ಬ್ರೇಕಿಂಗ್ ನ್ಯೂಸ್
24-04-21 05:56 pm Source: MYKHEL ಕ್ರೀಡೆ
ಏಪ್ರಿಲ್ 24, 'ಗಾರ್ಡ್ ಆಫ್ ಕ್ರಿಕೆಟ್' ಸಚಿನ್ ತೆಂಡೂಲ್ಕರ್ ಅವರ ಜನ್ಮದಿನ. ಈ ದಿನದಂದು ಸಚಿನ್ ತೆಂಡೂಲ್ಕರ್ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಕ್ರಿಕೆಟಿಗರು ಸೇರಿದಂತೆ ಲಕ್ಷಾಂತರ ಜನರಿಂದ ಶುಭಾಶಯಗಳು ಹರಿದು ಬರುತ್ತವೆ. ಇಂದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಸಚಿನ್ ಹುಟ್ಟುಹಬ್ಬಕ್ಕೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಸಹ ತಮ್ಮ ಟ್ವಿಟರ್ ಖಾತೆಯ ಮೂಲಕ ಶುಭಾಶಯವನ್ನು ಕೋರಿದ್ದಾರೆ. 'ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಹಲವಾರು ಜನರಿಗೆ ಸ್ಫೂರ್ತಿಯಾಗಿದ್ದಾರೆ.
ಹುಟ್ಟುಹಬ್ಬದ ಶುಭಾಶಯಗಳು ಸಚಿನ್ ಪಾಜೀ' ಎಂದು ಟ್ವೀಟ್ ಮಾಡುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಹುಟ್ಟುಹಬ್ಬಕ್ಕೆ ಶುಭಾಶಯವನ್ನು ಕೋರಿದರು. ಆದರೆ ಇದೀಗ ಈ ಟ್ವೀಟ್ ವಿವಾದದ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಇದೇ ವಿರಾಟ್ ಕೊಹ್ಲಿ ಈ ಹಿಂದೆ ವೆಸ್ಟ್ ಇಂಡೀಸ್ನ ಖ್ಯಾತ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ಮಾಡಿದ್ದ ಟ್ವೀಟ್.

ಮಾರ್ಚ್ 7ನೇ ತಾರೀಕಿನಂದು ವಿವಿಯನ್ ರಿಚರ್ಡ್ಸ್ ಹುಟ್ಟುಹಬ್ಬಕ್ಕೆ ವಿರಾಟ್ ಕೊಹ್ಲಿ 'ಕ್ರಿಕೆಟ್ ಇತಿಹಾಸ ಕಂಡ ಸಾರ್ವಕಾಲಿಕ ಅತ್ಯುತ್ತಮ ಆಟಗಾರ, ಭಯವೇ ಇಲ್ಲದ ರಾಜ ವಿವಿಯನ್ ರಿಚರ್ಡ್ಸ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿರಾಟ್ ಸಚಿನ್ ಅವರಿಗೆ ವಿಶ್ ಮಾಡುವಾಗ 'ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾದ ಸಚಿನ್' ಎಂದು ಟ್ವೀಟ್ ಮಾಡಿದ್ದಾರೆ. ಆದರೆ ವಿವಿಯನ್ ರಿಚರ್ಡ್ಸ್ ಅವರಿಗೆ ವಿಶ್ ಮಾಡುವ 'ಕ್ರಿಕೆಟ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರ ವಿವಿಯನ್ ರಿಚರ್ಡ್ಸ್' ಎಂದು ಟ್ವೀಟ್ ಮಾಡಿದ್ದಾರೆ. ಅಂದರೆ ವಿರಾಟ್ ಕೊಹ್ಲಿ ಪ್ರಕಾರ ಸಚಿನ್ಗಿಂತ ವಿವಿಯನ್ ರಿಚರ್ಡ್ಸ್ ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಆಟಗಾರರಾ? ಎಂಬ ಚರ್ಚೆಗಳು ಮತ್ತು ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm