ಬ್ರೇಕಿಂಗ್ ನ್ಯೂಸ್
27-07-21 11:45 am MYKHEL: Srinivasa A ಕ್ರೀಡೆ
ಪ್ರಸ್ತುತ ನಡೆಯುತ್ತಿರುವ ಪ್ರತಿಷ್ಠಿತ ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಮೀರಾಬಾಯಿ ಚಾನು ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಹೀಗೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ರಜತ ಪದಕ ಗೆಲ್ಲುವುದರ ಮೂಲಕ ಮೀರಾಬಾಯಿ ಚಾನು ದೇಶದ ಹಲವಾರು ಯುವ ಕ್ರೀಡಾಪಟುಗಳಿಗೆ ಮಾದರಿಯಾಗಿ ನಿಂತಿದ್ದಾರೆ.
ತಾವು ಪಟ್ಟ ಶ್ರಮ ಮತ್ತು ತಮ್ಮ ಪ್ರತಿಭೆಯಿಂದ ಮೀರಾಬಾಯಿ ಚಾನು ಹಲವಾರು ಜನರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲದೆ ಇಡೀ ದೇಶವೇ ಹೆಮ್ಮೆ ಪಡುವಂತಹ ಸಾಧನೆ ಮಾಡಿರುವ ಮೀರಾಬಾಯಿ ಚಾನುಗೆ 2 ಕೋಟಿ ರೂಪಾಯಿ ಮತ್ತು ರೈಲ್ವೆ ಹುದ್ದೆಯಲ್ಲಿ ಬಡ್ತಿ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ್ದ ಮೀರಾಬಾಯಿ ಚಾನು 49 ಕೆಜಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡು ರಜತ ಪದಕಕ್ಕೆ ಮುತ್ತಿಟ್ಟಿದ್ದರು. ಈ ಮೂಲಕ 21 ವರ್ಷಗಳ ಬಳಿಕ ಭಾರತ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಪದಕ ಗೆದ್ದಂತಾಯಿತು. ಕೇವಲ ಕೇಂದ್ರ ರೈಲ್ವೆ ಸಚಿವರು ಮಾತ್ರವಲ್ಲದೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಕೂಡಾ ಮೀರಾಬಾಯಿ ಚಾನುಗೆ ಪೊಲೀಸ್ ಇಲಾಖೆಯಲ್ಲಿ ಹುದ್ದೆ ಮತ್ತು 1 ಕೋಟಿ ಬಹುಮಾನವನ್ನು ಘೋಷಿಸಿದ್ದರು. ರೈಲ್ವೆ ಇಲಾಖೆಯಲ್ಲಿ ಟಿಕೆಟ್ ಚೆಕಿಂಗ್ ಇನ್ಸ್ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೀರಾಬಾಯಿ ಚಾನುಗೆ ಇದೀಗ ಅದೇ ಹುದ್ದೆಯಲ್ಲಿ ಬಡ್ತಿ ಮತ್ತು 2 ಕೋಟಿಯನ್ನು ರೈಲ್ವೆ ಸಚಿವರು ಘೋಷಿಸಿದ್ದರೆ, ಅತ್ತ ಮಣಿಪುರ ಸಿಎಂ 1 ಕೋಟಿ ಬಹುಮಾನ ಮತ್ತು ಪೊಲೀಸ್ ಇಲಾಖೆಯಲ್ಲಿ ಹುದ್ದೆಯನ್ನು ಘೋಷಿಸಿದ್ದಾರೆ.
(Kannada Copy of Mykhel Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm