ಬ್ರೇಕಿಂಗ್ ನ್ಯೂಸ್
28-03-21 03:32 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ಏಕದಿನ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಕಾದಾಟಕ್ಕೆ ಇಳಿದಿದೆ. ಏಕದಿನ ಸರಣಿಯಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಪಂದ್ಯ ಗೆದ್ದಿರುವ ಹಿನ್ನೆಲೆಯಲ್ಲಿ ಇಂದಿನ ಪಂದ್ಯ ಬಹಳ ಮುಖ್ಯವಾಗಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲಿ ಸ್ಥಾಪಿಸಿದ್ದಾರೆ.
ಭಾರತ ತಂಡವನ್ನು ವಿರಾಟ್ ಕೊಹ್ಲಿ ಇಂದು 200ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಕೇವಲ ಮೂರನೇ ಭಾರತೀಯ ನಾಯಕ ಎನಿಸಿದ್ದಾರೆ. ಎಂಎಸ್ ಧೋನಿ ಹಾಗೂ ಮೊಹಮ್ಮದ್ ಅಜರುದ್ದೀನ್ ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಇದ್ದಾರೆ.
ಎಂಎಸ್ ಧೋನಿ ನಾಯಕನಾಗಿ ಟೀಮ್ ಇಂಡಿಯಾವನ್ನು 332 ಪಂದ್ಯಗಳನ್ನು ಮುನ್ನಡೆಸಿದ್ದು ಮೊಹಮ್ಮದ್ ಅಜರುದ್ದೀನ್ 221 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ನಾಲ್ಕನೇ ಸ್ಥಾನದಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇದ್ದಾರೆ. ಗಂಗೂಲಿ ಭಾರತ ತಂಡವನ್ನು 195 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇನ್ನು ಗೆಲುವಿನ ಲೆಕ್ಕಾಚಾರಗಳನ್ನು ನೋಡುವುದಾದರೆ ಭಾರತ ನಾಯಕ ಕೊಹ್ಲಿಯ ನಾಯಕತ್ವದಲ್ಲಿ 127 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎಂಎಸ್ ಧೋನಿ ನಾಯಕತ್ವದಲ್ಲಿ 178 ಗೆಲುವುಗಳನ್ನು ಕಂಡಿದೆ. ಅಜರುದ್ದೀನ್ ಮುನ್ನಡೆಸಿದ 221 ಪಂದ್ಯಗಳಲ್ಲಿ ಭಾರತ 104 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿಯೂ ಭಾರತದ ನಾಯಕ ವಿರಾಟ್ ಕೊಹ್ಲಿ ಟಾಸ್ ಸೋತಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಸತತ 6ನೇ ಬಾರಿಗೆ ಭಾರತ ಟಾಸ್ ಸೋತಂತಾಗಿದೆ. ಮೊದಲಿಗೆ ಭಾರತ ಬ್ಯಾಟಿಂಗ್ ನಡೆಸಲು ಕಣಕ್ಕಿಳಿದಿದೆ.
This News Article Is A Copy Of MYKHEL
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm