ಬ್ರೇಕಿಂಗ್ ನ್ಯೂಸ್
23-03-21 03:53 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಪುಣೆಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಇಬ್ಬರು ಆಟಗಾರರು ಪದಾರ್ಪಣೆಯನ್ನು ಮಾಡಿದ್ದಾರೆ. ಕನ್ನಡಿದ ವೇಗಿ ಪ್ರಸಿದ್ಧ್ ಕೃಷ್ಣ ಹಾಗೂ ಕೃನಾಲ್ ಪಾಂಡ್ಯ ಚೊಚ್ಚಲ ಬಾರಿಗೆ ಏಕದಿನ ಮಾದರಿಯಲ್ಲಿ ಭಾರತ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದಾರೆ. ಕನ್ನಡಿಗ ಪ್ರಸಿದ್ಧ್ ಕೃಷ್ಣ ಇದೇ ಮೊದಲ ಬಾರಿಗೆ ಭಾರತೀಯ ಕ್ರಿಕೆಟ್ ತಂಡಕ್ಕೆ ಕರೆಯನ್ನು ಪಡೆದಿದ್ದರು.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿಯೇ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ. ದೇಶೀಯ ಕ್ರಿಕೆಟ್ ಹಾಗೂ ಐಪಿಎಲ್ನಲ್ಲಿ ನೀಡಿದ ಪ್ರದರ್ಶನದ ಕಾ್ರಣದಿಮದಾಗಿ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪ್ರಸಿದ್ಧ್ ಕೃಷ್ಣ ಗಿಟ್ಟಿಸಿಕೊಂಡಿದ್ದಾರೆ.
ಪ್ರಸಿದ್ಧ್ ಕೃಷ್ಣ 48 ಲಿಸ್ಟ್ ಎ ಪಂದ್ಯಗಳಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ. ಇದರಲ್ಲಿ 23.07ರ ಸರಾಸರಿಯಲ್ಲಿ 81 ವಿಕೆಟ್ ಪಡೆದುಕೊಂಡಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಕರ್ನಾಟಕದ ಈ 25ರ ಹರೆಯದ ವೇಗಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಕೆಲ ಗಮನಾರ್ಹ ಪ್ರದರ್ಶನಗಳನ್ನು ನೀಡಿದ್ದಾರೆ ಪ್ರಸಿದ್ಧ್ ಕೃಷ್ಣ. ಐಪಿಎಲ್ನಲ್ಲಿ ಕೆಕೆಆರ್ ಪರವಾಗಿ 21 ಪಂದ್ಯಗಳಲ್ಲಿ ಕಣಕ್ಕಿಳಿದು 18 ವಿಕೆಟ್ ಪಡೆದಿದ್ದಾರೆ.
ಇನ್ನು ಕೃನಾಲ್ ಪಾಂಡ್ಯ ಈ ಹಿಂದೆ ಟಿ20 ಮಾದರಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಆದರೆ ಏಕದಿನ ಮಾದರಿಯಲ್ಲಿ ಆಡುವ ಬಳಗದಲ್ಲಿ ಅವಕಾಶವನ್ನು ಇದೇ ಮೊದಲ ಬಾರಿಗೆ ಪಡೆದುಕೊಂಡಿದ್ದಾರೆ. ಈ ಮೂಲಕ ಸೋದರ ಹಾರ್ದಿಕ್ ಪಾಂಡ್ಯ ಜೊತೆಗೆ ಪ್ರಥಮ ಬಾರಿಗೆ ಏಕದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತದ ಆಡುವ ಬಳಗ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm