ಬ್ರೇಕಿಂಗ್ ನ್ಯೂಸ್
01-07-21 02:48 pm MYKHEL: Sadashiva ಕ್ರೀಡೆ
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಆಕರ್ಷಣೀಯ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ನೂತನ ಅಧ್ಯಕ್ಷರಾಗಿ ಪ್ರಥಮೇಶ್ ಮಿಶ್ರಾ ಆಯ್ಕೆಯಾಗಿದ್ದಾರೆ. ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಗುರುವಾರ (ಜುಲೈ 1) ಮಿಶ್ರಾ ಅವರನ್ನು ತಮ್ಮ ನೂತನ ಅಧ್ಯಕ್ಷರೆಂದು ಘೋಷಿಸಿದೆ.
ಡಿಯಾಗೋ ಇಂಡಿಯಾದ ಅಂಗ ಸಂಸ್ಥೆಯಾಗಿರುವ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್, ಆರ್ಸಿಬಿಯ ಮಾಲೀಕತ್ವ ಹೊಂದಿದೆ. ಪ್ರಥಮೇಶ್ ಮಿಶ್ರಾ ಸದ್ಯ ಡಿಯಾಗೋ ಇಂಡಿಯಾದಲ್ಲಿ ಮುಖ್ಯ ವ್ಯವಹಾರ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಭಾರತದ ನಾಯಕ ವಿರಾಟ್ ಕೊಹ್ಲಿ ಆರ್ಸಿಬಿ ನಾಯಕತ್ವ ಹೊಂದಿದ್ದರೆ, ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಮೈಕ್ ಹೆಸನ್ ಮತ್ತು ಆಸ್ಟ್ರೇಲಿಯಾದ ಮಾಜಿ ಆಟಗಾರ ಸೈಮನ್ ಕಟಿಚ್ ತಂಡದ ಕೋಚಿಂಗ್ ವಿಭಾಗದಲ್ಲಿದ್ದಾರೆ.

ಮಿಶ್ರಾ ಅವರು ಮೊದಲು ಆರ್ಸಿಬಿ ಅಧ್ಯಕ್ಷರಾಗಿದ್ದ ಆನಂದ್ ಕೃಪಾಲು ಸ್ಥಾನ ತುಂಬಲಿದ್ದಾರೆ. ಕೃಪಾಲು ಅವರ ಡಿಯಾಗೋ ಇಂಡಿಯಾದ ನಿರ್ವಹಣಾ ನಿರ್ದೇಶಕ ಮತ್ತು ಸಿಇಒ ಕರ್ತವ್ಯ ಜೂನ್ 30ಕ್ಕೆ ಕೊನೆಗೊಂಡಿದೆ. ಒಮ್ಮೆಯೂ ಐಪಿಎಲ್ ಟ್ರೋಫಿ ಗೆಲ್ಲದ ಅರ್ಸಿಬಿ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಟ್ರೋಫಿಯ ನಿರೀಕ್ಷೆ ಮೂಡಿಸಿದೆ.
"ರಾಯಲ್ ಚಾಲೆಂಜರ್ಸ್ ಬೆಂಗಳೂರು ಡಿಯಾಗೋ ಇಂಡಿಯಾದ ಅವಿಭಾಜ್ಯ ಅಂಗವಾಗಿದ್ದು, ನಾವೆಲ್ಲರೂ ತಂಡದ ಬಗ್ಗೆ ಹೆಚ್ಚಿನ ಉತ್ಸಾಹವನ್ನು ಹೊಂದಿದ್ದೇವೆ. ವಿರಾಟ್ ಕೊಹ್ಲಿ, ಮೈಕ್ ಹೆಸನ್ ಮತ್ತು ಸೈಮನ್ ಕಟಿಚ್ ಅವರೊಂದಿಗೆ ತಂಡದ ಏಳಿಗೆಗೆ ನನ್ನ ಭುಜವನ್ನು ಸೇರಿಸುವ ಬಗ್ಗೆ ಮತ್ತು ನಾವು ಮೈದಾನದಲ್ಲಿ ಮತ್ತು ಹೊರಗೆ ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಧೈರ್ಯದಿಂದ ಪಾಲ್ಗೊಳ್ಳುವ ಬಗ್ಗೆ ನಾನು ಉತ್ಸುಕನಾಗಿದ್ದೇನೆ. ಆರ್ಸಿಬಿಗೆ ಆನಂದ್ ನೀಡಿದ ಅಪಾರ ಕೊಡುಗೆಗಾಗಿ ನಾನು ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ," ಎಂದು ಪ್ರಥಮೇಶ್ ಮಿಶ್ರಾ ಹೇಳಿದ್ದಾರೆ.
(Kannada Copy of Mykhel Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm