ನಿರೀಕ್ಷಿಸಿದ್ದೆವು. ಆದರೆ ಸತ್ಯವನ್ನು ನಾವು ಮರೆಮಾಚಲು ಸಾಧ್ಯವಿಲ್ಲ. ಇಂತಾ ಪರಿಸ್ಥಿತಿಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಗುಣಮಟ್ಟ ಸಾಕಾಗಲಿಲ್ಲ. ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ" ಎಂದಿದ್ದಾರೆ ಆ್ಯಂಡ್ರೋ ಸ್ಟ್ರಾಸ್.
"ಪಿಚ್ ಬಗ್ಗೆ, ಎಸೆತಗಳ ಬಗ್ಗೆ ಹಾಗೂ ಅನನುಭವದ ಬಗ್ಗೆ ಎಲ್ಲಾ ರೀತಿಯ ನೆಪಗಳನ್ನು ನೀವು ಯೋಚಿಸಬಹುದು. ಆದರೆ ಭಾರತದಲ್ಲಿ ನೀವು ಗೆಲ್ಲಲೇಬೇಕಾದರೆ ಮೊದಲ ಇನ್ನಿಂಗ್ಸ್ನಲ್ಲಿ ನೀವು ರನ್ಗಳಿಸಿವು ದಾರಿಯನ್ನು ಹೊಂದಿರಲೇಬೇಕು. ಅದನ್ನು ಇಂಗ್ಲೆಂಡ್ಗೆ ಸಾಧಿಸಲು ಸಾಧ್ಯವಾಗಿಲ್ಲ" ಎಂದಿದ್ದಾರೆ ಸ್ಟ್ರಾಸ್.
ಇಂಗ್ಲಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರತ 2-1 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ಗೆ ಸರಣಿಯನ್ನು ಡ್ರಾ ಗೊಳಿಸಬೇಕಾದರೆ ಗೆಲುವು ಅನಿವಾರ್ಯವಾಗಿದೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm