ಬ್ರೇಕಿಂಗ್ ನ್ಯೂಸ್
05-05-21 04:51 pm Source: MYKHEL Madhukara Shetty ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಅಮಾನತಾಗಿದೆ. ಹೀಗಾಗಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ವಿದೇಶಿ ಕ್ರಿಕೆಟಿಗರು ತಮ್ಮ ತಮ್ಮ ದೇಶಗಳಿಗೆ ಹೊರಡಲು ಸಜ್ಜಾಗಿದ್ದಾರೆ. ಹೊರಡುವ ಮುನ್ನ ರಾಜಸ್ಥಾನ್ ರಾಯಲ್ಸ್ ಪರ ಆಡುವ ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್, ಭಾರತದ ಯುವ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ಗೆ ವಿಶೇಷ ಉಡುಗೊರೆ ನೀಡಿದ್ದಾರೆ.
ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಒಂದೆರಡು ಪಂದ್ಯಗಳಲ್ಲಿ ಆರಂಭಿಕರಾಗಿ ಆಡಿದ್ದರು. ಬಟ್ಲರ್ ಟೂರ್ನಿ ಆರಂಭದಲ್ಲಿ ಅಂಥ ಬ್ಯಾಟಿಂಗ್ ಪ್ರದರ್ಶನ ನೀಡಿರದಿದ್ದರೂ ಮೇ 2ರಂದು ದೆಹಲಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಬಟ್ಲರ್ ಸ್ಫೋಟಕ ಬ್ಯಾಟಿಂಗ್ ನೀಡಿದ್ದರು. ಕೇವಲ 64 ಎಸೆತಗಳಲ್ಲಿ 124 ರನ್ ಕೊಡುಗೆ ನೀಡಿದ್ದರು. ಈ ಪಂದ್ಯದಲ್ಲಿ ಬಟ್ಲರ್-ಜೈಸ್ವಾಲ್ ಆರಂಭಿಕರಾಗಿ ಆಡಿದ್ದರು.
ಅಂದು ಶತಕ ಬಾರಿಸಿದ್ದ ಬ್ಯಾಟನ್ನು ಬಟ್ಲರ್, ಯುವ ಬ್ಯಾಟ್ಸ್ಮನ್ ಯಶಸ್ವಿಗೆ ಉಡಿಗೊರೆಯಾಗಿ ನೀಡಿದ್ದಾರೆ. ಆಂಗ್ಲ ಆಟಗಾರನಿಗೆ ಭಾರತೀಯ ಆಟಗಾರನ ಮೇಲಿರುವ ಪ್ರೀತಿಗೆ ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದ್ಹಾಗೆ ಈ ಯಶಸ್ವಿ ಜೈಸ್ವಾಲ್ ಬಡ ಕುಟುಂಬದಿಂದ ಬಂದ ಪ್ರತಿಭಾನ್ವಿತ ಆಟಗಾರ.
ಬ್ಯಾಟ್ನ ಮೇಲೆ, 'ಎಂಜಾಯ್ ಯುವರ್ ಟ್ಯಾಲೆಂಟ್. ಬಸ್ಟ್ ವಿಶಸ್' ಎಂದು ಆಟೋಗ್ರಾಫ್ ಕೂಡ ಬರೆದಿರುವ ಬಟ್ಲರ್, ಆ ಬ್ಯಾಟನ್ನು ಯಶಸ್ವಿಗೆ ನೀಡಿದ್ದಾರೆ. ಈ ಚಿತ್ರವನ್ನು ರಾಜಸ್ಥಾನ್ ರಾಯಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. ಪೋಸ್ಟ್ನ ಜೊತೆಗೆ 'ವಿಶೇಷ ಓಪನಿಂಗ್ ಪಾರ್ಟ್ನರ್ನಿಂದ ವಿಶೇಷ ಉಡುಗೊರೆ' ಎಂದು ಆರ್ಆರ್ ಸಾಲ್ಲನ್ನೂ ಬರೆದುಕೊಂಡಿದೆ.
This News Article Is A Copy Of MYKHEL
A special gift from a special opening partner. 💓#HallaBol | #RoyalsFamily | @yashasvi_j | @josbuttler pic.twitter.com/VE3QIE0kct
— Rajasthan Royals (@rajasthanroyals) May 4, 2021
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am