ಬ್ರೇಕಿಂಗ್ ನ್ಯೂಸ್
31-07-20 06:40 pm Headline Karnataka News Network ಕ್ರೀಡೆ
ನವದೆಹಲಿ: ಕೊರೊನಾ ವೈರಸ್ ಕಾರಣದಿಂದ ಎಬಿಡಿ ವಿಲಿಯರ್ಸ್ ಸೇರಿದಂತೆ ಸೌತ್ ಆಫ್ರಿಕಾದ ಎಲ್ಲ ಆಟಗಾರರು ಐಪಿಎಲ್ ಆರಂಭದ ಪಂದ್ಯಗಳಿಗೆ ಅಲಭ್ಯವಾಗಲಿದ್ದಾರೆ ಎಂದು ವರದಿಯಾಗಿದೆ.
ಕೊರೊನಾ ವೈರಸ್ ಲಾಕ್ಡೌನ್ನಿಂದ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಐಪಿಎಲ್ ಸೆಪ್ಟಂಬರ್ 19ರಿಂದ ಯುಎಇಯಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಆದರೆ ಇದೇ ಕೊರೊನಾ ವೈರಸ್ ಕಾರಣದಿಂದ ದಕ್ಷಿಣ ಆಫ್ರಿಕಾದ ಹಲವು ಆಟಗಾರರು ಐಪಿಎಲ್ ಆರಂಭದ ಪಂದ್ಯಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದ ಬೆಂಗಳೂರು ತಂಡಕ್ಕೆ ಹೆಚ್ಚು ನಷ್ಟವಾಗಲಿದೆ.
ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ, ದಕ್ಷಿಣ ಆಫ್ರಿಕಾದಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ಅಲ್ಲಿನ ಸರ್ಕಾರ ಸೆಪ್ಟಂಬರ್ ಅಂತ್ಯದವರೆಗೂ ಇಡೀ ದೇಶವನ್ನೇ ಲಾಕ್ಡೌನ್ ಮಾಡಿದೆ. ಜೊತೆಗೆ ಅಂತಾರಾಷ್ಟ್ರೀಯ ವಿಮಾನಯಾನವನ್ನು ಸಂಪೂರ್ಣವಾಗಿ ನಿರ್ಬಂಧ ಮಾಡಿದೆ. ದಕ್ಷಿಣ ಆಫ್ರಿಕಾದ ತಜ್ಞರು ಸೆಪ್ಟಂಬರ್ ಅಂತ್ಯದವರೆಗೂ ಲಾಕ್ಡೌನ್ ತೆರವು ಮಾಡುವುದು ಬೇಡ ಎಂದು ಸರ್ಕಾರ ಸಲಹೆ ನೀಡಿದ್ದಾರೆ. ಈ ಕಾರಣದಿಂದ ಸೆಪ್ಟಂಬರ್ ಮಧ್ಯಭಾಗದಿಂದ ಆರಂಭವಾಗುವ ಐಎಪಿಲ್ ಆರಂಭದ ಪಂದ್ಯಗಳಿಗೆ ಸೌತ್ ಆಫ್ರಿಕಾದ ಆಟಗಾರರು ಅಲಭ್ಯರಾಗಲಿದ್ದಾರೆ.
ಈ ನಡುವೆ ಐಪಿಎಲ್ ಪ್ರಾಂಚೈಸಿಗಳು ವಿಶೇಷ ವಿಮಾನ ಮೂಲಕ ಆಟಗಾರರನ್ನು ಕರೆಸಿಕೊಳ್ಳುವುದಾಗಿ ಹೇಳಿಕೊಂಡಿವೆ. ಆದರೆ ಸೌತ್ ಆಫ್ರಿಕಾ ಸರ್ಕಾರ ಈ ಬಗ್ಗೆ ಯಾವುದೇ ಅನುಮತಿಯನ್ನು ಈವರೆಗೆ ನೀಡಿಲ್ಲ. ಒಂದು ವೇಳೆ ಅಲ್ಲಿನ ಸರ್ಕಾರ ಅನುಮತಿ ನೀಡದಿದ್ದರೆ ಆರ್ಸಿಬಿ ತಂಡಕ್ಕೆ ಹೆಚ್ಚಿನ ನಷ್ಟವಾಗಲಿದೆ. ಆರ್ಸಿಬಿ ಸೌತ್ ಆಫ್ರಿಕಾದ ಮೂರು ಪ್ರಮುಖ ಆಟಗಾರರನ್ನು ಮಿಸ್ ಮಾಡಿಕೊಳ್ಳಲಿದೆ. ತಂಡದ ಸ್ಫೋಟಕ ಬ್ಯಾಟ್ಸ್ ಮ್ಯಾನ್ ಎಬಿಡಿ ವಿಲಿಯರ್ಸ್, ವೇಗಿ ಡೇಲ್ ಸ್ಟೇನ್ ಹಾಗೂ ಆಲ್ರೌಂಡರ್ ಕ್ರಿಸ್ ಮೋರಿಸ್ ಅವರು ಮಿಸ್ ಆಗಲಿದ್ದಾರೆ. ಮೋರಿಸ್ ಅವರನ್ನು ಆರ್ಸಿಬಿ 10 ಕೋಟಿ ಕೊಟ್ಟು ಖರೀದಿ ಮಾಡಿದೆ.
ಸ್ಪಿನ್ನರ್ ಇಮ್ರಾನ್ ತಹೀರ್ ಹೊರತುಪಡಿಸಿ ಸೌತ್ ಆಫ್ರಿಕಾದ ಎಲ್ಲ ಆಟಗಾರರು ಐಪಿಎಲ್ ಆರಂಭದ ಪಂದ್ಯಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಎಬಿ ಡಿವಿಲಿಯರ್ಸ್ (ಆರ್ಸಿಬಿ), ಕ್ವಿಂಟನ್ ಡಿ ಕಾಕ್ (ಎಂಐ), ಡೇಲ್ ಸ್ಟೇನ್ (ಆರ್ಸಿಬಿ), ಕ್ರಿಸ್ ಮೋರಿಸ್ (ಆರ್ಸಿಬಿ), ಕಗಿಸೊ ರಬಾಡಾ (ಡಿಸಿ), ಲುಂಗಿ ಎನ್ಜಿಡಿ (ಸಿಎಸ್ಕೆ), ಫಾಫ್ ಡು ಪ್ಲೆಸಿಸ್ (ಸಿಎಸ್ಕೆ), ಇಮ್ರಾನ್ ತಾಹಿರ್ (ಸಿಎಸ್ಕೆ) , ಡೇವಿಡ್ ಮಿಲ್ಲರ್ (ಆರಾರ್), ಹಾರ್ಡಸ್ ವಿಲ್ಜೋಯೆನ್ (ಕೆಎಕ್ಸ್ಐಪಿ) ಈ ಎಲ್ಲ ಆಟಗಾರರು ಈ ಬಾರಿಯ ಐಪಿಎಲ್ ಆಡಲು ಸಿದ್ಧರಿದ್ದರು.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm