ಬ್ರೇಕಿಂಗ್ ನ್ಯೂಸ್
16-07-21 12:07 pm MYKHEL: Sadashiva ಕ್ರೀಡೆ
ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಎರಡು ವಾರಗಳು ಬಾಕಿಯಿರುವಾಗ ವಿರಾಟ್ ಕೊಹ್ಲಿ ಪಾಳಯದಲ್ಲಿ ಕೊರೊನಾ ಭೀತಿ ಶುರುವಾಗಿದೆ.
ಭಾರತ ತಂಡದಲ್ಲೀಗ ಕೋವಿಡ್ ಭೀತಿ ಶುರುವಾಗಿದೆಯಾದರೂ ಇಂಗ್ಲೆಂಡ್ಗೆ ಹೆಚ್ಚುವರಿ ಆಟಗಾರರನ್ನು ಕಳುಹಿಸಿಕೊಡುತ್ತಿಲ್ಲ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ತಿಳಿಸಿದೆ. ಭಾರತ ತಂಡದಲ್ಲಿ ಮೂವರಿಗೆ ಈಗಾಗಲೇ ಕೋವಿಡ್ ಪಾಸಿಟಿವ್ ಬಂದಿರುವುದು ಬಹಿರಂಗಗೊಂಡಿದೆ.
ಭಾರತೀಯ ತಂಡ ಈಗ ಡರ್ಹ್ಯಾಮ್ನಲ್ಲಿ ಬಯೋಬಬಲ್ ಪ್ರವೇಶಿಸಿದೆ. ಆದರೆ ತಂಡದ ಯುವ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್, ಅನುಭವಿ ವೃದ್ಧಿಮಾನ್ ಸಾಹ ಮತ್ತು ಟ್ರೇನಿಂಗ್ ಸಿಬ್ಬಂದಿ ದಯಾನಂದ ಗರಣಿ ಲಂಡನ್ನಲ್ಲೇ ಉಳಿದು ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಇವರಲ್ಲಿ ಪಂತ್, ಗರಣಿಗೆ ಕೋವಿಡ್ ಪಾಸಿಟಿವ್ ಇದ್ದರೆ, ಸಾಹ ಮುನ್ನೆಚ್ಚರಿಕೆಯಾಗಿ ಐಸೊಲೇಶನ್ನಲ್ಲಿದ್ದಾರೆ.
ಆಟಗಾರರಲ್ಲಿ ಸಾಹ ಮತ್ತು ಪಂತ್ ಇಬ್ಬರೂ ಕ್ವಾರಂಟೈನ್ ಅವಧಿ ಮುಗಿಸುತ್ತ ಬಂದಿರುವುದರಿಂದ ಈಗಾಗಲೇ ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡಕ್ಕೆ ಹೆಚ್ಚುವರಿ ಆಟಗಾರರನ್ನು ಕಳುಹಿಸುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್ನಲ್ಲೀಗ 20 ಆಟಗಾರರು 4 ಮೀಸಲು ಆಟಗಾರರು ಇದ್ದಾರೆ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ನಡೆಯಲಿದೆ.
(Kannada Copy of Mykhel Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm