ಬ್ರೇಕಿಂಗ್ ನ್ಯೂಸ್
17-03-21 02:50 pm Source: MYKHEL ಕ್ರೀಡೆ
ಯುವ ಲಾಂಗ್ಜಂಪ್ ಪಟು 21ರ ಹರೆಯದ ಶ್ರೀಶಂಕರ್ 2021ರ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ದಾಖಲೆ ನಿರ್ಮಾಣ ಮಾಡಿ ಶ್ರೀಶಂಕರ್ ಈ ಅರ್ಹತೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಾಟಿಯಾಲದಲ್ಲಿ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಆಥ್ಲೆಟಿಕ್ಸ್ ಚಾಂಪಿಯನ್ಷಿಪ್ ನಡೆಯುತ್ತಿದ್ದು ಇದರಲ್ಲಿ ಕೇರಳ ಮೂಲಕ ಮುರಳಿ ಶ್ರೀಶಂಕರ್ 8.26 ಮೀಟರ್ ದೂರಕ್ಕೆ ನೆಗೆದು ಈ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆಯಲು 8.22 ಮೀಟರ್ ಜಿಗಿಯುವ ಮಾನದಂಡಕ್ಕಿಂತ ದೂರ ಜಿಗಿದಿದ್ದಾರೆ ಶ್ರೀಶಂಕರ್. ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪೆನ್ಸರ್ ಎನಿಸಿಕೊಂಡ ಭವಾನಿ ದೇವಿ ಲಾಂಗ್ಜಂಪ್ನಲ್ಲಿ ಈ ಹಿಂದೆ ರಾಷ್ಟ್ರೀಯ ದಾಖಲೆಯನ್ನು ಶ್ರೀಶಂಕರ್ ಅವರೇ ಹೊಂದಿದ್ದರು.
2018ರಲ್ಲಿ 8.20 ಮೀಟರ್ ಜಿಗಿದು ಈ ಮೊದಲು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದರು ಶ್ರೀಶಂಕರ್ ಈಗ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಲ್ಲದೆ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡು ಭರವಸೆ ಮೂಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಐದನೇ ಪ್ರಯತ್ನದಲ್ಲಿ ಶ್ರೀಶಂಕರ್ ಈ ಸಾಧನೆಯನ್ನು ಮಾಡಿದ್ದಾರೆ.
ಆರಂಭದ ಪ್ರಯತ್ನದಲ್ಲಿ 8.02, ನಂತರ 8.04, 8.07 ಮತ್ತು 8.09 ದೂರ ಜಿದಿದ್ದರು. ಆದರೆ ಅಂತಿಮ ಪ್ರಯತ್ನದಲ್ಲಿ 8.26 ಮೀಟರ್ ದೂರಕ್ಕೆ ಜಿಗಿಯಲು ಯಶಸ್ವಿಯಾದರು. ಇನ್ನೋರ್ವ ಕೇರಳದ ಲಾಂಗ್ಜಂಪ್ ಪಟು ಮುಹಮ್ಮದ್ ಅನೀಸ್ 8 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರೆ ಕರ್ನಾಟಕದ ಎಸ್ ಲೋಕೇಶ್ 7.60 ಮೀಟರ್ ಜಿಗಿದು ಕಂಚಿನ ಪದಕ ಪಡೆದಿದ್ದಾರೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm