ಬ್ರೇಕಿಂಗ್ ನ್ಯೂಸ್
07-04-21 02:52 pm Source: MYKHEL ಕ್ರೀಡೆ
ಏಪ್ರಿಲ್ 9ರಿಂದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುತ್ತಿದೆ. ಇನ್ನೇನು ಐಪಿಎಲ್ ಆರಂಭವಾಗುವ ಸಮಯ ಹತ್ತಿರ ಬರುತ್ತಿದ್ದಂತೆಯೇ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ಹಲವಾರು ಆಟಗಾರರಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರಿಗೂ ಸಹ ಕೊರೊನಾ ಸೋಂಕು ತಗುಲಿತ್ತು. ಮಾರ್ಚ್ 22ರಂದು ದೇವದತ್ ಪಡಿಕ್ಕಲ್ ಅವರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿತ್ತು.
ಸೋಂಕು ದೃಢಪಟ್ಟ ಬೆನ್ನಲ್ಲೇ ದೇವದತ್ ಪಡಿಕ್ಕಲ್ ಹೋಮ್ ಕ್ವಾರಂಟೈನ್ ಗೆ ಒಳಗಾದರು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು ದೇವದತ್ ಪಡಿಕ್ಕಲ್ ಅವರಿಗೆ ಎರಡನೇ ಟೆಸ್ಟ್ನಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಕಾರಣ ಮತ್ತೆ ದೇವದತ್ ಪಡಿಕ್ಕಲ್ ಆರ್ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್ಸಿಬಿ ಟ್ವೀಟ್ ಮಾಡಿದೆ.
ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್ಸಿಬಿ ಟ್ವೀಟ್ ಮಾಡಿದೆ.
ವಿಡಿಯೋದಲ್ಲಿ ಮಾತನಾಡಿರುವ ದೇವದತ್ ಪಡಿಕ್ಕಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಅವು ನನಗೆ ತುಂಬಾ ಪ್ರಮುಖವಾದವು ಎಂದು ಪಡಿಕ್ಕಲ್ ಹೇಳಿದರು. ಎರಡು ವಾರಗಳ ಹಿಂದೆ ಕೊವಿಡ್ ಪಾಸಿಟಿವ್ ವರದಿ ಬಂದಿತ್ತು ತದನಂತರ ಹೋಮ್ ಕ್ವಾರಂಟೈನ್ ಆಗಿದ್ದೆ ಇದೀಗ ಎರಡೂ ಟೆಸ್ಟ್ ಗಳಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಹಿನ್ನಲೆಯಲ್ಲಿ ತಂಡವನ್ನು ಸೇರಿಕೊಂಡಿದ್ದೇನೆ ಎಂದು ಪಡಿಕ್ಕಲ್ ಸಂತಸ ವ್ಯಕ್ತಪಡಿಸಿದರು.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm