ಬ್ರೇಕಿಂಗ್ ನ್ಯೂಸ್
31-03-21 12:16 pm Source: MYKHEL ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ನ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ಶ್ರೇಯಸ್ ಐಯ್ಯರ್ಗೆ ಶೀಘ್ರ ಚೇತರಿಕೆಗೆ ಹಾರೈಸಿ ಭಾವುಕ ಟ್ವೀಟ್ವೊಂದನ್ನು ಹಂಚಿಕೊಂಡಿದೆ. ಭುಜದ ಗಾಯಕ್ಕೆ ತುತ್ತಾದ ಶ್ರೇಯಸ್ ಐಯ್ಯರ್ ಈ ಬಾರಿಯ ಐಪಿಎಲ್ನಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಆದರೆ ನಿಮ್ಮೊಂದಿಗೆ ಯಾವ ಸಂದರ್ಭದಲ್ಲೂ ನಾವಿದ್ದೇವೆ ಶ್ರೇಯಸ್ ಎನ್ನುವ ಮೂಲಕ ಧೈರ್ಯ ತುಂಬಿದೆ. "ಡೆಲ್ಲಿ ತಂಡದ ನಾಯಕನಾಗಿ ಶ್ರೇಯಸ್ ಐಯ್ಯರ್ ಜವಾಬ್ಧಾರಿ ವಹಿಸಿಕೊಂಡ ನಂತರ ಹಿಂದೆಂದೂ ತಲುಪದ ಎತ್ತರಕ್ಕೆ ಏರಿಸಿದ್ದಾರೆ.
ಕಳೆದ ಆವೃತ್ತಿಯಲ್ಲಿ ಡೆಲ್ಲಿ ತಂಡವನ್ನು ಪ್ರಥಮ ಬಾರಿಗೆ ಫೈನಲ್ಗೆ ತಲುಪಿದ್ದರು. ಯಾವುದೇ ಹಂತದಲ್ಲಿ ಆತನಿಗೆ ಅಗತ್ಯವಿರುವ ಯಾವುದೇ ಸಹಾಯ ಮತ್ತು ಬೆಂಬಲಕ್ಕಾಗಿ ಫ್ರಾಂಚೈಸಿ ಯಾವಾಗಲೂ ಇರುತ್ತದೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ಟ್ವಿಟ್ ಮಾಡಿದೆ.
Statement from Delhi Capitals 📝
— Delhi Capitals (@DelhiCapitals) March 30, 2021
Shreyas has taken DC to newer heights ever since he took on the role of captain, leading the team to its very first final last year. The franchise will always be there for any assistance and support he may require at any step.#YehHaiNayiDilli pic.twitter.com/0GoDKIQKqp
"ಶ್ರೇಯಸ್ ಅಪಾರವಾಗಿ ಮಿಸ್ ಮಾಡಿಕೊಳ್ಳಲಿದ್ದಾರೆ, ಆತ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ತಮಡದ ಜರ್ಸಿಯನ್ನು ತೊಡುವುದನ್ನು ನೋಡಲು ನಮ್ಮಿಂದ ಕಾಯಲು ಸಾಧ್ಯವಿಲ್ಲ. ಆತ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆಯಲಾಗಿದೆ.
ಈ ಬಾರಿಯ ಐಪಿಎಲ್ಗೆ ಸಂಪೂರ್ಣವಾಗಿ ಶ್ರೇಯಸ್ ಐಯ್ಯರ್ ಅಲಭ್ಯರಾಗಿರುವ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಮಂಗಳವಾರ ನೂತನ ನಾಯಕನನ್ನು ಘೋಷಿಸಿದೆ. ಶ್ರೇಯಸ್ ಅಲಭ್ಯತೆಯಲ್ಲಿ ಯುವ ಆಟಗಾರ ರಿಷಬ್ ಪಂತ್ ಡೆಲ್ಲಿ ಕ್ಯಾಪಟಿಲ್ಸ್ ತಂಡವನ್ನು ಮುನ್ನಡೆಸುವ ಹೊಣೆಯನ್ನು ಹೊತ್ತುಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಹುತೇಕ ಸದಸ್ಯರು ಈಗಾಗಲೇ ಮುಂಬೈಯನ್ನು ಸೇರಿಕೊಂಡಿದ್ದು ಹೋಟೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಮೊದಲ ಕಾದಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು ಏಪ್ರಿಲ್ 10 ರಂದು ಪಂದ್ಯ ನಡೆಯಲಿದೆ.
This News Article Is A Copy Of MYKHEL
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm