ಬ್ರೇಕಿಂಗ್ ನ್ಯೂಸ್
16-07-21 12:07 pm MYKHEL: Sadashiva ಕ್ರೀಡೆ
ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಎರಡು ವಾರಗಳು ಬಾಕಿಯಿರುವಾಗ ವಿರಾಟ್ ಕೊಹ್ಲಿ ಪಾಳಯದಲ್ಲಿ ಕೊರೊನಾ ಭೀತಿ ಶುರುವಾಗಿದೆ.
ಭಾರತ ತಂಡದಲ್ಲೀಗ ಕೋವಿಡ್ ಭೀತಿ ಶುರುವಾಗಿದೆಯಾದರೂ ಇಂಗ್ಲೆಂಡ್ಗೆ ಹೆಚ್ಚುವರಿ ಆಟಗಾರರನ್ನು ಕಳುಹಿಸಿಕೊಡುತ್ತಿಲ್ಲ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ತಿಳಿಸಿದೆ. ಭಾರತ ತಂಡದಲ್ಲಿ ಮೂವರಿಗೆ ಈಗಾಗಲೇ ಕೋವಿಡ್ ಪಾಸಿಟಿವ್ ಬಂದಿರುವುದು ಬಹಿರಂಗಗೊಂಡಿದೆ.
ಭಾರತೀಯ ತಂಡ ಈಗ ಡರ್ಹ್ಯಾಮ್ನಲ್ಲಿ ಬಯೋಬಬಲ್ ಪ್ರವೇಶಿಸಿದೆ. ಆದರೆ ತಂಡದ ಯುವ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್, ಅನುಭವಿ ವೃದ್ಧಿಮಾನ್ ಸಾಹ ಮತ್ತು ಟ್ರೇನಿಂಗ್ ಸಿಬ್ಬಂದಿ ದಯಾನಂದ ಗರಣಿ ಲಂಡನ್ನಲ್ಲೇ ಉಳಿದು ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಇವರಲ್ಲಿ ಪಂತ್, ಗರಣಿಗೆ ಕೋವಿಡ್ ಪಾಸಿಟಿವ್ ಇದ್ದರೆ, ಸಾಹ ಮುನ್ನೆಚ್ಚರಿಕೆಯಾಗಿ ಐಸೊಲೇಶನ್ನಲ್ಲಿದ್ದಾರೆ.
ಆಟಗಾರರಲ್ಲಿ ಸಾಹ ಮತ್ತು ಪಂತ್ ಇಬ್ಬರೂ ಕ್ವಾರಂಟೈನ್ ಅವಧಿ ಮುಗಿಸುತ್ತ ಬಂದಿರುವುದರಿಂದ ಈಗಾಗಲೇ ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡಕ್ಕೆ ಹೆಚ್ಚುವರಿ ಆಟಗಾರರನ್ನು ಕಳುಹಿಸುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್ನಲ್ಲೀಗ 20 ಆಟಗಾರರು 4 ಮೀಸಲು ಆಟಗಾರರು ಇದ್ದಾರೆ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ನಡೆಯಲಿದೆ.
(Kannada Copy of Mykhel Kannada)
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am