ಬ್ರೇಕಿಂಗ್ ನ್ಯೂಸ್
22-04-21 07:03 pm Source: MYKHEL ಕ್ರೀಡೆ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರ ಹೆತ್ತವರು ಕೊರೊನಾ ಸೋಂಕಿಗೆ ತುತ್ತಾಗಿ ರಾಂಚಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಮಾಹಿತಿಯನ್ನು ನೀಡಿದ್ದು ಧೋನಿ ಕುಟುಂಬದ್ಥರ ಆರೋಗ್ಯದ ಬಗ್ಗೆ ಚೆನ್ನೈ ಫ್ರಾಂಚೈಸಿ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಧೋನಿ ಕುಟುಂಬಸ್ಥರಿಗೆ ಕೊರೊನಾ ವೈರಸ್ ತಗುಲಿದ್ದರೂ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಟೀಫನ್ ಫ್ಲೇಮಿಂಗ್ ವಿವರಿಸಿದ್ದಾರೆ. ಮ್ಯಾನೇಜ್ಮೆಂಟ್ ಕಡೆಯಿಂದ ನಮಗೆಲ್ಲಾ ಧೋನಿ ಕುಟುಂಬದ ಸ್ಥಿತಿ ತಿಳಿದಿದೆ. ಎಂಎಸ್ ಧೋನಿ ಹಾಗೂ ಅವರ ಕುಟುಂಬಕ್ಕೆ ಅನುಕೂಲವಾಗುವಂತೆ ವ್ಯವಸ್ಥೆಗಳನ್ನು ಮಾಡಲಾಗಿದೆ. ಅವರ ಆರೋಗ್ಯಸ್ಥಿತಿ ಈವರೆಗೆ ನಿಯಂತ್ರಣದಲ್ಲಿದೆ. ಆದರೆ ನಾವು ಇನ್ನೂ ಕೆಲ ದಿನಗಳ ಕಾಲ ಅವರ ಬಗ್ಗೆ ಮೇಲ್ವಿಚಾರಣೆ ನಡೆಸುತ್ತೇವೆ" ಎಂದು ಫ್ಲೆಮಿಂಗ್ ಹೇಳಿಕೆಯನ್ನು ನೀಡಿದ್ದಾರೆ.
"ಧೋನಿ ಕುಟುಂಬಕ್ಕೆ ಈ ಸಂದರ್ಭದಲ್ಲಿ ಬೆಂಬಲವನ್ನು ನೀಡುವುದು ನಮ್ಮ ಜವಾಬ್ಧಾರಿ ಹಾಗೂ ಅವರ ಕುಟುಂಬಸ್ಥರು ಶೀಘ್ರವಾಗಿ ಗುಣಮುಖರಾಗಲು ಅಗತ್ಯವಿರುವ ವ್ಯವಸ್ಥೆಗಳನ್ನು ಕೂಗೊಳ್ಳಲಿದ್ದೇವೆ. ಶೀಘ್ರವೇ ಅವರು ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ" ಎಂದು ಫ್ಲೆಮಿಂಗ್ ಹೇಳಿದ್ದಾರೆ. ಮಾಜಿ ನಾಯಕ ಎಂಎಸ್ ಧೋನಿ ಅವರ ತಾಯೊ ದೇವಿಕಾ ದೇವಿ ಹಾಗೂ ತಂದೆ ಪಾನ್ ಸಿಂಗ್ ಇಬ್ಬರಿಗೂ ಕೊರೊನಾ ವೈರಸ್ ದೃಢಪಟ್ಟಿದೆ. ಇಬ್ಬರನ್ನು ಕೂಡ ರಾಂಚುಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm