ಬ್ರೇಕಿಂಗ್ ನ್ಯೂಸ್
16-06-21 03:59 pm MYKHEL: Madhukara Shetty ಕ್ರೀಡೆ
ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಪ್ರಕಟಿಸಿದ್ದು ಕೆಲ ಪ್ರಮುಖ ಬದಲಾವಣೆಗಳು ಆಗಿದೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಒಂದು ಸ್ಥಾನದ ಏರಿಕೆ ಕಂಡಿದ್ದು ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಮೊದಲ ಸ್ಥಾನದಲ್ಲಿದ್ದ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿ ಸ್ಟೀವನ್ ಸ್ಮಿತ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.
ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಕಳೆದ ಭಾರತದ ವಿರುದ್ಧದ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್ ಬಳಿಕ ಮೊದಲ ಸ್ಥಾನದಿಂದ ಕೆಳಗಿಳಿದಿದ್ದರು. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಈ ಸ್ಥಾನವನ್ನು ಆಕ್ರಮಿಸಿದ್ದರು.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲ ಪಂದ್ಯದಲ್ಲಿ ಗಾಯಗೊಂಡಿದ್ದರು. ಲಾರ್ಡ್ಸ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 13 ರನ್ಗಳಿಸಿದ್ದ ವೇಳೆ ಕೇನ್ ಗಾಯಗೊಂಡಿದ್ದರು. ಹೀಗಾಗಿ ಎಡ್ಜ್ಬಾಸ್ಟನ್ನಲ್ಲಿ ನಡೆದ ಎರಡನೇ ಪಂದ್ಯದಿಂದ ಹೊರಗುಳಿದಿದ್ದರು. ಶ್ರೇಯಾಂಕ ಪಟ್ಟಿಯಲ್ಲಿ 891 ಅಂಕಗಳಿಸಿರುವ ಸ್ಟೀವ್ ಸ್ಮಿತ್ ಅವರಿಗಿಂತ 5 ಅಂಕಗಳ ಹಿನ್ನೆಡೆಯಲ್ಲಿದ್ದಾರೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿರುವ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿಕಾಕ್ ಚೇತೇಶ್ವರ್ ಪೂಜಾರ ಅವರೊಂದಿಗೆ 12ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 141 ರನ್ಗಳಿಸಿ ಇನ್ನಿಂಗ್ಸ್ ಹಾಗೂ 63 ರನ್ಗಳ ಅಂತರದಿಂದ ಗೆಲುವಿಗೆ ಕಾರಣರಾಗಿದ್ದರು. ಇನ್ನು ದಕ್ಷಿಣ ಆಫ್ರಿಕಾದ ವೇಗಿ ಕಗಿಸೋ ರಬಡಾ ಕೂಡ ಬೌಲಿಂಗ್ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು 7ನೇ ಸ್ಥಾನಕ್ಕೇರಿದ್ದಾರೆ.
(Kannada Copy of Mykhel Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm