ಬ್ರೇಕಿಂಗ್ ನ್ಯೂಸ್
15-04-21 03:20 pm Source: MYKHEL ಕ್ರೀಡೆ
ಬುಧವಾರ ( ಏಪ್ರಿಲ್ 14 ) ಐಸಿಸಿ ಹೊಸ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿತು. ಈ ನೂತನ ಏಕದಿನ ಶ್ರೇಯಾಂಕ ಪಟ್ಟಿಯ ಅತ್ಯುತ್ತಮ ಬ್ಯಾಟ್ಸ್ಮನ್ ರ್ಯಾಂಕಿಂಗ್ನಲ್ಲಿ ಪಾಕಿಸ್ತಾನದ ಪ್ರತಿಭಾವಂತ ಆಟಗಾರ ಬಾಬರ್ ಅಜಂ ಇದೇ ಮೊದಲ ಬಾರಿಗೆ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಸತತವಾಗಿ 1258 ದಿನಗಳ ಕಾಲ ಅತ್ಯುತ್ತಮ ಏಕದಿನ ಬ್ಯಾಟ್ಸ್ಮನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಜಾರಿದ್ದಾರೆ. ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನೂತನ ಏಕದಿನ ನಂ.1 ಬ್ಯಾಟ್ಸ್ಮನ್ ಬಾಬರ್ ಅಜಂ ತನ್ನ ಸಹ ಆಟಗಾರ ಇಮಾಮ್ ಉಲ್ ಹಕ್ ಜೊತೆ ಮಾತುಕತೆ ನಡೆಸಿರುವ ವಿಡಿಯೋವೊಂದನ್ನು ಬಿಡುಗಡೆ ಮಾಡಿತು. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ಈ ವಿಡಿಯೋದಲ್ಲಿ ಬಾಬರ್ ಅಜಂ ತಮ್ಮ ಕ್ರಿಕೆಟ್ ಜೀವನದ ಕುರಿತು ಮತ್ತು ಈ ಮಟ್ಟದ ಸಾಧನೆ ಮಾಡಿದ ಹಾದಿ ಹೇಗಿತ್ತು ಎಂಬುದನ್ನು ಹಂಚಿಕೊಂಡರು.
ಇದೇ ವೇಳೆ ಬಾಬರ್ ಅಜಂ ವಿರಾಟ್ ಕೊಹ್ಲಿ ಅವರು ನೀಡಿದ್ದ ಸಲಹೆಯೊಂದನ್ನು ಬಿಚ್ಚಿಟ್ಟಿದ್ದಾರೆ. ಹೌದು ಬಾಬರ್ ಅಜಂಗೆ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಮಾಡುವುದು ಹೇಗೆ ಎಂಬುದರ ಕುರಿತು ಸಲಹೆಯನ್ನು ನೀಡಿದ್ದರು.
ನೆಟ್ ಪ್ರಾಕ್ಟೀಸ್ ಮಾಡುವ ವೇಳೆ ಗಂಭೀರವಾಗಿ ನಾನು ಅಭ್ಯಾಸದಲ್ಲಿ ತೊಡಗುತ್ತಿರಲಿಲ್ಲ ಹೀಗಾಗಿ ಪಂದ್ಯದಲ್ಲಿ ನಾನು ಹೇಗೆ ಆಟವಾಡುತ್ತೇನೆ ಅಂತ ಭಯವಿತ್ತು ಆ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರ ಸಲಹೆ ಪಡೆದಿದ್ದೆ ಎಂದು ಅಜಂ ತಿಳಿಸಿದ್ದಾರೆ. ನೆಟ್ ಪ್ರಾಕ್ಟೀಸ್ ಸಮಯದಲ್ಲಿ ಗಂಭೀರವಾಗಿರಬೇಕು, ಅದನ್ನು ಪಂದ್ಯದಷ್ಟೇ ಗಂಭೀರವಾಗಿ ಪರಿಗಣಿಸಬೇಕು, ಯಾವುದೇ ಕಾರಣಕ್ಕೂ ದುಡುಕಿನ ಹೊಡೆತಕ್ಕೆ ಕೈ ಹಾಕಬಾರದು, ನೆಟ್ ಪ್ರಾಕ್ಟೀಸ್ ನಲ್ಲಿ ಯಾವ ರೀತಿ ಆಡುತ್ತೇವೋ ಅದೇ ರೀತಿ ಪಂದ್ಯದಲ್ಲಿಯೂ ಸಹ ಆಡುತ್ತೇವೆ ಎಂದು ವಿರಾಟ್ ಕೊಹ್ಲಿ ನೀಡಿದ್ದ ಸಲಹೆಯನ್ನು ಬಾಬರ್ ಅಜಂ ಹಂಚಿಕೊಂಡಿದ್ದಾರೆ
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm