ಬ್ರೇಕಿಂಗ್ ನ್ಯೂಸ್
28-03-21 03:32 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ಏಕದಿನ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಕಾದಾಟಕ್ಕೆ ಇಳಿದಿದೆ. ಏಕದಿನ ಸರಣಿಯಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಪಂದ್ಯ ಗೆದ್ದಿರುವ ಹಿನ್ನೆಲೆಯಲ್ಲಿ ಇಂದಿನ ಪಂದ್ಯ ಬಹಳ ಮುಖ್ಯವಾಗಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲಿ ಸ್ಥಾಪಿಸಿದ್ದಾರೆ.
ಭಾರತ ತಂಡವನ್ನು ವಿರಾಟ್ ಕೊಹ್ಲಿ ಇಂದು 200ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಕೇವಲ ಮೂರನೇ ಭಾರತೀಯ ನಾಯಕ ಎನಿಸಿದ್ದಾರೆ. ಎಂಎಸ್ ಧೋನಿ ಹಾಗೂ ಮೊಹಮ್ಮದ್ ಅಜರುದ್ದೀನ್ ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಇದ್ದಾರೆ.
ಎಂಎಸ್ ಧೋನಿ ನಾಯಕನಾಗಿ ಟೀಮ್ ಇಂಡಿಯಾವನ್ನು 332 ಪಂದ್ಯಗಳನ್ನು ಮುನ್ನಡೆಸಿದ್ದು ಮೊಹಮ್ಮದ್ ಅಜರುದ್ದೀನ್ 221 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ನಾಲ್ಕನೇ ಸ್ಥಾನದಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇದ್ದಾರೆ. ಗಂಗೂಲಿ ಭಾರತ ತಂಡವನ್ನು 195 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇನ್ನು ಗೆಲುವಿನ ಲೆಕ್ಕಾಚಾರಗಳನ್ನು ನೋಡುವುದಾದರೆ ಭಾರತ ನಾಯಕ ಕೊಹ್ಲಿಯ ನಾಯಕತ್ವದಲ್ಲಿ 127 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎಂಎಸ್ ಧೋನಿ ನಾಯಕತ್ವದಲ್ಲಿ 178 ಗೆಲುವುಗಳನ್ನು ಕಂಡಿದೆ. ಅಜರುದ್ದೀನ್ ಮುನ್ನಡೆಸಿದ 221 ಪಂದ್ಯಗಳಲ್ಲಿ ಭಾರತ 104 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿಯೂ ಭಾರತದ ನಾಯಕ ವಿರಾಟ್ ಕೊಹ್ಲಿ ಟಾಸ್ ಸೋತಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಸತತ 6ನೇ ಬಾರಿಗೆ ಭಾರತ ಟಾಸ್ ಸೋತಂತಾಗಿದೆ. ಮೊದಲಿಗೆ ಭಾರತ ಬ್ಯಾಟಿಂಗ್ ನಡೆಸಲು ಕಣಕ್ಕಿಳಿದಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm