ಬ್ರೇಕಿಂಗ್ ನ್ಯೂಸ್
15-03-21 11:18 am source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತದ ಪರವಾಗಿ ಮೊದಲ ಬಾರಿಗೆ ಕಣಕ್ಕಿಳಿದ ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಚೊಚ್ಚಲ ಪಂದ್ಯದಲ್ಲಿ ಅರ್ಧ ಶತಕವನ್ನು ಸಿಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಸ್ಮರಣೀಯ ಪದಾರ್ಪಣೆಯನ್ನು ಮಾಡಿದ್ದಾರೆ. ಆದರೆ ಈ ಪಂದ್ಯದಲ್ಲಿ ಭಾರತದ ಪರವಾಗಿ ಬ್ಯಾಟಿಂಗ್ಗೆ ಇಳಿಯುವ ಮುನ್ನ ಇಶಾನ್ ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರಿಂದ ಉಪಯುಕ್ತ ಸಲಹೆಯನ್ನು ಪಡೆದುಕೊಂಡಿದ್ದರು.
ಪಂದ್ಯದ ಅಂತ್ಯದ ಬಳಿಕ ಇಶಾನ್ ಕಿಶನ್ ಮಾಧ್ಯಗಳೊಂದಿಗೆ ಮಾತನಾಡುತ್ತಾ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. "ಪಂದ್ಯದ ಆರಂಭಕ್ಕೆ ಮುನ್ನ ರೋಹಿತ್ ಭಾಯ್ ನೀನು ಇನ್ನಿಂಗ್ಸ್ ಆರಂಬಿಸಲಿದ್ದೀಯಾ ಎಂದು ತಿಳಿಸಿದರು. ಐಪಿಎಲ್ನಲ್ಲಿ ನೀನು ಆಡಿದಂತೆಯೇ ನಿರ್ಭೀತಿಯಿಂದ ಹಾಗೂ ಸ್ಪಷ್ಟವಾಗಿ ಆಡು ಎಂದು ಹೇಳಿದ್ದರು" ಎಂದು ಇಶಾನ್ ಕಿಶನ್ ವಿವರಿಸಿದ್ದಾರೆ.
ಭಾರತ vs ಇಂಗ್ಲೆಂಡ್: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ "ಆದರೆ ರಾಷ್ಟ್ರ ಧ್ವಜವನ್ನು ನೋಡಿದ ನಂತರ ಹಾಗೂ ಟೀಮ್ ಇಂಡಿಯಾ ಜರ್ಸಿಯನ್ನು ತೊಟ್ಟ ನಂತರ ನಾನು ಸ್ವಲ್ಪ ನರ್ವಸ್ ಆದೆ. ಆದರೆ ನಾನು ನನ್ನ ಅತ್ಯುತ್ತಮ ಆಟವನ್ನು ನೀಡಲು ಬಯಸಿದ್ದೆ" ಎಂದು ಇಶಾನ್ ಕಿಶನ್ ಮೊದಲ ಪಂದ್ಯದ ಬಗ್ಗೆ ಮಾತನಾಡುತ್ತಾ ಹೇಳಿದ್ದಾರೆ.
ಇಶಾನ್ ಕಿಶನ್ ದೇಶೀಯ ಕ್ರಿಕೆಟ್ನಲ್ಲಿ ಹಾಗೂ ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ ರಾಷ್ಟ್ರೀಯ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಐಪಿಎಲ್ನಲ್ಲಿ ಮುಂಬೈ ತಂಡದ ಪರವಾಗಿ ಕಣಕ್ಕಿಳಿಯುವ ಇಶಾನ್ ಕಿಶನ್ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಆಡಿದ ಅನುಭವ ಹೊಂದಿದ್ದಾರೆ.
ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಇನ್ನು ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವಿಶ್ರಾಂತಿಯನ್ನು ಪಡೆದಿದ್ದರು. ಮೊದಲ ಪಂದ್ಯದಲ್ಲಿ ಶಿಖರ್ ಧವನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರೆ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಕೆಎಲ್ ರಾಹುಲ್ ಜೊತೆಗೆ ಇನ್ನಿಂಗ್ಸ್ ಆರಂಭಿಸುವ ಹೊಣೆಹೊತ್ತಿದ್ದರು.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm