ಬ್ರೇಕಿಂಗ್ ನ್ಯೂಸ್
04-04-21 10:38 am Source: MYKHEL ಕ್ರೀಡೆ
ಆರ್ಸಿಬಿ ಆಟಗಾರ ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಐಪಿಎಲ್ಗೆ ಕೆಲವೇ ದಿನಗಳು ಬಾಕಿಯಿರುವಾಗ ಈ ಬೆಳವಣಿಗೆ ಐಪಿಎಲ್ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಭಾನುವಾರ ನಡೆಸಿದ ಪರೀಕ್ಷೆಯಲ್ಲಿ ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಹೀಗಾಗಿ ಆರ್ಸಿಬಿ ತಂಡದ ಈ ಆಟಗಾರನನ್ನು ಈಗ ಉಳಿದ ತಂಡದ ಸದಸ್ಯರಿಂದ ಪ್ರತ್ಯೇಕವಾಗಿರಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಅವರು ಆಡುವುದು ಅನುಮಾನವಾಗಿದೆ. ಚೆನ್ನೈನಲ್ಲಿ ಆರ್ಸಿಬಿ ಹಾಗೂ ಮುಂಬೈ ತಂಡಗಳು ಏಪ್ರಿಲ್ 9ರಂದು ಉದ್ಘಾಟನಾ ಪಂದ್ಯದಲ್ಲಿ ಆಡಲು ಇಳಿಯಲಿದೆ. ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತಂಡದ ಪರವಾಗಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಪಡಿಕ್ಕಲ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ದೊಡ್ಡ ಸ್ಟಾರ್ ಆಗಿ ಮಿಂಚಿದ್ದರು.
ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತಂಡ ಪ್ಲೇಆಫ್ ಹಂತಕ್ಕೇರಲು ದೇವದತ್ ಪಡಿಕ್ಕಲ್ ಕೂಡ ಕಾರಣರಾಗಿದ್ದರು. ಸ್ಥಿರ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದ ಪಡಿಕ್ಕಲ್ ದಿಗ್ಗಜರಿಂದ ಮೆಚ್ಚುಗೆಗೆ ಒಳಗಾಗಿದ್ದಾರೆ.
ಈ ಬಾರಿಯ ಐಪಿಎಲ್ನಲ್ಲಿ ಕೊರೊನಾ ವೈರಸ್ಗೆ ತುತ್ತಾಗಿರುವ ಮೂರನೇ ಆಟಗಾರನಾಗಿದ್ದಾರೆ ದೇವದತ್ ಪಡಿಕ್ಕಲ್. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಿತೀಶ್ ರಾಣಾ ಮೊದಲಿಗೆ ಕೊರೊನಾ ವೈರಸ್ಗೆ ತುತ್ತಾಗಿರುವುದು ಪತ್ತೆಯಾಗಿತ್ತು. ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಕ್ಷರ್ ಪಟೇಲ್ ಕೂಡ ಕೊರೊನಾ ವೈರಸ್ಗೆ ತುತ್ತಾಗಿರುವುದು ದೃಢಪಟ್ಟಿತ್ತು.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm