ಬ್ರೇಕಿಂಗ್ ನ್ಯೂಸ್
22-03-21 02:40 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಬಳಿಕ ಇಂಗ್ಲೆಂಡ್ ವೇಗಿ ಜೋಪ್ರಾ ಆರ್ಚರ್ ಏಕದಿನ ತಂಡದಿಂದ ಹೊರಗುಳಿದಿದ್ದಾರೆ. ಆದರೆ ಭಾರತದ ವಿರುದ್ಧದ ಏಕದಿನ ಸರಣಿಯ ಜೊತೆಗೆ ಜೋಪ್ರಾ ಆರ್ಚರ್ ಐಪಿಎಲ್ನ ಕೆಲ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ ಮಾಹಿತಿ ನೀಡಿದೆ.
ಬಲ ಮೊಣಕೈ ಗಾಯದ ಹಿನ್ನೆಲೆಯಲ್ಲಿ ಜೋಫ್ರಾ ಆರ್ಚರ್ ಏಕದಿನ ತಂಡದಿಂದ ಹೊರಗುಳಿದಿದ್ದು ವೈದ್ಯಕೀಯ ಪರಿಶೀಲನೆಗಾಗಿ ಯುಕೆಗೆ ಮರಳಿದ್ದಾರೆ. ಹೀಗಾಗಿ ಅವರ ವೈದ್ಯಕೀಯ ಪರಿಶೀಲನೆಯ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ವೈದ್ಯರ ನಿಗಾದಲ್ಲಿ ಜೋಫ್ರಾ ಆರ್ಚರ್ ಇರಲಿದ್ದಾರೆ. ಐಪಿಎಲ್ನಲ್ಲಿ ಜೋಫ್ರಾ ಆರ್ಚರ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
"ಭಾರತದ ವಿರುದ್ಧದ ಟಿ20 ಅಂತರರಾಷ್ಟ್ರೀಯ ಸರಣಿಯ ಅವಧಿಯಲ್ಲಿ ಆರ್ಚರ್ ಅವರ ಮೊಣಕೈ ಸಮಸ್ಯೆ ಹೆಚ್ಚಾಗಿದೆ. ಅವರ ಕಾರ್ಯಕ್ಷಮತೆಯ ಮಟ್ಟವನ್ನು ಕಾಯ್ದುಕೊಳ್ಳುವುದು ಅವರಿಗೆ ಹೆಚ್ಚು ಸವಾಲಾಗಿ ಪರಿಣಮಿಸಿದೆ" ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತಿಳಿಸಿದೆ. ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಕಳೆದ ಶನಿವಾರ ಮಾತನಾಡುತ್ತಾ ಈ ಬಾರಿಯ ಐಪಿಎಲ್ನ ಆರಂಭಿಕ ಪಂದ್ಯಗಳಿಂದ ಜೋಫ್ರಾ ಆರ್ಚರ್ ಹೊರಗುಳಿಯುವ ಸುಳಿವು ನೀಡಿದ್ದರು. ಆರ್ಚರ್ ಮೊಣಕೈ ನೋವು ಹೆಚ್ಚಾಗುತ್ತಿರುವ ವಿಚಾರವನ್ನು ಈ ಸಂದರ್ಭದಲ್ಲಿ ಅವರು ತಿಳಿಸಿದ್ದರು.
ಮಂಗಳವಾರ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಪುಣೆಯಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು ಮೂರು ಪಂದ್ಯಗಳಿಗೂ ಪುಣೆ ಕ್ರೀಡಾಂಗಣ ವೇದಿಕೆಯಾಗಲಿದೆ. ಎರಡು ತಂಡಗಳು ಚುಟುಕು ಸರಣಿಯ ನಂತರ ಏಕದಿನ ಸರಣಿಗೆ ಸಜ್ಜಾಗಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm