ಬ್ರೇಕಿಂಗ್ ನ್ಯೂಸ್
01-09-20 10:52 am Headline Karnataka News Network ಕ್ರೀಡೆ
ಅಬುಧಾಬಿ: ಐಪಿಎಲ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬದಲು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ ಎಂದು ಹೇಳಲಾಗಿದೆ.
ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ವಾಡಿಕೆಯಂತೆ ಕಳೆದ ಐಪಿಎಲ್ನ ಫೈನಲ್ನಲ್ಲಿ ಮುಖಾಮುಖಿಯಾಗಿದ್ದ ಸಿಎಸ್ಕೆ ಮತ್ತು ಮುಂಬೈ ತಂಡದ ಈ ಟೂರ್ನಿಯ ಮೊದಲ ಪಂದ್ಯವನ್ನು ಆಡಬೇಕಿತ್ತು. ಆದರೆ ಸಿಎಸ್ಕೆ ತಂಡದ ಕೆಲ ಸಹಾಯಕ ಸಿಬ್ಬಂದಿ ಮತ್ತು ಇಬ್ಬರು ಆಟಗಾರರಿಗೆ ಕೊರೊನಾ ಬಂದ ಕಾರಣ ಚೆನ್ನೈ ತಂಡ ಮೊದಲ ಪಂದ್ಯವನ್ನು ಆಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.
ಐಪಿಎಲ್ನ ಆರಂಭಿಕ ಪಂದ್ಯದಲ್ಲಿ ನಾಲ್ಕು ಬಾರಿ ಐಪಿಎಲ್ ಟ್ರೋಫಿ ಗೆದ್ದ ಮುಂಬೈ ತಂಡ ಮತ್ತು ಮೂರು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ತಂಡವನ್ನು ಆಡಿಸಲು ಬಿಸಿಸಿಐ ತೀರ್ಮಾನ ಮಾಡಿತ್ತು. ಆದರೆ ಈ ನಡುವೆ ಈ ಪಂದ್ಯಕ್ಕೆ ಕೊರೊನಾ ಅಡ್ಡಗಾಲು ಹಾಕಿದ್ದು, ಸೆಪ್ಟೆಂಬರ್ 19ರೊಳಗೆ ಸಿಎಸ್ಕೆ ತಂಡದ ಆಟಗಾರರು ಸೋಂಕಿನಿಂದ ಹೊರಬರುವುದು ಡೌಟು ಎನ್ನಲಾಗಿದೆ. ಈ ಕಾರಣಕ್ಕೆ ಐಪಿಎಲ್ನಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್ಸಿಬಿ ತಂಡ ಆರಂಭಿಕ ಪಂದ್ಯವನ್ನು ಆಡಲಿದೆ ಎನ್ನಲಾಗಿದೆ.
ಈ ವಿಚಾರವಾಗಿ ಬಿಸಿಸಿಐ ಉನ್ನತ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ಈ ಬಾರಿ ಐಪಿಎಲ್ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ. ಮೊದಲ ಪಂದ್ಯದಲ್ಲಿ ಸ್ಟಾರ್ ಆಟಗಾರರು ಮೈದಾನಕ್ಕೆ ಇಳಿದರೆ, ಆಟದ ಕ್ರೇಜ್ ಜಾಸ್ತಿಯಾಗುತ್ತದೆ. ಒಂದು ಕಡೆ ರೋಹಿತ್ ಸಿದ್ಧವಾಗಿದ್ದಾರೆ. ಆದರೆ ಧೋನಿಯವರ ತಂಡ ಆಡುವುದು ಅನುಮಾನವಾಗಿದೆ. ಹೀಗಾಗಿ ಕೊಹ್ಲಿ ನೇತೃತ್ವದ ಆರ್ಸಿಬಿ ತಂಡವನ್ನು ಆಡಿಸಲು ತಯಾರಿ ನಡೆದಿದೆ ಎಂದು ತಿಳಿದು ಬಂದಿದೆ.
ಸೆ.19ರ ವೇಳೆಗೆ ಚೆನ್ನೈ ತಂಡ ಪೂರ್ಣ ಪ್ರಮಾಣದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಟೂರ್ನಿಯ ಶೆಡ್ಯೂಲ್ನಲ್ಲಿ ಸಣ್ಣ ಬದಲಾವಣೆ ಮಾಡಿ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ. ಇತ್ತ ಎರಡು ದಿನಗಳ ಅವಧಿಯಲ್ಲಿ ಚೆನ್ನೈ ತಂಡದಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿವುದರಿಂದ ಮತ್ತಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುವ ನಿರೀಕ್ಷೆ ಇದೆ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm