ಬ್ರೇಕಿಂಗ್ ನ್ಯೂಸ್
22-07-21 10:38 am MYKHEL: Sadashiva ಕ್ರೀಡೆ
ಟೋಕಿಯೋ, ಜುಲೈ 22: ಒಲಿಂಪಿಕ್ಸ್ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿಯಿದೆ. ಈ ಸಂದರ್ಭದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಹಿಂದೆಂದೂ ಕಂಡಿರದ ಅತ್ಯಂತ ವಿಚಿತ್ರ ಸನ್ನಿವೇಶವನ್ನು ಕೊರೊನಾವೈರಸ್ನ ಕಾರಣದಿಂದಾಗಿ ಎದುರಿಸುತ್ತಿದೆ. ಸಾಕಷ್ಟು ಕಠಿಣ ನಿಯಮಗಳನ್ನು ಹೊಂದಿರುವ ಹೊರತಾಗಿಯೂ ಕೊರೊನಾವೈರಸ್ ಪ್ರಕರಣಗಳು ಕ್ರೀಡಾಗ್ರಾಮದಲ್ಲಿ ಪತ್ತೆಯಾಗುತ್ತಿದೆ.
ಗುರುವಾರ ಟೋಕಿಯೋ ಒಲಿಂಪಿಕ್ಸ್ ಆಯೋಜಕರು ಕೋವಿಡ್ ಹೊಸ ಪ್ರಕರಣಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಇದರಲ್ಲಿ ಒಲಿಂಪಿಕ್ಸ್ ಕ್ರೀಡಾಗ್ರಾಮದಲ್ಲಿ ಇಬ್ಬರು ಅಥ್ಲೀಟ್ಗಳಿಗೆ ಕೊರೊನಾವೈರಸ್ ಇರುವುದು ದೃಢಪಟ್ಟಿದೆ. 11 ಹೊಸ ಪ್ರಕರಣಗಳು ಕ್ರೀಡಾಗ್ರಾಮದಲ್ಲಿ ಪತ್ತೆಯಾಗಿದ್ದು ಇದರಲ್ಲಿ ಇಬ್ಬರು ಅಥ್ಲೀಟ್ಗಳಾಗಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 86 ಕೊರೊನಾವೈರಸ್ ಪ್ರಕರಣಗಳು ಒಲಿಂಪಿಕ್ಸ್ಗೆ ಸಂಬಂಧಿಸಿದ ಕ್ರೀಡಾಪಟುಗಳು ಹಾಗೂ ಇತರ ಸಿಬ್ಬಂದಿಗಳಿಗೆ ಕಾಣಿಸಿಕೊಂಡಿದೆ.

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಕೊರೊನಾವೈರಸ್ಗೆ ತುತ್ತಾದಂತಾ ಸಂದರ್ಭದಲ್ಲಿ ಪಂದ್ಯಗಳನ್ನು ಮುಂದುವರಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ವಿಚಾರವಾಗಿ ಈಗಾಗಲೇ ಮಾರ್ಗಸೂಚಿಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಹೀಗಾಗಿ ಒಲಿಂಪಿಕ್ಸ್ ಸುಸೂತ್ರವಾಗಿ ನೆರವೇರಲು ಯಾವುದೇ ಅಡ್ಡಿಯಾಗಲಾರದು ಎಂಬ ವಿಶ್ವಾಸ ಒಲಿಂಪಿಕ್ಸ್ ಆಯೋಜಕರಲ್ಲಿದೆ.
ಇನ್ನು ಭಾರತೀಯ ಕ್ರೀಡಾಪಟುಗಳ ಮೊದಲ ತಂಡ ಈಗಾಗಲೇ ಟೋಕಿಯೋದ ಕ್ರೀಡಾಗ್ರಾಮದಲ್ಲಿ ಮೂರು ಮಹಡಿಯ ಕಟ್ಟಡದಲ್ಲಿ ವಾಸ್ತವ್ಯದಲ್ಲಿದ್ದಾರೆ. ಕೊರೊನಾವೈರಸ್ನ ಭೀತಿಯ ಹಿನ್ನೆಲೆಯಲ್ಲಿ ಭಾರತೀಯ ಕ್ರೀಡಾಪಟುಗಳು ಸಾಕಷ್ಟು ಎಚ್ಚರಿಕೆಯನ್ನು ವಹಿಸುತ್ತಿದ್ದು ಅಭ್ಯಾಸಕ್ಕೆ ನಿಗದಿಪಡಿಸಿರುವ ಸ್ಥಳವನ್ನು ಹೊರತುಪಡಿಸಿ ಬೇರೆಲ್ಲೂ ತೆರಳದಂತೆ ತಮಗೆ ತಾವೇ ನಿರ್ಬಂಧಿಸಿಕೊಂಡಿದ್ದಾರೆ. ಕ್ರೀಡಾಗ್ರಾಮದ ಒಳಗೆ ಕ್ರೀಡಾಪಟುಗಳ ಓಡಾಟಕ್ಕೆ ಯಾವುದೇ ನಿರ್ಬಂಧಗಳು ಇಲ್ಲದ ಕಾರಣ ಭಾರತೀಯ ಕ್ರೀಡಾಪಟುಗಳು ಈ ಮುನ್ನೆಚ್ಚರಿಕೆಯನ್ನು ವಹಿಸಿಕೊಂಡಿದ್ದಾರೆ.
(Kannada Copy of Mykhel Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm