ಬ್ರೇಕಿಂಗ್ ನ್ಯೂಸ್
13-03-21 10:40 am Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಈ ಸೋಲಿನ ಬಳಿಕ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರತಿಕ್ರಿಯೆ ನೀಡಿ ಸುದ್ದಿಯಾಗಿದ್ದಾರೆ. ಟೀಮ್ ಇಂಡಿಯಾಗಿಂತ ಮುಂಬೈ ಇಂಡಿಯನ್ಸ್ ಬಲಿಷ್ಠ ತಂಡ ಎಂದು ಮೈಕಲ್ ವಾನ್ ಕಾಲೆಳೆಯುವ ಮೂಲಕ ವಿರಾಟ್ ಕೊಹ್ಲಿ ಬಳಗವನ್ನು ಕುಟುಕುವ ಪ್ರಯತ್ನ ಮಾಡಿದ್ದಾರೆ.
ಈ ಹಿಂದೆ ಟೆಸ್ಟ್ ಸರಣಿಯ ಸಂದರ್ಭದಲ್ಲೂ ಮೈಕಲ್ ವಾನ್ ವಿರಾಟ್ ಕೊಹ್ಲಿ ತಂಡವನ್ನು ಕೆಣಕುವಂತೆ ಹಲವು ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದರು. ಬಳಿಕ ಭಾರತೀಯ ಪಿಚ್ ಬಗ್ಗೆ ನೀಡಿದ ಹೇಳಿಕೆಗಳು ಕೂಡ ಸಾಕಷ್ಟು ಸುದ್ದಿಯಾಗಿತ್ತು. ಈಗ ಸೀಮಿತ ಓವರ್ಗಳ ಸರಣಿಗೂ ಮುನ್ನ ಮತ್ತೆ ಮೈಕಲ್ ವಾನ್ ಸುದ್ದಿಯಾಗಿದ್ದಾರೆ. ಆರ್ಚರ್ ಎಸೆತಕ್ಕೆ ರಿವರ್ಸ್ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್:
ವಿಡಿಯೋ "ಭಾರತೀಯ ತಂಡಕ್ಕಿಂತ ಮುಂಬೈ ಇಂಡಿಯನ್ಸ್ ಉತ್ತಮವಾದ ತಂಡ!!!" ಎಂದು ಮೈಕಲ್ ವಾನ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ಗೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಪ್ರತಿಕ್ರಿಯಿಸಿದ್ದು ಮೈಕಲ್ ವಾನ್ಗೆ ತಿರುಗೇಟು ನೀಡಿದ್ದಾರೆ. "ಎಲ್ಲಾ ತಂಡಗಳು ಕೂಡ ನಾಲ್ವರು ವಿದೇಶಿ ಆಟಗಾರರೊಂದಿಗೆ ಆಡುವಷ್ಟು ಅದೃಷ್ಟವನ್ನು ಹೊಂದಿರುವುದಿಲ್ಲ" ಎಂದು ಜಾಫರ್ ಮೈಕಲ್ವಾನ್ಗೆ ಪ್ರತ್ಯುತ್ತರವನ್ನು ನೀಡುವ ಮೂಲಕ ಇಂಗ್ಲೆಂಡ್ ವಿದೇಶಿ ಆಟಗಾರರನ್ನು ಹೆಚ್ಚಾಗಿ ಅವಲಂಬಿಸಿರುವುದಕ್ಕೆ ಕಾಲೆಳೆದಿದ್ದಾರೆ.
2021ರಲ್ಲಿ 3ನೇ ಶೂನ್ಯ ಸಂಪಾದಿಸಿದ ಕೊಹ್ಲಿ, ಬೇಡದ ಪಟ್ಟಿಯಲ್ಲಿ ಗಂಗೂಲಿಯನ್ನು ಹಿಂದಿಕ್ಕಿದ ವಿರಾಟ್ ಐಪಿಎಲ್ನಲ್ಲಿ ತಂಡವೊಂದು ನಾಲ್ವರು ವಿದೇಶಿ ಆಟಗಾರರನ್ನು ಹೊಂದಿರುವುದಕ್ಕೆ ಅವಕಾಶವಿದೆ. ಆದರೆ ರಾಷ್ಟ್ರೀಯ ತಂಡವಾಗಿರುವ ಇಂಗ್ಲೆಂಡ್ ತಂಡ ಇದೇ ಮಾದರಿಯಲ್ಲಿ ವಿದೇಶಿ ಆಟಗಾರರನ್ನು ಹೋಮದಿ ಕಣಕ್ಕಿಳಿಯುತ್ತಿದೆ ಎಂದು ಜಾಫರ್ ಮೈಕಲ್ ವಾನ್ ಕಾಳೆಳೆದಿದ್ದಾರೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm