ಬ್ರೇಕಿಂಗ್ ನ್ಯೂಸ್
20-05-21 04:12 pm MYKHEL: Srinivasa A ಕ್ರೀಡೆ
ಜೂನ್ 18ರಿಂದ ಇಂಗ್ಲೆಂಡ್ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನಡೆಯಲಿದ್ದು ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಸೆಣಸಾಡಲಿದೆ ಹಾಗೂ ಇಂಗ್ಲೆಂಡ್ನಲ್ಲಿಯೇ ಉಳಿದುಕೊಂಡು ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯನ್ನಾಡಲಿದೆ. ಹೀಗಾಗಿ ಇಂಗ್ಲೆಂಡ್ ಪ್ರವಾಸಕ್ಕೆ ಬಿಸಿಸಿಐ ಈಗಾಗಲೇ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ.
ಇದೇ ಸಮಯದಲ್ಲಿ ಜುಲೈ ತಿಂಗಳಿನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ 3 ಏಕದಿನ ಮತ್ತು 3 ಟಿ ಟ್ವೆಂಟಿ ಪಂದ್ಯಗಳನ್ನು ಆಯೋಜಿಸಲಾಗಿದ್ದು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರುವ ಆಟಗಾರರನ್ನು ಬಿಟ್ಟು ಉಳಿದ ಸ್ಟಾರ್ ಆಟಗಾರರ ತಂಡವೊಂದನ್ನು ಕಟ್ಟಿ ಲಂಕಾ ಪ್ರವಾಸಕ್ಕೆ ಕಳುಹಿಸಲು ಬಿಸಿಸಿಐ ತೀರ್ಮಾನಿಸಿದೆ. ಇನ್ನು ಈ ಪ್ರವಾಸದ ವಿಶೇಷತೆ ಏನೆಂದರೆ ರಾಹುಲ್ ದ್ರಾವಿಡ್ ಮಾರ್ಗದರ್ಶನ. ಹೌದು ರಾಹುಲ್ ದ್ರಾವಿಡ್ ಲಂಕಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ ತಂಡದ ಕೋಚ್ ಆಗಿ ಮಾರ್ಗದರ್ಶನ ನೀಡಲಿದ್ದಾರೆ.
ಟೀಮ್ ಇಂಡಿಯಾದ ಕೋಚ್ಗಳಾದ ರವಿಶಾಸ್ತ್ರಿ, ಭರತ್ ಅರುಣ್ ಹಾಗೂ ವಿಕ್ರಂ ರಾಥೋರ್ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಕಾರಣ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಲಂಕಾ ಪ್ರವಾಸಕ್ಕೆ ಟೀಮ್ ಇಂಡಿಯಾ ಕೋಚ್ ಆಗಿ ತೆರಳಲಿದ್ದಾರೆ. ಈಗಾಗಲೇ ಟೀಮ್ ಇಂಡಿಯಾ ಎ ತಂಡಕ್ಕೆ ಮಾರ್ಗದರ್ಶನವನ್ನು ನೀಡಿರುವ ಅನುಭವವಿರುವ ರಾಹುಲ್ ದ್ರಾವಿಡ್ ಅಂಡರ್- 19 ತಂಡಕ್ಕೂ ಸಹ ಕೋಚಿಂಗ್ ನೀಡಿದ್ದಾರೆ. ಹೀಗಾಗಿ ಲಂಕಾ ಪ್ರವಾಸಕ್ಕೆ ಆಯ್ಕೆಯಾಗಿರುವ ಯುವ ಆಟಗಾರರಿಗೆ ದ್ರಾವಿಡ್ ಮಾರ್ಗದರ್ಶನದ ಅನುಭವ ಮೊದಲೇ ಇರುವುದರಿಂದ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು. ಅಂಡರ್-19 ತಂಡದಲ್ಲಿ ಈಗಾಗಲೇ ಹಲವಾರು ಯುವಪ್ರತಿಭೆಗಳನ್ನು ತಯಾರಿಸಿರುವ ದ್ರಾವಿಡ್ ಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ತಂಡವನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎನ್ನಲಾಗುತ್ತಿದೆ.
(Kannada Copy of Mykhel Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm