ಬ್ರೇಕಿಂಗ್ ನ್ಯೂಸ್
09-04-21 06:13 pm Source: MYKHEL ಕ್ರೀಡೆ
ಭಾರತ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೊದಲ ಪಂದ್ಯದಲ್ಲಿನ ಕುತೂಹಲಕಾರಿ ಕಾದಾಟವೊಂದನ್ನು ನೋಡಲು ಕಾದು ಕುಳಿದಿದ್ದಾರಂತೆ. ಹೀಗಂತ ಸ್ವತಃ ಆಕಾಶ್ ಚೋಪ್ರ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಭಾಗವಾಗಿರುವ ಈ ಜೋಡಿ ಮೈದಾನದಲ್ಲಿ ಮುಖಾಮುಖಿಯಾವುದು ನೋಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಆಕಾಶ್ ಚೋಪ್ರ ಹೀಗೆ ಹೇಳಿದ ಆ ಆಟಗಾರರು ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬೂಮ್ರಾ. ಈ ಇಬ್ಬರ ನಡುವಿನ ಸೆಣೆಸಾಟ ಐಪಿಎಲ್ 2021ಯ ಮೊದಲ ಪಂದ್ಯದ ಅತ್ಯಂತ ಕುತೂಹಲಕಾರಿ ಕದನವಾಗಿದೆ ಎಂದು ಆಕಾಶ್ ಚೋಪ್ರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಜಸ್ಪ್ರೀತ್ ಬೂಮ್ರಾ ಹಾಗೂ ವಿರಾಟ್ ಕೊಹ್ಲಿ ನಡುವಿನ ಸ್ಪರ್ಧೆಯನ್ನು ಬೆಸ್ಟ್ vs ಬೆಸ್ಟ್ ಮುಖಾಮುಖಿ ಎಂದು ಚೋಪ್ರ ಕರೆದಿದ್ದಾರೆ. ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ನೊಂದಿಗೆ ಐಪಿಎಲ್ಗೆ ಬಂದಿಳಿದಿದ್ದರೆ ಜಸ್ಪ್ರೀತ್ ಬೂಮ್ರಾ ವಿವಾಹವಾಗಿ ವಿರಾಮ ಪಡೆದು ಐಪಿಎಲ್ನಲ್ಲಿ ಕಣಕ್ಕಿಳಿಯುತ್ತಿದ್ದಾರೆ.
"ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ, ಮತ್ತೊಂದೆಡೆ ಬೂಮ್ರಾ ಹೊಸ ಚೆಂಡಿನ ಮೂಲಕ ದಾಳಿಗಿಳಿಯಲಿದ್ದಾರೆ. ಇದು ಕುತೂಹಲಕಾರಿ ಕಾದಾಟ ಯಾಕೆಂದರೆ ಜಸ್ಪ್ರೀತ್ ಬೂಮ್ರಾ ವಿರಾಟ್ ಕೊಹ್ಲಿಯನ್ನು ಹಲವು ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ" ಎಂದು ಚೋಪ್ರ ಹೇಳಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ವೇಗಿ ಜಸ್ಪ್ರೀತ್ ಬೂಮ್ರಾ ಉತ್ತಮ ದಾಖಲೆ ಹೊಂದಿದ್ದಾರೆ. 2013ರ ಐಪಿಎಲ್ನಲ್ಲಿ ಪದಾರ್ಪಣಾ ಪಂದ್ಯದಲ್ಲಿ ವಿರಾಟ್ ಕೊಹ್ಲಿಯನ್ನು ಮೊದಲ ಬಲಿಯಾಗಿ ಪಡೆದಿದ್ದರು ಬೂಮ್ರಾ. ಬಳಿಕ ಕಳೆದ 2020ರಲ್ಲಿ ಐಪಿಎಲ್ನ 100ನೇ ವಿಕೆಟ್ ಆಗಿ ಕೊಹ್ಲಿ ಬೂಮ್ರಾಗೆ ವಿಕೆಟ್ ಒಪ್ಪಿಸಿದ್ದಾರೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm