ಬ್ರೇಕಿಂಗ್ ನ್ಯೂಸ್
18-03-21 04:09 pm Source: MYKHEL ಕ್ರೀಡೆ
ಕಳೆದ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡಿ ಐಪಿಎಲ್ನಿಂದ ಲೀಗ್ ಹಂತದಲ್ಲಿಯೇ ಹೊರಬಿದ್ದಿತ್ತು. ಪ್ರತಿ ಬಾರಿಯೂ ಪ್ಲೇ ಆಫ್ಗೆ ಲಗ್ಗೆ ಇಡುತ್ತಿದ್ದ ಚೆನ್ನೈ ತಂಡ ಕಳೆದ ಬಾರಿ ನಿರಾಸೆ ಮೂಡಿಸಿತ್ತು. ಹೀಗಾಗಿ ಈ ಬಾರಿ ದೊಡ್ಡ ಮಟ್ಟದಲ್ಲಿ ಗೆಲುವಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಲ್ಲರಿಗಿಂತ ಮೊದಲು ಅಭ್ಯಾಸವನ್ನು ಆರಂಭಿಸಿದೆ.
ಮಹೇಂದ್ರ ಸಿಂಗ್ ಧೋನಿ ಅವರು ಈ ಬಾರಿಯ ಐಪಿಎಲ್ ಅನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ್ದು ಬಹಳ ಕಠಿಣವಾದ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಧೋನಿ ಅವರ ಜೊತೆ ಚೆನ್ನೈ ತಂಡದ ಇತರ ಆಟಗಾರರು ಸಹ ಮೈದಾನದಲ್ಲಿ ಬೆವರು ಹರಿಸಿ ಅಭ್ಯಾಸ ಮಾಡುತ್ತಿದ್ದಾರೆ. ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿರುವ ಆಂಧ್ರಪ್ರದೇಶದ ಹರಿಶಂಕರ್ ರೆಡ್ಡಿ ಅಭ್ಯಾಸದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಲಗೈ ಮಧ್ಯಮವೇಗಿ ಹರಿಶಂಕರ್ ರೆಡ್ಡಿ ಎಸೆದ ಎಸೆತಕ್ಕೆ ಎಂಎಸ್ ಧೋನಿ ಅವರು ಕ್ಲೀನ್ ಬೌಲ್ಡ್ ಆಗಿದ್ದಾರೆ. ಹರಿ ಶಂಕರ್ ರೆಡ್ಡಿ ಅವರ ಈ ಎಸೆತಕ್ಕೆ ಇತರ ಬೌಲರ್ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು ಧೋನಿ ಅವರೂ ಸಹ ಹರಿ ಶಂಕರ್ ರೆಡ್ಡಿ ಅವರು ಎಸೆದ ಎಸೆತಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರ್ಷದ ಹರಿ ಶಂಕರ್ ರೆಡ್ಡಿ ಆಂಧ್ರಪ್ರದೇಶ ತಂಡದ ಆಟಗಾರ. ಆಂಧ್ರಪ್ರದೇಶ ಅಂಡರ್-19 ತಂಡದಲ್ಲಿಯೂ ಸಹ ಹರಿಶಂಕರ್ ರೆಡ್ಡಿ ಆಡಿರುವ ಅನುಭವ ಹೊಂದಿದ್ದಾರೆ. ಈಗ ಐಪಿಎಲ್ನಲ್ಲಿ ಚೆನ್ನೈ ಪಾಲಾಗಿರುವ ಹರಿ ಶಂಕರ್ ರೆಡ್ಡಿ ಅಭ್ಯಾಸದ ವೇಳೆಯೇ ವೈರಲ್ ಆಗಿದ್ದು ಟೂರ್ನಿಯಲ್ಲಿ ಮಿಂಚುತ್ತಾರಾ ಎಂದು ಕಾದು ನೋಡಬೇಕು.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm