ಬ್ರೇಕಿಂಗ್ ನ್ಯೂಸ್
30-03-21 11:31 am Source: MYKHEL ಕ್ರೀಡೆ
ವಿಂಡ್ ಸರ್ಫಿಂಗ್ ವಿಭಿನ್ನವಾದ ಕ್ರೀಡಾ ಪ್ರಾಕಾರ. ಭಾರತದಲ್ಲಿ ಪುರುಷರು ಹೆಚ್ಚಿನ ಪ್ರಾಭಲ್ಯವನ್ನು ಹೊಂದಿರುವ ಕ್ರೀಡೆಯಿದು. ಸಾಕಷ್ಟು ಪರಿಣತಿ ಹಾಗೂ ಮನೋಸ್ಥೈರ್ಯವಿದ್ದರೆ ಮಾತ್ರ ಇದ್ರಲ್ಲಿ ಯಶಸ್ಸು ಗಳಿಸಲು ಸಾಧ್ಯ. ಆದರೆ ತಮಿಳುನಾಡು ಮೂಲಕ ಐಶ್ವರ್ಯ ಗಣೇಶ್ ಏಕಾಂಗಿಯಾಗಿ ವಿಂಡ್ ಸರ್ಫಿಂಗ್ ಕಲಿತು ಮೂರು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಲ್ಲದೆ ಈಗ ಒಲಿಂಪಿಕ್ಸ್ನಲ್ಲಿ ಭಾಗಿಯಾಗುವ ಕನಸು ಹೊತ್ತಿದ್ದಾರೆ.
ಐಶ್ವರ್ಯ ಗಣೇಶ್ ಮೊದಲಿಗೆ ಸೈಲಿಂಗ್(ಹಾಯಿದೋಣಿ) ತರಬೇತಿಗಾಗಿ ಎರಡು ದಶಕಗಳಿಂದ ಸೈಲಿಂಗ್ ತರಬೇತಿ ನೀಡುತ್ತಿರುವ ಡಿಪಿ ಸೆಲ್ವಂ ಅವರೊಂದಿಗೆ ಸೇರಿಕೊಂಡಿದ್ದರು. 2014ರಿಂದ 2017ರವರೆಗೆ ಸೈಲಿಂಗ್ ಅಭ್ಯಾಸವನ್ನು ಪಡೆದುಕೊಂಡಿದ್ದರು. ಆದರೆ ಐಶ್ವರ್ಯ ಗಣೇಶ್ ಸೈಲಿಂಗ್ ಜೊತೆಗೆ ವಿಂಡ್ ಸರ್ಫಿಂಗ್ ಕಡೆಗೆ ವಾಲಿದರು. ಚೆನ್ನೈ ಸಮುದ್ರದದಲ್ಲಿ ಸೈಲಿಂಗ್ ಸಹಪಾಠಿಗಳ ಜೊತೆಗೆ ವಿಂಡ್ ಸರ್ಫಿಂಗ್ ಅಭ್ಯಾಸವನ್ನು ಮಾಡತೊಡಗಿದರು.
ಆದರೆ ಈ ಸಂದರ್ಭದಲ್ಲಿ ಐಶ್ವರ್ಯಗೆ ವಿಂಡ್ ಸರ್ಫಿಂಗ್ಗೆ ಯಾವುದೇ ತಜ್ಞರು ಇರಲಿಲ್ಲ. ಯೂಟ್ಯೂಬ್ನಲ್ಲಿಯೇ ಕೆಲ ವಿಡಿಯೋಗಳನ್ನು ನೋಡಿಕೊಂಡು ವಿಂಡ್ ಸರ್ಫಿಂಗ್ನ ಚಾಕಚಕ್ಯತೆಯನ್ನು ಅಭ್ಯಾಸ ಮಾಡಲು ಆರಂಭಿಸಿದರು. ಸೈಲಿಂಗ್ನ ಜೊತೆಗೆ ವಿಂಡ್ ಸರ್ಫಿಂಗ್ನಲ್ಲಿಯೂ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಾ ಪ್ರಶಸ್ತಿ ಗಳಿಸಲು ಆರಂಭಿಸಿದರು.
"ಸೈಲ್ ಬೋಟ್ನಲ್ಲಿ ಮಾಸ್ಟರ್ ಆಗಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಗಳಿಸಲು ಸಾಮಾನ್ಯವಾಗಿ ಮೂರರಿಂದ ನಾಲ್ಕು ವರ್ಷಗಳು ಬೇಕಾಗುತ್ತದೆ. ಆದರೆ ಐಶ್ವರ್ಯ ಮೊದಲ ವರ್ಷದಲ್ಲಿಯೇ ಜೂನಿಯರ್ ಕ್ಲಾಸ್ನಿಂದ ಯೂತ್ ಕ್ಲಾಸ್ಗೆ ಬಂದು ಬಳಿಕ ಮರು ವರ್ಷವೇ ಸೀನಿಯರ್ ಕ್ಲಾಸ್ ಕೂಡ ಪೂರ್ಣಗೊಳಿಸುವುದರ ಜೊತೆಗೆ ಎಲ್ಲಾ ವಿಂಡ್ ಸರ್ಫಿಂಗ್ ಪ್ರಶಸ್ತಿಗಳನ್ನು ಕೂಡ ಗಳಿಸಿಕೊಂಡಿದ್ದಾರೆ" ಎಂದು ಐಶ್ವರ್ಯ ಗಣೇಶ್ ಅವರ ಕೋಚ್ ಡಿಪಿ ಸೆಲ್ವಂ ಹೆಮ್ಮೆ ವ್ಯಕ್ತಪಡಿಸುತ್ತಾರೆ.
ಭಾರತದಲ್ಲಿ ಪುರುಷರೇ ಪ್ರಾಬಲ್ಯವನ್ನು ಹೊಂದಿರುವ ವಿಂಡ್ ಸರ್ಫಿಂಗ್ನಲ್ಲಿ ಐಶ್ವರ್ಯ ಗಣೇಶ್ ವಿಶೇಷ ಸಾಧನೆಯನ್ನು ಮಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಐಶ್ವರ್ಯ ಗಣೇಶ್ ರಾಷ್ಟ್ರೀಯ ವಿಂಡ್ ಸರ್ಫಿಂಗ್ನಲ್ಲಿ ಚಾಂಪಿಯನ್ ಆಗಿದ್ದಾರೆ. ಈಗ ಒಮಾನ್ನಲ್ಲಿದ್ದು ಮುಸ್ಸನ್ಹಾ ಓಪನ್ ಚಾಂಪಿಯನ್ಶಿಪ್ ಇವೆಂಟ್ನಲ್ಲಿ ಪಾಲ್ಗೊಂಡಿದ್ದು ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಗಳಿಸುವ ನಿರೀಕ್ಷೆಯಲ್ಲಿದ್ದಾರೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am