ಬ್ರೇಕಿಂಗ್ ನ್ಯೂಸ್
29-03-21 11:08 am Source: MYKHEL ಕ್ರೀಡೆ
ಈ ಕ್ರಿಕೆಟ್ ಋತು ಜೀವನವಿಡೀ ನೆನಪಿನಲ್ಲಿಟ್ಟುಕೊಳ್ಳುವಂತಾ ಋತು ಎಂದು ಭಾರತದ ಮುಖ್ಯ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ. ಬಯೋ ಬಬಲ್ನಂತಾ ಕಠಿಣ ವಾತಾವರಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಟೆಸ್ಟ್ ಸರಣಿ ಗೆಲುವು ಹಾಗೂ ಇಂಗ್ಲೆಂಡ್ ವಿರುದ್ಧದ ಮೂರು ಮಾದರಿಯಲ್ಲೂ ಭಾರತದ ಸರಣಿ ಗೆಲುವಿನ ಸಾಧನೆಯನ್ನು ದೃಷ್ಟಿಯಲ್ಲಿಟ್ಟು ಈ ಮಾತುಗಳನ್ನು ಆಡಿದ್ದಾರೆ ರವಿ ಶಾಸ್ತ್ರಿ.
"ಅಭಿನಂದನೆಗಳು ಟ್ರೋಫಿಯನ್ನು ಎತ್ತಿ ಹಿಡಿದಿರುವುದಕ್ಕಾಗಿ. ವಿಶ್ವದ ಎರಡು ಅತ್ಯುತ್ತಮ ತಂಡಗಳ ವಿರುದ್ಧ ಎಲ್ಲಾ ಮಾದರಿಯಲ್ಲಿ ಕಠಿಣ ಸಮಯದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಜೀವಮಾನದ ಋತುವನ್ನು ಹೊಂದಿದ್ದೀರಿ. ಅಭಿನಂದನೆಗೆ ನೀವು ಅತ್ಯಂತ ಅರ್ಹರು" ಎಂದು ಶಾಸ್ತ್ರಿ ಆಟಗಾರರನ್ನು ಪ್ರಶಂಸಿಸಿದ್ದಾರೆ.
ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಈ ಹಿಂದೆ ಹಲವು ಬಾರಿ ಬಯೋಬಬಲ್ನಲ್ಲಿದ್ದು ಆಡುವ ಒತ್ತಡದ ಬಗ್ಗೆ ಪ್ರಸ್ತಾಪವನ್ನು ಮಾಡಿದ್ದರು. ಈಗ ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಟ್ವೀಟ್ ಮಾಡಿ ಭಾರತೀಯ ಆಟಗಾರರ ಪರವಾಗಿ ಹೊಗಳಿಕೆಯ ಮಾತುಗಳನ್ನು ಆಡಿದ್ದಾರೆ. ಭಾರತದ ಬಹುಪಾಲು ಆಟಗಾರರು ಕಳೆದ 7 ತಿಂಗಳುಗಳಲ್ಲಿ ಆಸ್ಟ್ರೇಲಿಯಾ ಪ್ರವಾಸದ ನಂತರದ ಒಂದು ವಾರವನ್ನು ಹೊರತು ಪಡಿಸಿ ಉಳಿದ ಎಲ್ಲಾ ಸಮಯಗಳನ್ನು ಬಯೋಬಬಲ್ನಲ್ಲಿಯೇ ಕಳೆದಿದ್ದಾರೆ.
ಕಳೆದ ಐಪಿಎಲ್ ಆವೃತ್ತಿ ಮುಕ್ತಾವಾಗುತ್ತಿದ್ದಂತೆಯೇ ಭಾರತದ ಬಿಡುವಿಲ್ಲದ ಋತು ಆರಂಭವಾಗಿತ್ತು. ಆರಂಭದಲ್ಲಿ ಏಕದಿನ ಸರಣಿ ಆಸ್ಟ್ರೇಲಿಯಾಗೆ 1-2 ಅಂತರದಿಂದ ಸೋಲುವ ಮೂಲಕ ಆರಂಭವಾಯಿತು. ಆದರೆ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾಗೆ ತಿರುಗೇಟು ನೀಡಿದ ಭಾರತ 2-1 ಅಂತರದಿಂದ ಗೆಲುವು ಸಾಧಿಸಿತು. ಅದಾದ ಬಳಿಕ ಬಹು ನಿರೀಕ್ಷಿತ ಟೆಸ್ಟ್ ಸರಣಿ ಭಾರತೀಯ ಅಭಿಮಾನಿಗಳ ಪಾಲಿಗೆ ಸುದೀರ್ಘ ಕಾಲ ನೆನಪಿನಲ್ಲಿ ಉಳಿಯುವಂತಾದ್ದು.
ಮೊದಲ ಪಂದ್ಯದಲ್ಲಿ ಹೀನಾಯ ಸೋಲಿನ ನಂತರ ಸ್ಟಾರ್ ಆಟಗಾರರ ಅಲಭ್ಯತೆಯ ಮಧ್ಯೆಯೂ ಭಾರತ ತಂಡದ ಆಟಗಾರರು ನೀಡಿದ ಪ್ರದರ್ಶನದಿಂದ ಭಾರತ 2-1 ಅಂತರದಿಂದ ಐತಿಹಾಸಿಕವಾಗಿ ಸರಣಿಯನ್ನು ಗೆದ್ದುಕೊಂಡಿತ್ತು.
ಬಳಿಕ ಭಾರತ ತವರಿನಲ್ಲಿಯೂ ಇದೇ ಪ್ರದರ್ಶನವನ್ನು ಮುಂದುವರಿಸಿದೆ. ಮೊದಲಿಗೆ ಟೆಸ್ಟ್ನಲ್ಲಿ 3-1 ಅಂತರದಿಂದ ಭಾರತ ಗೆಲುವು ಸಾಧಿಸಿತ್ತು. ಬಳಿಕ ಸೀಮಿತ ಓವರ್ಗಳಲ್ಲಿ ಇಂಗ್ಲೆಂಡ್ ಕಠಿಣ ಪೈಪೋಟಿಯನ್ನು ನೀಡಿತಾದರೂ ಭಾರತದ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
This News Article Is A Copy Of MYKHEKL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am