ಬ್ರೇಕಿಂಗ್ ನ್ಯೂಸ್
09-03-21 01:34 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಿಂದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆರ್ಚರ್ಗೆ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕಾಡಿದ ಗಾಯದ ಸಮಸ್ಯೆಯ ಕಾರಣದಿಂದಾಗಿ ಚುಟುಕು ಸರಣಿಯಿಂದ ಹೊರಗುಳಿಯುವ ಆತಂಕವನ್ನು ಎದುರಿಸಿದ್ದರು.
ಆದರೆ ಆರ್ಚರ್ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಮರ್ಥರಾಗಿದ್ದಾರೆ ಎನ್ನಲಾಗಿದೆ. ಜೋಫ್ರಾ ಆರ್ಚರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗುವ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ. ಆದರೆ ಕಳೆದ ಭಾನುವಾರ ಹಾಗೂ ಸೋಮವಾರ ಜೋಫ್ರಾ ಆರ್ಚರ್ ಅವರು ನೆಟ್ಸ್ನಲ್ಲಿ ಅಭ್ಯಾಸ ನಡೆಸುವಾಗ ಅವರ ಚೇತರಿಕೆಯ ಮೇಲೆ ವೈದ್ಯಕೀಯ ತಂಡ ನಿಗಾವಹಿಸಿತ್ತು.
25ರ ಹರೆಯದ ಆಲ್ರೌಂಡರ್ ಭಾರತದ ವಿರುದ್ಧಧ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಗಾಯದ ಕಾರಣದಿಂದಾಗಿ ತಪ್ಪಿಸಿಕೊಂಡಿದ್ದರು. ಮೊಣಕೈ ನೋವಿಗೆ ಒಳಗಾಗಿದ್ದ ಆರ್ಚರ್ ಒಳಗಾಗಿದ್ದರು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ಈಗ ಸಂಪೂರ್ಣ ಪ್ರಮಾಣದ ತಂಡದೊಂದಿಗೆ ಸೀಮಿತ ಓವರ್ಗಳ ಸರಣಿಗೆ ಸಿದ್ದವಾಗುತ್ತಿದೆ. ಈ ಸರಣಿಗಾಗಿ ಇಂಗ್ಲೆಂಡ್ ತಂಡದ ಚಿಕ್ಕಾಣಿಯನ್ನು ಇಯಾನ್ ಮಾರ್ಗನ್ ವಹಿಸಿಕೊಳ್ಳಲಿದ್ದಾರೆ. ಐದು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಭಾರತದ ವಿರುದ್ಧ ಇಂಗ್ಲೆಂಡ್ ಆಡಲಿದೆ.
ಜೋಫ್ರಾ ಆರ್ಚರ್ ಗಾಯ ರಾಜಸ್ಥಾನ್ ರಾಯಲ್ಸ್ ತಂಡಕ್ಕೂ ಆತಂಕವನ್ನುಂಟು ಮಾಡಿದೆ. ಆರ್ಆರ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಬಾರಿಯ ಐಪಿಎಲ್ನಲ್ಲಿಯೂ ಆಡುವ ಬಗ್ಗೆ ಅನುಮಾನಗಳು ಳುವಂತೆ ಮಾಡಿತ್ತು. ಆದರೆ ಭಾರತದ ವಿರುದ್ಧದ ಟಿ20 ಸರಣಿಗೆ ಲಭ್ಯರಾಗಲಿದ್ದಾರೆ ಎಂಬ ಸುದ್ಧಿ ಒಂದಷ್ಟು ನಿರಾಳತೆ ಮೂಡುವಂತೆ ಮಾಡಿದೆ.
This News Article Is A Copy Of MYKHEL
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm