ಬ್ರೇಕಿಂಗ್ ನ್ಯೂಸ್
23-08-20 04:55 pm Headline Karnataka News Network ಕ್ರೀಡೆ
ಮುಂಬೈ: ಭಾರತ ತಂಡದ ಮಾಜಿ ನಾಯಕ ಧೋನಿ ಮತ್ತು ಉಪನಾಯಕ ರೋಹಿತ್ ಶರ್ಮಾ ಅವರ ಅಭಿಮಾನಿಗಳ ನಡುವೆ ಗಲಾಟೆಯಾಗಿದ್ದು, ಓರ್ವನಿಗೆ ಗಂಭೀರವಾಗಿ ಗಾಯವಾಗಿದೆ.
ಈ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕುರುಂದವಾಡ್ ಎಂಬಲ್ಲಿ ನಡೆದಿದ್ದು, ವರದಿಯ ಪ್ರಕಾರ ಧೋನಿ ಅಭಿಮಾನಿಗಳು ರೋಹಿತ್ ಅಭಿಮಾನಿಯೋರ್ವನಿಗೆ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ. ಕೇವಲ ಬ್ಯಾನರ್ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.
ಅಗಸ್ಟ್ 15ರಂದು ನಿವೃತ್ತಿ ಘೋಷಣೆ ಮಾಡಿದ ಧೋನಿಯವ ಬ್ಯಾನರ್ ಅನ್ನು ಕುರುಂದವಾಡ್ನಲ್ಲಿ ಎಂಎಸ್ಡಿ ಅಭಿಮಾನಿಗಳು ಹಾಕಿದ್ದರು. ಕಳೆದ ಶನಿವಾರ ರೋಹಿತ್ ಶರ್ಮಾ ಅವರು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಬಂದಿದ್ದು, ಇದರ ಸಲುವಾಗಿ ರೋಹಿತ್ ಅಭಿಮಾನಿಗಳು ಕೂಡ ಇದೇ ಜಾಗದಲ್ಲಿ ಬ್ಯಾನರ್ ಹಾಕಿದ್ದಾರೆ. ಈ ವೇಳೆ ಧೋನಿಯವರ ಬ್ಯಾನರ್ ಅನ್ನು ಯಾರೋ ಕಿತ್ತು ಹಾಕಿದ್ದಾರೆ.
ನೆಚ್ಚಿನ ಆಟಗಾರನ ಬ್ಯಾನರ್ ಅನ್ನು ಕಿತ್ತು ಹಾಕಿದ್ದಾರೆ ಎಂದು ರೊಚ್ಚಿಗೆಂದ ಧೋನಿ ಅಭಿಮಾನಿಗಳು, ರೋಹಿತ್ ಅಭಿಮಾನಿಯೋರ್ವನ ಜೊತೆ ಜಗಳವಾಡಿದ್ದಾರೆ. ಈ ವೇಳೆ ರೋಹಿತ್ ಅಭಿಮಾನಿ ಕೂಡ ಗಲಾಟೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಧೋನಿ ಅಭಿಮಾನಿಗಳು ರೋಹಿತ್ ಅಭಿಮಾನಿಯನ್ನು ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಇದರಿಂದ ಆ ಯುವಕ ಆಸ್ಪತ್ರೆ ಸೇರಿದ್ದಾನೆ.
ಈ ವಿಚಾರ ವೈರಲ್ ಆಗಿ ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡುತ್ತಿದಂತೆ ಬೇಸರಗೊಂಡ ಭಾರತದ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಅವರು, ಆಟಗಾರರು ಹೆಚ್ಚು ಮಾತನಾಡುವುದಿಲ್ಲ ನಿಜ. ಆದರೆ ಅವರು ಪರಸ್ಪರ ಜೊತೆಯಾಗಿ ಇರುತ್ತಾರೆ. ಅವರು ಅಗತ್ಯವಿರುವಷ್ಟು ಮಾತ್ರ ಮಾತನಾಡುತ್ತಾರೆ ಆದರೆ ಕೆಲವು ಅಭಿಮಾನಿಗಳು ಹುಚ್ಚರಾಗಿದ್ದಾರೆ. ದಯವಿಟ್ಟು ಪರಸ್ಪರರ ಕಿತ್ತಾಡಿಕೊಳ್ಳಬೇಡಿ ಮತ್ತು ಟೀಮ್ ಇಂಡಿಯಾವನ್ನು ಒಂದಾಗಿ ಪರಿಗಣಿಸಿ ಎಂದು ಟ್ವೀಟ್ ಮಾಡಿದ್ದಾರೆ.
Kya karte rehte ho paagalon.
— Virender Sehwag (@virendersehwag) August 23, 2020
Aapas mein players are either fond of each other or just don't talk much, kaam se kaam rakhte hain.
But kuchh fans alag hi level ke pagle hain. Jhagda Jhagdi mat karo, Team India ko- as one yaad karo. pic.twitter.com/i2ZpcDVogE
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm