ಬ್ರೇಕಿಂಗ್ ನ್ಯೂಸ್
07-03-21 04:11 pm Source: MYKHEL Madhukara Shetty ಕ್ರೀಡೆ
ಐಪಿಎಲ್ನ 14ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಮೂಲಕ ಐಪಿಎಲ್ ಆರಂಭದ ಚಟುವಟಿಕೆಗಳು ಮತ್ತಷ್ಟು ಗರಿಗೆದರಲು ಆರಂಭವಾಗಿದೆ. ಈ ವೇಳಾಪಟ್ಟಿ ಬಿಡುಗಡೆಯಾಗುವ ಮೂಲಕ ಸಾಕಷ್ಟು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಗಳೂ ದೊರೆತಿದೆ.
ಭಾರತ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಅಂತ್ಯವಾಗಿ 19 ದಿನಗಳ ಬಳಿಕ ಈ ಮಹತ್ವದ ಟೂರ್ನಿಗೆ ಚಾಲನೆ ದೊರೆಯಲಿದೆ. ಐಪಿಎಲ್ ಯಾವಾಗ ಆರಂಭವಾಗಲಿದೆ ಎಂಬುದರಿಂದ ಹಿಡಿದು ಈ ಬಾರಿಯ ಐಪಿಎಲ್ಗೆ ಆತಿಥ್ಯವಹಿಸುವ ಕ್ರೀಡಾಂಗಣಗಳು ಯಾವುದು? ಯಾವಾಗ ಫೈನಲ್ ಪಂದ್ಯ ನಡೆಯಲಿದೆ? ಪ್ರೇಕ್ಷಕರಿಗೆ ಕ್ರೀಡಾಂಗಣಕ್ಕೆ ಅವಕಾಶಗಳು ದೊರೆಯಲಿದೆಯಾ ಎಂಬುದು ಸೇರಿದಂತೆ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿತ್ತು. ಈ ಬಗೆಗಿನ ಉತ್ತರಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದರು.
ಈ ಪ್ರಶ್ನೆಗಳಿಗೆ ಉತ್ತರಗಳು ದೊರೆಯುವ ಜೊತೆಗೆ ಕೆಲ ಕುತೂಹಲಕಾರಿ ಸಂಗತಿಗಳು ಕೂಡ ಬೆಳಕಿಗೆ ಬಂದಿದೆ.
ಆರು ಕ್ರೀಡಾಂಗಣದಲ್ಲಿ ಪಂದ್ಯಗಳು
ಭಾರತದಲ್ಲಿ ಪ್ರತಿ ಬಾರಿಯೂ ಪಂದ್ಯಗಳು ನಡೆಯುವಾಗ ಪ್ರತಿ ತಂಡಗಳಿಗೂ ತವರು ಅಂಗಳಗಳು ಇದ್ದು ತವರು ಹಾಗೂ ಹೊರಗಿನ ಅಂಗಳದಲ್ಲಿ ಪಂದ್ಯಗಳನ್ನು ಆಡುವುದು ಸಾಮಾನ್ಯವಾಗಿದೆ. ಆದರೆ ಈ ಬಾರಿ ಕೊರೊನಾ ವೈರಸ್ನ ಕಾರಣದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೇವಲ 6 ಅಂಗಳಗಳಲ್ಲಿ ಪಂದ್ಯಗಳು ನಡೆಯಲಿದೆ. ಚೆನ್ನೈ, ಮುಂಬೈ, ಅಹ್ಮದಾಬಾದ್, ಡೆಲ್ಲಿ, ಬೆಂಗಳೂರು ಹಾಗೂ ಕೊಲ್ಕತ್ತಾ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿದೆ
ತವರು ಅಂಗಳದಲ್ಲಿ ಆಡಲ್ಲ ತಂಡಗಳು
ಮತ್ತೊಂದು ಕುತೂಹಲಕಾರಿ ಸಂಗತಿಯೆಂದರೆ ಈ ಬಾರಿಯ ಐಪಿಎಲ್ನಲ್ಲಿ ಯಾವುದೇ ತಂಡಗಳು ಕೂಡ ತವರು ಕ್ರೀಡಾಂಗಣದಲ್ಲಿ ಎದುರಾಳಿಯನ್ನು ಎದುರಿಸುವುದಿಲ್ಲ. ಅಂದರೆ ಉದಾಹರಣೆಗೆ ಆರ್ಸಿಬಿ ತಂಡ ಬೆಂಗಳೂರಿನ ಕ್ರೀಡಾಂಗಣದಲ್ಲಿ ಒಂದೇ ಒಂದು ಪಂದ್ಯವನ್ನೂ ಆಡುವುದಿಲ್ಲ. ಪ್ರತಿಯೊಂದು ತಂಡಕ್ಕೂ ಇದೇ ರೀತಿಯಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ. ಹೀಗಾಗಿ ಪ್ರತಿಯೊಂದು ಪಂದ್ಯವೂ ಕೂಡ ತಟಸ್ಥ ಕೇಂದ್ರಗಳಲ್ಲಿಯೇ ನಡೆಯಲಿದೆ. ಹೆಚ್ಚಿನ ಪ್ರಯಾಣವನ್ನು ತಪ್ಪಿಸುವುದು ಹಾಗೂ ಪ್ರತಿ ಫ್ರಾಂಚೈಸಿಗೂ ಸಮಾನ ಅವಕಾಶವನ್ನು ನಿಡುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಮೊದಲಾರ್ಧದಲ್ಲಿ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯ
ಕೊರೊನಾ ವೈರಸ್ನ ಮುಂಜಾಗ್ರಥಾ ಕ್ರಮವಾಗಿ ಈ ಬಾರಿಯ ಐಪಿಎಲ್ನ ಮೊದಲಾರ್ಧದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣಗಳಲ್ಲಿಯೇ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮೊದಲಾರ್ಧ ಅಂತ್ಯದ ಬಳಿಕ ಮತ್ತೊಮ್ಮೆ ಪರಿಶೀಲನೆಯನ್ನು ನಡೆಸಿ ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ.
This News Article Is A Copy Of MYKHEL
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm