ಬ್ರೇಕಿಂಗ್ ನ್ಯೂಸ್
09-04-21 07:06 pm Source: MYKHEL ಕ್ರೀಡೆ
14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು ಇಂದು ( ಏಪ್ರಿಲ್ 9 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ.
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಪೈಪೋಟಿ ಮತ್ತು ಜಿದ್ದಾಜಿದ್ದಿ ಇರುವುದು ಬಹುಷಃ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆಯೇ ಎನಿಸುತ್ತದೆ.
ಈ ಜಿದ್ದಾಜಿದ್ದಿ ಮತ್ತು ಪೈಪೋಟಿ ಕೇವಲ ಮೈದಾನದಲ್ಲಷ್ಟೇ ಅಲ್ಲದೆ ಎರಡೂ ತಂಡಗಳ ಅಭಿಮಾನಿಗಳ ನಡುವೆಯೂ ಇದೆ. ಹೌದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳ ನಡುವಿನ ಪೈಪೋಟಿಯ ಬಗ್ಗೆ ನಿಮಗೆ ಹೆಚ್ಚೇನೂ ಹೇಳುವ ಅವಶ್ಯಕತೆಯಿಲ್ಲ ಎನಿಸುತ್ತದೆ, ಸಾಮಾಜಿಕ ಜಾಲತಾಣದಲ್ಲಿ ಎರಡೂ ತಂಡಗಳ ಅಭಿಮಾನಿಗಳು ಪರಸ್ಪರ ಟ್ರೋಲ್ ಮಾಡಿಕೊಂಡಿರುತ್ತಾರೆ ಮತ್ತು ಪಂದ್ಯ ನಡೆಯುವ ವೇಳೆ ಮೈದಾನಗಳಲ್ಲಿಯೂ ಸಹ ಎರಡೂ ತಂಡಗಳ ಅಭಿಮಾನಿಗಳು ಎದುರಾಳಿ ತಂಡಗಳ ವಿರುದ್ಧ ಘೋಷಣೆ ಕೂಗುತ್ತಿರುತ್ತಾರೆ.

ಇಷ್ಟೊಂದು ಜಿದ್ದಾಜಿದ್ದಿ ಮತ್ತು ಪೈಪೋಟಿ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳ ಬಗ್ಗೆ ರವಿಚಂದ್ರನ್ ಅಶ್ವಿನ್ ಯುಟ್ಯೂಬ್ ಚಾನೆಲ್ ಒಂದರಲ್ಲಿ ಮಾತನಾಡಿರುವ ವಿಡಿಯೋ ಒಂದು ಇದೀಗ ವೈರಲ್ ಆಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಬೇಕಂತಲೇ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳನ್ನು ಟಾರ್ಗೆಟ್ ಮಾಡುತ್ತಾರೆ ಆದರೆ ಸಿ ಎಸ್ ಕೆ ತಂಡದ ಅಭಿಮಾನಿಗಳು ತಮ್ಮದೇ ಶೈಲಿಯಲ್ಲಿ ಬೆಂಗಳೂರು ತಂಡದ ಅಭಿಮಾನಿಗಳಿಗೆ ಉತ್ತರಿಸುತ್ತಾರೆ. ಪೈಪೋಟಿಯ ವಿಷಯ ಬಂದಾಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳು ಯಾವುದೇ ಕಾರಣಕ್ಕೂ ಹಿಂದೆ ಉಳಿಯುವುದಿಲ್ಲ ಎಂದು ಅಶ್ವಿನ್ ಮಾತನಾಡಿದ್ದಾರೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm