ಬ್ರೇಕಿಂಗ್ ನ್ಯೂಸ್
20-07-21 11:23 am MYKHEL: Madhukara Shetty ಕ್ರೀಡೆ
ಟೋಕಿಯೋ, ಜುಲೈ20: ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳಲು ತೆರಳಿರುವ ಭಾರತೀಯ ಕ್ರೀಡಾಪಟುಗಳ ಮೊದಲ ತಂಡ ತನ್ನ ಅಭ್ಯಾಸವನ್ನು ಆರಂಭಿಸಿದೆ. ಭಾನುವಾರ ಟೋಕಿಯೋ ತಲುಪಿದ್ದ ಭಾರತೀಯ ಕ್ರೀಡಾಪಟುಗಳ ತಂಡ ಸೋಮವಾರ ಮೈದಾನಕ್ಕಿಳಿದು ಅಭ್ಯಾಸ ಪ್ರಾರಂಭ ಮಾಡಿದ್ದಾರೆ. ಭಾನುವಾರ ಭಾರತದ ಮೊದಲ ಬ್ಯಾಚ್ನ ಕ್ರೀಡಾಪಟುಗಳ ತಂಡ ಟೋಕಿಯೋ ತಲುಪಿತ್ತು. ಮುಂಜಾನೆ ಕೆಲ ಕೋವಿಡ್ ನಿಯಮಗಳನ್ನು ಪೂರೈಸಿದ ಬಳಿಕ ಒಲಿಂಪಿಕ್ಸ್ ಕ್ರೀಡಾಗ್ರಾಮವನ್ನು ಪ್ರವೇಶಿಸಿತ್ತು.
ಆರ್ಚರ್ಗಳಾದ ದೀಪಿಕಾ ಕುಮಾರಿ ಹಾಗೂ ಅತನು ದಾಸ್, ಟೇಬಲ್ ಟೆನ್ನಿಸ್ ಆಟಗಾರರಾದ ಜಿ ಸಥಿಯನ್ ಹಾಗೂ ಎ ಶರತ್ ಕಮಾಲ್, ಶಟ್ಲರ್ಗಳಾದ ಪಿವಿ ಸಿಂಧು ಮತ್ತು ಬಿ ಸಾಯಿ ಪ್ರಣೀತ್ ಹಾಗೂ ಜಿಮ್ನ್ಯಾಸ್ಟಿಕ್ ಪಟು ಪ್ರಣತಿ ನಾಯಕ್ ತಮ್ಮ ಅಭ್ಯಾಸವನ್ನು ಸೋಮವಾರ ಆರಂಭಿಸಿದ್ದಾರೆ.

ಆರ್ಚರಿ ಜೋಡಿಗಳಾದ ಅತನು ದಾಸ್ ಹಾಗೂ ದೀಪಿಕಾ ಕುಮಾರಿ ಸೋಮವಾರ ಮುಂಜಾನೆ ಯುಮೆನೋಶಿಮಾ ಪಾರ್ಕ್ನಲ್ಲಿ ತಮ್ಮ ಅಂತಿಮ ಹಂತದ ಅಭ್ಯಾಸವನ್ನು ಆರಂಭಿಸಿದರು. ಮೊದಲ ಒಲಿಂಪಿಕ್ಸ್ ಪದಕದ ಮೇಲೆ ಕಣ್ಣಿಟ್ಟಿರುವ ಟೇಬಲ್ ಟೆನ್ನಿಸ್ ಆಟಗಾರರಾದ ಸಥಿಯನ್ ಹಾಗೂ ಶರತ್ ಕಮಾಲ್ ಕೂಡ ತಮ್ಮ ಸಿದ್ಧತೆಯನ್ನು ನಡೆಸಿದ್ದಾರೆ. ಇನ್ನು ಕೋಚ್ ಲಕ್ಷ್ಮಣ್ ಮನೋಹರ್ ಶರ್ಮಾ ಅವರ ಉಪಸ್ಥಿತಿಯಲ್ಲಿ ಜಿಮ್ನ್ಯಾಸ್ಟಿಕ್ ಆಟಗಾರ್ತಿ ಪ್ರಣತಿ ನಾಯಕ್ ಕೂಡ ಸಿದ್ಧತೆ ಪ್ರಾರಂಭಿಸಿದ್ದಾರೆ. ಭಾರತೀಯ ಬ್ಯಾಡ್ಮಿಂಟನ್ನ ಸಿಂಗಲ್ಸ್ ತಂಡದ ಕೋಚ್ ಪಾರ್ಕ್ ತಯೀ ಸಾಂಗ್ ಅವರ ನೇತೃತ್ವದಲ್ಲಿ ಸಿಂಗಲ್ಸ್ ವಿಭಾಗದ ಆಟಗಾರರಾದ ಪಿವಿ ಸಿಂಧು ಹಾಗೂ ಪ್ರನೀತ್ ಅಭ್ಯಾಸವನ್ನು ನಡೆಸಿದರು. ಮತ್ತೊಂದೆಡೆ ಡಬಲ್ಸ್ ಜೋಡಿಯಾದ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ಸಾಯಿರಾಜ್ ರಂಕಿರೆಡ್ಡಿಗೆ ಕೋಚ್ ಮಥಿಯಾಸ್ ಬೋಯಿ ಮಾರ್ಗದರ್ಶನ ನೀಡಿದರು.

ಈ ಮಧ್ಯೆ ಟೋಕಿಯೋ ಒಲಿಂಪಿಕ್ಸ್ಗೆ ಕೊರೊನಾವೈರಸ್ನ ಆತಂಕ ಹೆಚ್ಚಾಗುತ್ತಲೇ ಇದೆ. ಆಯೋಜಕ ಸಿಬ್ಬಂದಿಗಳ ಜೊತೆಗೆ ಈಗ ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಕೂಡ ಕೊರೊನಾವೈರಸ್ಗೆ ತುತ್ತಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಅಮೇರಿಕಾದ ಯುವ ಟೆನ್ನಿಸ್ ಆಟಗಾರ್ತಿ ಕೋಕೋ ಗೌಫ್ ಕೊರೊನಾವೈರಸ್ಗೆ ತುತ್ತಾಗಿ ಟೂರ್ನಿಯಿಂದ ಅನಿವಾರ್ಯವಾಗಿ ಹೊರಗುಳಿಯುವ ಅನಿವಾರ್ಯತೆಗೆ ಒಳಗಾದ ನಂತರ ಅಮೆರಿಕಾದ ಮಹಿಳಾ ಜಿಮ್ನ್ಯಾಸ್ಟ್ ಕೂಡ ಕೊರೊನಾವೈರಸ್ಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ. ಇವರ ಜೊತೆಗೆ ಮತ್ತೋರ್ವ ಸದಸ್ಯರನ್ನು ಕೂಡ ಐಸೋಲೇಶನ್ಗೆ ಒಳಪಡಿಸಲಾಗಿದೆ.
(Kannada Copy of Mykhel Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm