ಬ್ರೇಕಿಂಗ್ ನ್ಯೂಸ್
19-04-21 04:23 pm source: MYKHEL ಕ್ರೀಡೆ
ಚೆನ್ನೈ: ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ನಲ್ಲಿ ನೀರಸ ಪ್ರದರ್ಶನ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ನಾಯಕತ್ವದಡಿಯಲ್ಲಿರುವ ಸಿಎಸ್ಕೆ ಈವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಜಯ ಕಂಡಿದೆ.
ಕಳೆದ ಬಾರಿ ಸಿಎಸ್ಕೆ ತಂಡದಲ್ಲಿ ಆಲ್ ರೌಂಡರ್ ಸುರೇಶ್ ರೈನಾ ಆಡಿರಲಿಲ್ಲ. ಈ ಬಾರಿ ಚೆನ್ನೈಗೆ ಬಲ ತುಂಬಲು ರೈನಾ ತಂಡ ಸೇರಿಕೊಂಡಿದ್ದಾರೆ. ಅಷ್ಟೇ ಅಲ್ಲ, ಈ ಸೀಸನ್ನಲ್ಲಿ ಸಿಎಸ್ಕೆ ತಂಡದಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ, ಕೆ ಗೌತಮ್, ಚೇತೇಶ್ವರ ಪೂಜಾರ, ಇಂಗ್ಲೆಂಡ್ ಆಲ್ ರೌಂಡರ್ ಮೊಯೀನ್ ಕೂಡ ಇದ್ದಾರೆ.
ಸೋಮವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಎಸ್ಕೆ ಫ್ರಾಂಚೈಸಿ ಒಂದು ಮುದ್ದಾದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿತ್ತು. ರಾಬಿನ್ ಉತ್ತಪ್ಪ ಅವರ ಪುಟಾಣಿ ಪುತ್ರ ನೀಲ್ ನೋಲನ್ ಯೆಲ್ಲೋ ಆರ್ಮಿಯ ಜೆರ್ಸಿ ಹಾಕಿ ಬ್ಯಾಟ್ ಹಿಡಿದುಕೊಂಡಿದ್ದ ಚಿತ್ರವದು.
ಟ್ವಿಟರ್ನಲ್ಲಿ ಫೋಟೋ ಜೊತೆ 'ಸಿಂಹದ ಮರಿ ನೋಲನ್ಗೆ ವಿಶಿಲ್ ಹೊಡೆಯಿರಿ' ಎಂದು ಬರೆದುಕೊಳ್ಳಲಾಗಿತ್ತು. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಈ ಚಿತ್ರವನ್ನು ಉತ್ತಪ್ಪ ಕೂಡ ತನ್ನ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಹಾಕಿಕೊಂಡಿದ್ದಾರೆ. 'ಮಗನಿಗೆ ಜೆರ್ಸಿ ಇಷ್ಟವಾಗಿದೆ. ಆತ ಹೋದಲ್ಲೆಲ್ಲಾ ಇದನ್ನು ಕೊಂಡೊಯ್ಯುತ್ತಾನೆ' ಎಂದು ಉತ್ತಪ್ಪ ತನ್ನ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
This News Article Is A Copy Of MYKHEL
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm