ಬ್ರೇಕಿಂಗ್ ನ್ಯೂಸ್
23-08-20 04:55 pm Headline Karnataka News Network ಕ್ರೀಡೆ
ಮುಂಬೈ: ಭಾರತ ತಂಡದ ಮಾಜಿ ನಾಯಕ ಧೋನಿ ಮತ್ತು ಉಪನಾಯಕ ರೋಹಿತ್ ಶರ್ಮಾ ಅವರ ಅಭಿಮಾನಿಗಳ ನಡುವೆ ಗಲಾಟೆಯಾಗಿದ್ದು, ಓರ್ವನಿಗೆ ಗಂಭೀರವಾಗಿ ಗಾಯವಾಗಿದೆ.
ಈ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕುರುಂದವಾಡ್ ಎಂಬಲ್ಲಿ ನಡೆದಿದ್ದು, ವರದಿಯ ಪ್ರಕಾರ ಧೋನಿ ಅಭಿಮಾನಿಗಳು ರೋಹಿತ್ ಅಭಿಮಾನಿಯೋರ್ವನಿಗೆ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ. ಕೇವಲ ಬ್ಯಾನರ್ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.
ಅಗಸ್ಟ್ 15ರಂದು ನಿವೃತ್ತಿ ಘೋಷಣೆ ಮಾಡಿದ ಧೋನಿಯವ ಬ್ಯಾನರ್ ಅನ್ನು ಕುರುಂದವಾಡ್ನಲ್ಲಿ ಎಂಎಸ್ಡಿ ಅಭಿಮಾನಿಗಳು ಹಾಕಿದ್ದರು. ಕಳೆದ ಶನಿವಾರ ರೋಹಿತ್ ಶರ್ಮಾ ಅವರು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಬಂದಿದ್ದು, ಇದರ ಸಲುವಾಗಿ ರೋಹಿತ್ ಅಭಿಮಾನಿಗಳು ಕೂಡ ಇದೇ ಜಾಗದಲ್ಲಿ ಬ್ಯಾನರ್ ಹಾಕಿದ್ದಾರೆ. ಈ ವೇಳೆ ಧೋನಿಯವರ ಬ್ಯಾನರ್ ಅನ್ನು ಯಾರೋ ಕಿತ್ತು ಹಾಕಿದ್ದಾರೆ.
ನೆಚ್ಚಿನ ಆಟಗಾರನ ಬ್ಯಾನರ್ ಅನ್ನು ಕಿತ್ತು ಹಾಕಿದ್ದಾರೆ ಎಂದು ರೊಚ್ಚಿಗೆಂದ ಧೋನಿ ಅಭಿಮಾನಿಗಳು, ರೋಹಿತ್ ಅಭಿಮಾನಿಯೋರ್ವನ ಜೊತೆ ಜಗಳವಾಡಿದ್ದಾರೆ. ಈ ವೇಳೆ ರೋಹಿತ್ ಅಭಿಮಾನಿ ಕೂಡ ಗಲಾಟೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಧೋನಿ ಅಭಿಮಾನಿಗಳು ರೋಹಿತ್ ಅಭಿಮಾನಿಯನ್ನು ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಇದರಿಂದ ಆ ಯುವಕ ಆಸ್ಪತ್ರೆ ಸೇರಿದ್ದಾನೆ.
ಈ ವಿಚಾರ ವೈರಲ್ ಆಗಿ ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದಂತೆ ಬೇಸರಗೊಂಡ ಭಾರತದ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಅವರು, ಆಟಗಾರರು ಹೆಚ್ಚು ಮಾತನಾಡುವುದಿಲ್ಲ ನಿಜ. ಆದರೆ ಅವರು ಪರಸ್ಪರ ಜೊತೆಯಾಗಿ ಇರುತ್ತಾರೆ. ಅವರು ಅಗತ್ಯವಿರುವಷ್ಟು ಮಾತ್ರ ಮಾತನಾಡುತ್ತಾರೆ ಆದರೆ ಕೆಲವು ಅಭಿಮಾನಿಗಳು ಹುಚ್ಚರಾಗಿದ್ದಾರೆ. ದಯವಿಟ್ಟು ಪರಸ್ಪರರ ಕಿತ್ತಾಡಿಕೊಳ್ಳಬೇಡಿ ಮತ್ತು ಟೀಮ್ ಇಂಡಿಯಾವನ್ನು ಒಂದಾಗಿ ಪರಿಗಣಿಸಿ ಎಂದು ಟ್ವೀಟ್ ಮಾಡಿದ್ದಾರೆ.
Kya karte rehte ho paagalon.
— Virender Sehwag (@virendersehwag) August 23, 2020
Aapas mein players are either fond of each other or just don't talk much, kaam se kaam rakhte hain.
But kuchh fans alag hi level ke pagle hain. Jhagda Jhagdi mat karo, Team India ko- as one yaad karo. pic.twitter.com/i2ZpcDVogE
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm