ಬ್ರೇಕಿಂಗ್ ನ್ಯೂಸ್
27-07-21 11:45 am MYKHEL: Srinivasa A ಕ್ರೀಡೆ
ಪ್ರಸ್ತುತ ನಡೆಯುತ್ತಿರುವ ಪ್ರತಿಷ್ಠಿತ ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಮೀರಾಬಾಯಿ ಚಾನು ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಹೀಗೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ರಜತ ಪದಕ ಗೆಲ್ಲುವುದರ ಮೂಲಕ ಮೀರಾಬಾಯಿ ಚಾನು ದೇಶದ ಹಲವಾರು ಯುವ ಕ್ರೀಡಾಪಟುಗಳಿಗೆ ಮಾದರಿಯಾಗಿ ನಿಂತಿದ್ದಾರೆ.
ತಾವು ಪಟ್ಟ ಶ್ರಮ ಮತ್ತು ತಮ್ಮ ಪ್ರತಿಭೆಯಿಂದ ಮೀರಾಬಾಯಿ ಚಾನು ಹಲವಾರು ಜನರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲದೆ ಇಡೀ ದೇಶವೇ ಹೆಮ್ಮೆ ಪಡುವಂತಹ ಸಾಧನೆ ಮಾಡಿರುವ ಮೀರಾಬಾಯಿ ಚಾನುಗೆ 2 ಕೋಟಿ ರೂಪಾಯಿ ಮತ್ತು ರೈಲ್ವೆ ಹುದ್ದೆಯಲ್ಲಿ ಬಡ್ತಿ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ್ದ ಮೀರಾಬಾಯಿ ಚಾನು 49 ಕೆಜಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡು ರಜತ ಪದಕಕ್ಕೆ ಮುತ್ತಿಟ್ಟಿದ್ದರು. ಈ ಮೂಲಕ 21 ವರ್ಷಗಳ ಬಳಿಕ ಭಾರತ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಪದಕ ಗೆದ್ದಂತಾಯಿತು. ಕೇವಲ ಕೇಂದ್ರ ರೈಲ್ವೆ ಸಚಿವರು ಮಾತ್ರವಲ್ಲದೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಕೂಡಾ ಮೀರಾಬಾಯಿ ಚಾನುಗೆ ಪೊಲೀಸ್ ಇಲಾಖೆಯಲ್ಲಿ ಹುದ್ದೆ ಮತ್ತು 1 ಕೋಟಿ ಬಹುಮಾನವನ್ನು ಘೋಷಿಸಿದ್ದರು. ರೈಲ್ವೆ ಇಲಾಖೆಯಲ್ಲಿ ಟಿಕೆಟ್ ಚೆಕಿಂಗ್ ಇನ್ಸ್ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೀರಾಬಾಯಿ ಚಾನುಗೆ ಇದೀಗ ಅದೇ ಹುದ್ದೆಯಲ್ಲಿ ಬಡ್ತಿ ಮತ್ತು 2 ಕೋಟಿಯನ್ನು ರೈಲ್ವೆ ಸಚಿವರು ಘೋಷಿಸಿದ್ದರೆ, ಅತ್ತ ಮಣಿಪುರ ಸಿಎಂ 1 ಕೋಟಿ ಬಹುಮಾನ ಮತ್ತು ಪೊಲೀಸ್ ಇಲಾಖೆಯಲ್ಲಿ ಹುದ್ದೆಯನ್ನು ಘೋಷಿಸಿದ್ದಾರೆ.
(Kannada Copy of Mykhel Kannada)
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am