ಬ್ರೇಕಿಂಗ್ ನ್ಯೂಸ್
02-04-21 01:39 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ವೇಗಿ ಟಿ ನಟರಾಜನ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ಮಿಂಚಿದ್ದರು. ಈ ಮೂಲಕ ಆಸಿಸ್ ವಿರುದ್ಧ ಸರಣಿಯಲ್ಲಿ ಭಾರತದ ಗೆಲುವಿನಲ್ಲಿ ನಟರಾಜನ್ ಪ್ರಮುಖ ಪಾತ್ರವಹಿಸಿದ್ದರು. ಈ ಪ್ರದರ್ಶನದ ಕಾರಣಕ್ಕೆ ಟಿ ನಟರಾಜನ್ ಸಹಿತ ಆರು ಯುವ ಆಟಗಾರರಿಗೆ ಉದ್ಯಮಿ ಆನಂದ್ ಮಹೀಂದ್ರಾ ಹೊಸ ಮಾದರಿಯ ಥಾರ್ ಎಸ್ಯುವಿ ಕಾರ್ಗಳನ್ನು ಉಡುಗೊರೆಯಾಗಿ ನೀಡಿದ್ದರು.
ಈ ಉಡುಗೊರೆಯಾಗಿ ದೊರೆತ ಕಾರನ್ನು ಟಿ ನಟರಾಜನ್ ತಾವು ಇಟ್ಟುಕೊಳ್ಳದೆ ತಮ್ಮ ಮೆಂಟರ್ ಜಯಪ್ರಕಾಶ್ ಅವರಿಗೆ ನೀಡಿದ್ದಾರೆ. ಐಪಿಎಲ್ನಲ್ಲಿ ತಮ್ಮ ತೀಕ್ಷ್ಣವಾದ ಯಾರ್ಕರ್ಗಳ ಮೂಲಕ ಅದ್ಭುತ ಯಶಸ್ಸು ಸಾಧಿಸಿ ಆಸಿಸ್ ಪ್ರವಾಸಕ್ಕೆ ಆಯ್ಕೆಯಾಗದ ನಟರಾಜನ್ ಅಂತಾರಾಷ್ಟ್ರೀಯ ಮಟ್ಟದಲ್ಲೂ ಅದ್ಭುತವಾದ ಪ್ರದರ್ಶನ ನಿಡುವಲ್ಲಿ ಯಶಸ್ವಿಯಾದರು.
ಟಿ ನಟರಾಜನ್ ತಮ್ಮ ಈ ಸಾಧನೆಗೆ ಮೆಂಟರ್ ಜಯಪ್ರಕಾಶ್ ಅವರ ಕೊಡುಗೆಯನ್ನು ಈ ಹಿಂದೆ ಹಲವು ಸಂದರ್ಭಗಳಲ್ಲಿ ನೆನಪಿಸಿಕೊಂಡಿದ್ದರು. ಬಡತನದಿಂದ ಬೆಳೆದು ಬಂದ ನಟರಾಜನ್ ಅವರ ಕುಟುಂಬವನ್ನು ಒಪ್ಪಿಸಿ ಪೂರ್ಣ ಪ್ರಮಾಣದಲ್ಲಿ ಕ್ರಿಕೆಟನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಲು ಜಯಪ್ರಕಾಶ್ ಕಾರಣರಾಗಿದ್ದರು. ಅಲ್ಲದೆ ನಟರಾಜನ್ ಅವರ ಬೆಳವಣಿಗೆಗೆ ಸಹಕಾರಿಯಾಗಿ ನಿಂತರು.
ಜಯಪ್ರಕಾಶ್ ಅವರ ಈ ಬೆಂಬಲಕ್ಕೆ ನಟರಾಜನ್ ಜರ್ಸಿಯಲ್ಲಿ ತಮ್ಮ ಹೆಸರಿನ ಮುಂದೆ 'JP' ಎಂದು ಬರೆದು ಗೌರವವನ್ನು ಸಲ್ಲಿಸುತ್ತಿದ್ದಾರೆ. ಅಲ್ಲದೆ ನಟರಾಜನ್ ಅವರ ಎಡ ಮೊಣಕೈಯ್ಯಲ್ಲಿ JP ಎಂಬ ಟ್ಯಾಟೂವನ್ನು ಹಾಕಿಕೊಂಡು ತನ್ನ ಮೆಂಟರ್ಗೆ ವಿಶೇಷ ಸ್ಥಾನವನ್ನು ನೀಡಿದ್ದಾರೆ.
ಈಗ ನಟರಾಜನ್ ತನಗೆ ಉಡುಗೊರೆಯಾಗಿ ದೊರೆತ ಕಾರನ್ನು ತನ್ನ ಗುರು ಹಾಗೂ ಹಿತೈಷಿ ಜಯಪ್ರಕಾರ್ಅವರಿಗೆ ನೀಡುವ ಮೂಲಕ ಗೌರವವನ್ನು ಸಲ್ಲಿಸಿದ್ದಾರೆ ಟಿ ನಟರಾಜನ್. ಈ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆಲ್ಲುವಂತಾ ನಿರ್ಧಾರ ತೆಗೆದುಕೊಂಡಿದ್ದಾರೆ.
This News Article Is A Copy Of MYKHEL
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm