ಬ್ರೇಕಿಂಗ್ ನ್ಯೂಸ್
16-03-21 12:37 pm Source: MYKHEL ಕ್ರೀಡೆ
2021ರಲ್ಲಿ ಅದ್ಭುತ ಆರಂಭವನ್ನು ಪಡೆದ ಬ್ಯಾಡ್ಮಿಂಟನ್ನ ಅಗ್ರಶ್ರೇಯಾಂಕಿತ ಆಟಗಾರ್ತಿ ಮೂರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಕರೋಲಿನಾ ಮರಿನ್ ಗಾಯದ ಹಿನ್ನಲೆಯಲ್ಲಿ ಆಲ್ ಇಂಗ್ಲೆಂಡ್ ಓಪನ್ ಟೂರ್ನಿಯಿಂದ ಹೊರಗುಳಿದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಇದನ್ನು ಅವರು ಬಹಿರಂಗ ಪಡಿಸಿದರು. ರಿಯೋ ಒಲಿಂಪಿಕ್ಸ್ನ ಚಿನ್ನದ ಪದಕ ವಿಜೇತೆಯಾಗಿರುವ ಕರೋಲಿನಾ ಮರಿನ್ ಮುಂಬರುವ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಷನ್ನ ಈ ಸರಣಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ. ಬರ್ಮಿಂಗ್ಹ್ಯಾಮ್ನಲ್ಲಿ ಮಾರ್ಚ್ 17ರಿಂದ ಆಲ್ ಇಂಗ್ಲೆಂಡ್ ಓಪನ್ ಆರಂಭವಾಗಲಿದೆ.
ಸ್ವಿಸ್ ಓಪನ್ 2021: ಫೈನಲ್ಗೆ ಲಗ್ಗೆಯಿಟ್ಟ ಭಾರತದ ಪಿವಿ ಸಿಂಧು ಈ ಪ್ರತಿಷ್ಟಿತ ಟೂರ್ನಿಯಲ್ಲಿ ಕರೋಲಿನಾ 2015ರಲ್ಲಿ ಗೆಲುವಿನ ಸವಿ ಕಂಡಿದ್ದರು. ಆದರೆ ಸ್ವಿಸ್ ಓಪನ್ ವೇಳೆ ಉಂಟಾದ ಗಾಯದ ಹಿನ್ನೆಲೆಯಲ್ಲಿ ಈ ಟೂರ್ನಿ ಟೋಕಿಯೋ ಒಲಿಂಪಿಕ್ಸ್ನ ಕ್ವಾಲಿಫೈಯರ್ ಆಗಿಲ್ಲವಾದ ಕಾರಣ ಹಿಂದಕ್ಕೆ ಸರಿಯುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಇನ್ನು ಕರೋಲಿನಾ ಮರಿನ್ ಅವರ ಈ ನಿರ್ಧಾರ ಪಿ ಸಿಂಧುಗೆ ಲಾಭವಾಗಬಹುದು ಎಂಬ ನಿರೀಕ್ಷೆಯಿದೆ. ಈ ಹಿಂದಿನ ಹಲವು ಪ್ರಮುಖ ಟೂರ್ನಿಗಳಲ್ಲಿ ಗೆಲುವಿಗೆ ಪಿಸಿ ಸಿಂಧುಗೆ ಕರೋಲಿನಾ ಅಡ್ಡಿಯಾಗಿದ್ದರು. 2019ರ ವಿಶ್ವ ಚಾಂಪಿಯನ್ ಪಿವಿ ಸಿಂಧು ಈ ಬಾರಿ ಅಗ್ರ ಶ್ರೇಯಾಂಕಿತೆ ಕರೋಲಿನಾ ಅಲಭ್ಯತೆಯ ಲಾಭವನ್ನು ಪಡೆಯುವ ಸಾಧ್ಯತೆ ಇದೆ.
ಬಿಡಬ್ಲ್ಯೂಎಫ್ ವರ್ಲ್ಡ್ ಟೂರ್ ಫೈನಲ್ಸ್ಗೆ ಅದೃಷ್ಟವಶಾತ್ ಅರ್ಹತೆ ಪಡೆದ ಪಿವಿ ಸಿಂಧು! ಆಲ್ ಇಂಗ್ಲೆಂಡ್ ಓಪನ್ 2021 ರಿಂದ ಮರಿನ್ ಹೊರಗುಳಿಯುವುದರೊಂದಿಗೆ ತೈವಾನ್ನ ತೈ ತ್ಸು ಯಿಂಗ್ ಮತ್ತು ಚೀನಾದ ಚೆನ್ ಯುಫೈ ಅವರೂ ಕೂಡ ಇಲ್ಲದಿರುವುದು, ಪಿವಿ ಸಿಂಧು ಅವರಿಗೆ ಮೊದಲ ಬಾರಿಗೆ ಆಲ್ ಇಂಗ್ಲೆಂಡ್ ಓಪನ್ ಗೆಲ್ಲುವ ಹಾದಿ ತೆರೆದಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm