ಬ್ರೇಕಿಂಗ್ ನ್ಯೂಸ್
07-04-21 02:52 pm Source: MYKHEL ಕ್ರೀಡೆ
ಏಪ್ರಿಲ್ 9ರಿಂದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುತ್ತಿದೆ. ಇನ್ನೇನು ಐಪಿಎಲ್ ಆರಂಭವಾಗುವ ಸಮಯ ಹತ್ತಿರ ಬರುತ್ತಿದ್ದಂತೆಯೇ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ಹಲವಾರು ಆಟಗಾರರಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರಿಗೂ ಸಹ ಕೊರೊನಾ ಸೋಂಕು ತಗುಲಿತ್ತು. ಮಾರ್ಚ್ 22ರಂದು ದೇವದತ್ ಪಡಿಕ್ಕಲ್ ಅವರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿತ್ತು.
ಸೋಂಕು ದೃಢಪಟ್ಟ ಬೆನ್ನಲ್ಲೇ ದೇವದತ್ ಪಡಿಕ್ಕಲ್ ಹೋಮ್ ಕ್ವಾರಂಟೈನ್ ಗೆ ಒಳಗಾದರು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು ದೇವದತ್ ಪಡಿಕ್ಕಲ್ ಅವರಿಗೆ ಎರಡನೇ ಟೆಸ್ಟ್ನಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಕಾರಣ ಮತ್ತೆ ದೇವದತ್ ಪಡಿಕ್ಕಲ್ ಆರ್ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್ಸಿಬಿ ಟ್ವೀಟ್ ಮಾಡಿದೆ.
ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್ಸಿಬಿ ಟ್ವೀಟ್ ಮಾಡಿದೆ.
ವಿಡಿಯೋದಲ್ಲಿ ಮಾತನಾಡಿರುವ ದೇವದತ್ ಪಡಿಕ್ಕಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಅವು ನನಗೆ ತುಂಬಾ ಪ್ರಮುಖವಾದವು ಎಂದು ಪಡಿಕ್ಕಲ್ ಹೇಳಿದರು. ಎರಡು ವಾರಗಳ ಹಿಂದೆ ಕೊವಿಡ್ ಪಾಸಿಟಿವ್ ವರದಿ ಬಂದಿತ್ತು ತದನಂತರ ಹೋಮ್ ಕ್ವಾರಂಟೈನ್ ಆಗಿದ್ದೆ ಇದೀಗ ಎರಡೂ ಟೆಸ್ಟ್ ಗಳಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಹಿನ್ನಲೆಯಲ್ಲಿ ತಂಡವನ್ನು ಸೇರಿಕೊಂಡಿದ್ದೇನೆ ಎಂದು ಪಡಿಕ್ಕಲ್ ಸಂತಸ ವ್ಯಕ್ತಪಡಿಸಿದರು.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm